ಮಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಕೆಲ ಸಚಿವರ ವಿರುದ್ಧ ಕೊರೊನಾ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ಮೇಲೆ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಭ್ರಷ್ಟಾಚಾರದ ಆರೋಪ ಮಾಡಿದವರ ಹಿನ್ನಲೆಯನ್ನು ಮೊದಲು ಗಮನಿಸಬೇಕು ಎಂದು ಪರೋಕ್ಷವಾಗಿ ಡಿಕೆಶಿಗೆ ಕುಟುಕಿದ್ದಾರೆ.
ಸರ್ಕಾರದ ಐವರು ಸಚಿವರು ಕೊರೊನಾ ಕಿಟ್ ಖರೀದಿ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳೂ ಕಾಂಗ್ರೆಸ್ನ್ನು ಚರ್ಚೆಗೆ ಅಹ್ವಾನಿಸಿದ್ದಾರೆ. ಹೀಗಿದ್ದರೂ ಭ್ರಷ್ಟಾಚಾರದ ಆರೋಪ ಮಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬೇಲ್ ನಲ್ಲಿದ್ದಾರೆ. ಮಾಜಿ ಅಧ್ಯಕ್ಷರೂ ಬೇಲ್ ಮೇಲೆ ಹೊರಗಡೆ ಇದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರೂ ಬೇಲ್ನಲ್ಲೇ ಇದ್ದಾರೆ. ಅವರ ಕೇಸ್ಗಳ ಹಿನ್ನಲೆ ಗಮನಿಸಿದ್ರೆ ಗೊತ್ತಾಗುತ್ತದೆ ಎಂದು ಸೋನಿಯಾಗಾಂಧಿ, ರಾಹುಲ್ಗಾಂಧಿ ಹಾಗೂ ಡಿ.ಕೆ ಶಿವಕುಮಾರ್ ವಿರುದ್ಧ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ
ಜಾಮ್ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...








