ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಅಸಮಾಧಾನ: ಹೊರ ಬರಲು ನಿರ್ಧರಿಸಿದ ಟ್ರಂಪ್

ಅಧಿಕಾರಕ್ಕೂ ಮುನ್ನವೇ ಹಲವು ನಿರ್ಧಾರ ಕೈಗೊಂಡ ಡೊನಾಲ್ಡ್ ಟ್ರಂಪ್

Author2 by Author2
December 31, 2024
in International, Politics, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಅಮೆರಿಕದ (America) ನಿಯೋಜಿತ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್‌ ಟ್ರಂಪ್‌ (Donald Trump) ಪನಾಮ ಕಾಲುವೆ ವಿಚಾರದಲ್ಲಿ ಚೀನಾವನ್ನು ಎಳೆದು ತಂದಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾರಕ್ಕೂ ಟ್ರಂಪ್‌ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ತಿಂಗಳು ಶ್ವೇತಭವನದಲ್ಲಿ ಟ್ರಂಪ್‌ ತಮ್ಮ 2ನೇ ಅವಧಿ ಪ್ರಾರಂಭಿಸಲಿದ್ದಾರೆ. ಈ ವೇಳೆ ಹಲವು ನಿರ್ಧಾರಗಳನ್ನು ಅವರು ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆಯುವುದೂ ಒಂದಾಗಿದೆ. ಟ್ರಂಪ್‌ ತಮ್ಮ ಮೊದಲ ಅವಧಿಯಲ್ಲೂ ಈ ನಿರ್ಧಾರ ಪ್ರಕಟಿಸಿದ್ದರು. ಈಗ ಸಾಕಾರಗೊಳಿಸಲು ಮುಂದಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಚೀನಾ ಮಾತನ್ನು ಕೇಳುತ್ತಿದೆ. ಅದರ ತಪ್ಪುಗಳನ್ನು ಮುಚ್ಚಿಡುತ್ತಿದೆ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿರುವ ಸಹಾಯಧನ ನಿಲ್ಲಿಸಲು ಟ್ರಂಪ್‌ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

Related posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026
ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

June 24, 2026

ಚೀನಾದಿಂದಾಗಿ ಕೋವಿಡ್ ಪ್ರಪಂಚದಾದ್ಯಂತ ಹರಡಿತ್ತು. ಇದು ತಿಳಿದಿದ್ದರೂ ಡಬ್ಲ್ಯೂಹೆಚ್‌ಓ ಯಾವುದೇ ಮುನ್ನೆಚ್ಚರಿಕೆ ತೆಗೆದುಕೊಳ್ಳಲಿಲ್ಲ. ಇದಕ್ಕೆ ಕಾರಣ ಚೀನಾ ಎಂದು ಗೊತ್ತಿದ್ದರೂ, ಚೀನಾ ಹೆಸರು ಪ್ರಸ್ತಾಪಿಸಲಿಲ್ಲ. WHO ಚೀನಾ ಕಡೆಗೆ ಹೆಚ್ಚು ಒಲವು ತೋರುತ್ತಿರುವುದರಿಂದ ಈಗಲೂ ವಿಶ್ವದ ಹಲವು ದೇಶಗಳನ್ನು ಅಸಮಾಧಾನಗೊಳಿಸಿದೆ. ಟ್ರಂಪ್‌ ಕೊರೊನಾವನ್ನು ʻಚೀನಾ ವೈರಸ್‌ʼ ಎಂದೇ ಕರೆದಿದ್ದರು. WHO ಸಮಯೋಚಿತ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ. ಹೀಗಾಗಿ ಈ ಕಠಿಣ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಆರಂಭದಿಂದಲೂ ಅಮೆರಿಕವೇ ವಿಶ್ವ ಆರೋಗ್ಯ ಸಂಸ್ಥೆಗೆ ಅತ್ಯಧಿಕ ಧನಸಹಾಯ ಮಾಡುತ್ತಾ ಬಂದಿತ್ತು. ವಿಶ್ವ ಆರೋಗ್ಯ ಸಂಸ್ಥೆ ಕಡಿಮೆ ದೇಣಿಗೆ ನೀಡುತ್ತಿದ್ದ ಚೀನಾ ಪರ ಇದೆ, ಅದರ ತಪ್ಪುಗಳನ್ನು ಮುಚ್ಚಿಡುತ್ತಿದೆ ಎಂಬುದು ಟ್ರಂಪ್‌ ಆರೋಪವಾಗಿತ್ತು.

ಜೋ ಬೈಡನ್‌ ಅವರು ಅಧಿಕಾರ ವಹಿಸಿಕೊಂಡಾಕ್ಷಣ, ಟ್ರಂಪ್‌ ಅವರ ನಿರ್ಧಾರವನ್ನು ಹಿಂತೆದುಕೊಂಡರು. ಅಮೆರಿಕವನ್ನು ಡಬ್ಲ್ಯೂಹೆಚ್‌ಒಗೆ ಪುನಃ ಸೇರಿಸಿಕೊಂಡರು. ಈಗ 2ನೇ ಅವಧಿಗೆ ನಿಯೋಜಿತ ಅಧ್ಯಕ್ಷರಾಗಿರುವ ಡೊನಾಲ್ಡ್‌ ಟ್ರಂಪ್‌ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆಯಲಿದ್ದಾರೆ ಎಂದು ಹೇಳಲಾಗಿದೆ.

Tags: americapoliticsTrumpWHO
ShareTweetSendShare
Join us on:

Related Posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

by Shwetha
June 24, 2026
0

ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಯೋಜನೆ ಬೆಂಬಲಿಸುವ ಶಾಸಕರಿಗೆ ನಿವೇಶನ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram