ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ.
ಪ್ರದೋಷ್ನನ್ನು ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಕುರಿತು ನಿನ್ನೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ನಟ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪ್ರದೋಷ್ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ವಿಚಾರದಲ್ಲಿ ಯಾವುದೇ ಮುಂದಿನ ಕ್ರಮ ಕೈಗೊಳ್ಳಬಾರದು ಎಂದು ದರ್ಶನ್ ಪರ ವಕೀಲರು ಮನವಿ ಸಲ್ಲಿಸಿದರು.
ವಾದವನ್ನು ಪರಿಗಣಿಸಿದ ನ್ಯಾಯಾಲಯ, ಅರ್ಜಿಯ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಿ ಆದೇಶಿಸಿದೆ. ಪ್ರಕರಣದ ಮುಂದಿನ ಕಾನೂನು ಬೆಳವಣಿಗೆಗಳ ಮೇಲೆ ಇದೀಗ ಗಮನ ನೆಟ್ಟಿದೆ.








