ಮೈಸೂರು: ನಿನ್ನೆ ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಯುವತಿಗೆ ನಕ್ಸಲರ ಜೊತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಅಮೂಲ್ಯ “ಪಾಕಿಸ್ತಾನ ಜಿಂದಾಬಾದ್ ಘೋಷಣೆ” ಬಗ್ಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಸೂಕ್ತ ಶಿಕ್ಷೆಯಾಗಬೇಕು. ಇದರ ಹಿಂದೆ ಇರುವ ಸಂಘಟನೆಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದರು. ಇನ್ನು ತಪ್ಪು ಮಾಡಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು ಕೊನೆಯಾಗುವುದಿಲ್ಲ. ಸಂಘಟನೆಗಳನ್ನು ಸರಿಯಾಗಿ ತನಿಖೆಗೆ ಒಳಪಡಿಸಿದರೆ ಅವಳಿಗೆ ಈ ರೀತಿ ಪ್ರೇರಣೆ ಕೊಟ್ಟಿರುವುದು ಯಾರೆಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವಂತಹ ವ್ಯವಸ್ಥಿತ ಸಂಚು ಇದರ ಹಿಂದೆ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...








