ರಾಜೀನಾಮೆ ಕೊಟ್ಟು ಮನೆಗೆ ಹೋಗಿ – ಸುಧಾಕರ್ ವಿರುದ್ಧ ರೇಣುಕಾಚಾರ್ಯ ಕಿಡಿ
ದಾವಣಗೆರೆ : ಚಾಮರಾಜನಗರ ಆಸ್ಪತ್ರೆ ದುರಂತ, ಬಿಬಿಎಂಪಿ ಬೆಡ್ ಸಿಗದ ಪ್ರಕರಣ ಸಂಬಂಧ ಶಾಸಕ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಕೆ ಸುಧಾಕರ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಕೆಲ ಸಚಿವರ ತಮ್ಮ ಸ್ವಂತ ಕೆಲಸದಲ್ಲಿ, ಐಷಾರಾಮಿ ಜೀವನದಲ್ಲಿ ಬ್ಯುಸಿ ಇರ್ತಾರೆ. ಆದರೆ ಜನರನ್ನ ರಕ್ಷಣೆ ಮಾಡುವ ಕೆಲಸ ಆಗ್ತಾ ಇಲ್ಲ. ಕೆಲಸ ಮಾಡೋಕೆ ಆಗದೆ ಇದ್ದರೆ ಗೌರವಯುತವಾಗಿ ಮನೆಗೆ ಹೋಗಿ ಎಂದು ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿರುವ ಅವರು ಈ ರೀತಿ ಕೆಲಸ ಮಾಡೋಕಾ ಇವರು ಎರಡು ಹುದ್ದೇ ಪಡೆದಿದ್ದು. ಪ್ರಧಾನಿ ಮೋದಿ., ಬಿಎಸ್ ಯಡಿಯೂರಪ್ಪ ಅವರು ಹಗಲಿರುಳು ಕೆಲಸ ಮಾಡುತಿದ್ದಾರೆ. ಇವರಿಗೇನಾಗಿದೆ. ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಗ್ರಹಿಸಿದ್ದಾರೆ.
ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.