ಪ್ರಮೋದ್ ಮುತಾಲಿಕ್ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಭಂದ
ಉಡುಪಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಉಡುಪಿ ಜಿಲ್ಲೆಗೆ ಆಗಮಿಸದಂತೆ ನಿರ್ಭಂದ ಹೇರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಆದೇಶ ಹೊರಡಿಸಿದ್ದಾರೆ.
ನಾಳೆ ಶುಕ್ರವಾರ ಜಿಲ್ಲೆಯ ಗಂಗೊಳ್ಳಿಯಲ್ಲಿ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಮೋದ ಮುತಾಲಿಕ್ ಆಗಮಿಸಲಿದ್ದಾರೆ. ಈ ಸಂಬಂಧ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತ ಕಾಪಾಡುವ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಏ.15(ಶುಕ್ರವಾರ)ದಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಆಗಮನದ ಪ್ರವೇಶಕ್ಕೆ ಉಡುಪಿ ಜಿಲ್ಲಾದ್ಯಂತ ನಿರ್ಬಂಧ ಹೇರಲಾಗಿದೆ. ಸಿ.ಆರ್.ಪಿ.ಸಿ ಸೆಕ್ಷನ್ 133, 143 ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.








