ಮೈಸೂರು: ನಿನ್ನೆ ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಯುವತಿಗೆ ನಕ್ಸಲರ ಜೊತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಅಮೂಲ್ಯ “ಪಾಕಿಸ್ತಾನ ಜಿಂದಾಬಾದ್ ಘೋಷಣೆ” ಬಗ್ಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಸೂಕ್ತ ಶಿಕ್ಷೆಯಾಗಬೇಕು. ಇದರ ಹಿಂದೆ ಇರುವ ಸಂಘಟನೆಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದರು. ಇನ್ನು ತಪ್ಪು ಮಾಡಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು ಕೊನೆಯಾಗುವುದಿಲ್ಲ. ಸಂಘಟನೆಗಳನ್ನು ಸರಿಯಾಗಿ ತನಿಖೆಗೆ ಒಳಪಡಿಸಿದರೆ ಅವಳಿಗೆ ಈ ರೀತಿ ಪ್ರೇರಣೆ ಕೊಟ್ಟಿರುವುದು ಯಾರೆಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವಂತಹ ವ್ಯವಸ್ಥಿತ ಸಂಚು ಇದರ ಹಿಂದೆ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ
ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...








