ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಗೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಕಲ್ಪಿಸುವಂತೆ ಸಿಎಂ ಸಿದ್ದರಾಮಯ್ಯನವರಗೆ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಕುಮಾರ ಬಂಗಾರಪ್ಪ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿದ್ರು.
ಕರ್ನಾಟಕದಲ್ಲಿ ಕ್ರೀಡಾ ಕ್ಷೇತ್ರಕ್ಕೆ, ವಿಶೇಷವಾಗಿ ಬ್ಯಾಡ್ಮಿಂಟನ್ ಕ್ರೀಡೆಯ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಸರ್ಕಾರ ನೀಡುತ್ತಿರುವ ಮಹತ್ವದ ಬೆಂಬಲ ಶ್ಲಾಘನೀಯವಾಗಿದೆ. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಳೆದ ಏಳು ದಶಕಗಳಿಂದ ಸಾವಿರಾರು ಪ್ರತಿಭಾವಂತ ಆಟಗಾರರನ್ನು ರೂಪಿಸಿ, ದೇಶ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದೆ. ಪದ್ಮಶ್ರೀ ಪ್ರಕಾಶ್ ಪಡುಕೋಣೆ, ಲಕ್ಷ್ಯ ಸೇನ್ ಸೇರಿದಂತೆ ಅನೇಕ ಶ್ರೇಷ್ಠ ಆಟಗಾರರು ಇದರ ಸಾಕ್ಷಿ.
ಇಂದಿನ ಸ್ಪರ್ಧಾತ್ಮಕ ಕ್ರೀಡಾ ಯುಗದಲ್ಲಿ ನಮ್ಮ ಯುವ ಆಟಗಾರರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಅತ್ಯಾಧುನಿಕ ಮೂಲಸೌಕರ್ಯ, ವೈಜ್ಞಾನಿಕ ತರಬೇತಿ ಮತ್ತು ಸಮಗ್ರ ಬೆಂಬಲ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ತನ್ನ ಮೂಲಸೌಕರ್ಯ ವಿಸ್ತರಣೆ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಹಾಗೂ ತರಬೇತಿ ಕೇಂದ್ರಗಳ ಸ್ಥಾಪನೆ, ಜೊತೆಗೆ ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳ ಪ್ರತಿಭೆಗಳ ಉತ್ತೇಜನಕ್ಕೆ ಸರ್ಕಾರದ ಸಹಕಾರವನ್ನು ನಮ್ಮ ತಂಡದವರ ಜೊತೆಗೆ ವಿನಮ್ರವಾಗಿ ಮನವಿ ಮಾಡಿದೆ ಎಂದು ಕುಮಾರ್ ಬಂಗಾರಪ್ಪ ತಿಳಿಸಿದ್ರು.
ಕÀರ್ನಾಟಕದ ಪ್ರತಿಯೊಂದು ಮೂಲೆಯಿಂದ ಪ್ರತಿಭೆಗಳು ಹೊರಹೊಮ್ಮಿ, ರಾಜ್ಯವು ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರಕ್ಕೇರಲಿ ಎಂಬುದು ನಮ್ಮ ಸಂಕಲ್ಪವಾಗಿದೆ ಎಂದರು.
ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ
ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...








