ಕೊಡಗು: ಖದೀಮರು ನಿವೃತ್ತ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ಮಾಡಿದ್ದಲ್ಲದೇ, ದರೋಡೆಗೆ ಯತ್ನಿಸಿರುವ ಘಟನೆ ನಡೆದಿದೆ.
ಘಟನೆ ಮಡಿಕೇರಿ(Madikeri) ನಗರದ ಕಾಲೇಜು ರಸ್ತೆಯ ಐಡಿಬಿಐ ಬ್ಯಾಂಕ್ ಹತ್ತಿರ ನಡೆದಿದೆ. ನಿವೃತ್ತ ಪೊಲೀಸ್(Retired Police) ಅಧಿಕಾರಿ ಎಂ.ಸಿ.ಪ್ರಭಾಕರ್ ಅವರ ಮನೆಯಲ್ಲಿ ಪತ್ನಿ ಸಾಕಮ್ಮ ಎಂಬುವವರು ಮಾತ್ರ ಇದ್ದ ಸಂದರ್ಭದಲ್ಲಿ ಒಳ ನುಗ್ಗಿದ ದರೋಡೆಕೋರರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಸಾಕಮ್ಮ ಅವರ ಮೇಲೆ ದುಷ್ಕರ್ಮಿಗಳು ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಸಾಕಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸ್ಥಳಕ್ಕೆ ಮಡಿಕೇರಿ ನಗರ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.