ಬೆಳಗಾವಿ: ಬೆಳಗಾವಿ, ವಿಜಯಪುರ ಹಾಗೂ ಗದಗ ಜಿಲ್ಲೆಗಳಲ್ಲಿ ಮಳೆಯಿಂದ ಉಂಟಾಗಿರುವ ನೆರೆ ಪರಿಸ್ಥಿತಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸುತ್ತೇನೆ. ಸಮೀಕ್ಷೆ ಬಳಿಕ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ವೈಮಾನಿಕ ಸಮೀಕ್ಷೆ ನಡೆಸಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಚಿವರು, ಸಂಸದರು ಹಾಗೂ ಶಾಸಕರ ಸಭೆ ನಡೆಸಿದ ಸಿಎಂ ಯಡಿಯೂರಪ್ಪ, ನೆರೆಯಿಂದ ಆದ ಹಾನಿಯ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಯಡಿಯೂರಪ್ಪ, ಪ್ರವಾಹದಿಂದ ಆದ ನಷ್ಟದ ಬಗ್ಗೆ ತಕ್ಷಣವೇ ಅಂದಾಜು ಮಾಡಲು ಸಾಧ್ಯವಿಲ್ಲ. ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವೈಮಾನಿಕ ಸಮೀಕ್ಷೆಯಲ್ಲಿ ವಾಸ್ತವಿಕ ಪರಿಸ್ಥಿತಿ ಬಗ್ಗೆ ಖುದ್ದು ಪರಿಶೀಲನೆ ನಡೆಸುತ್ತೇನೆ. ಬಳಿಕ ಅಧಿಕಾರಿಗಳು ನೀಡುವ ವರದಿ ಬಗ್ಗೆ ಚರ್ಚಿಸಿ ರಾಜ್ಯಕ್ಕೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ನೆರೆಯಿಂದ ಹಾನಿಗೊಳಗಾದ ರೈತರು ಹಾಗೂ ಸಂತ್ರಸ್ಥರಿಗೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ಕೊರೊನಾದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಒಂದೆರಡು ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹೀಗಾಗಿ ಪರಿಹಾರ ಕಾರ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಯಡಿಯೂರಪ್ಪ ಭರವಸೆ ನೀಡಿದರು.
ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ
ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಮಾರ್ಚ್ 16ರಂದು ಮತದಾನ ನಡೆಯಲಿದೆ. ಒಟ್ಟು 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ...








