ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case)ಕ್ಕೆ ಸಂಬಂಧಿಸಿದಂತೆ ಈಗಾಗಲೇ 17 ಜನ ಆರೋಪಿಗಳು ಜೈಲು ಪಾಲಾಗಿದ್ದಾರೆ. ಪೊಲೀಸರು ಪ್ರಕರಣದ ತನಿಖೆಯನ್ನು ಬಹುತೇಕ ಮುಗಿಸಿದ್ದು, ಇಂದು ಅಥವಾ ನಾಳೆ ಚಾರ್ಜ್ಶೀಟ್ (Charge Sheet) ಕೋರ್ಟ್ಗೆ ಸಲ್ಲಿಕೆಯಾಗಬಹುದು ಎನ್ನಲಾಗುತ್ತಿದೆ.
ಎಸ್ ಐಟಿ ಪೊಲೀಸರು ಪ್ರಕರಣದ ಚಾರ್ಜ್ಶೀಟ್ ಪೂರ್ಣಗೊಳಿಸುತ್ತಿದ್ದಾರೆ. ಆರೋಪ ಪಟ್ಟಿಯನ್ನು ಎರಡ್ಮೂರು ಬಾರಿ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೆಡ್ ಆಫ್ ದಿ ಚಾರ್ಜ್ಶೀಟ್ ಹೇಗಿರಬೇಕು? ಪ್ರಕರಣದಲ್ಲಿನ ಸಾಕ್ಷಿಗಳ ಹೇಳಿಕೆ ಎಲ್ಲಿ ಹಾಕಬೇಕು? ಡಿಜಿಟಲ್ ಸಾಕ್ಷ್ಯಗಳನ್ನು (Digital Evidence) ಹೇಗೆ ನಮೂದಿಸಬೇಕು? ಎಂಬೆಲ್ಲ ಅಶಂಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಖುದ್ದು ಚಾರ್ಜ್ಶೀಟ್ ಡ್ರಾಫ್ಟ್ ಕಾಪಿ ಮೇಲೆ ನಿಗಾ ಇಟ್ಟಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಚಾರ್ಜ್ ಶೀಟ್ ಸಲ್ಲಿಕೆಯಾಗಬಹುದು.