ಬೆಂಗಳೂರು: ಸಾವಿರಾರು ಪತ್ರಿಕೋದ್ಯಮ ವಿದ್ಯಾರ್ಥಿಗಳ ಪಾಲಿನ ನೆಚ್ಚಿನ ಪ್ರಾಧ್ಯಾಪಕರಾಗಿದ್ದ ಬೆಂಗಳೂರು ವಿವಿಯ ನಿವೃತ್ತ ಪೆÇ್ರಫೆಸರ್ ಅಶೋಕ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.
ಬೆಂಗಳೂರಿನ ಮೈಕೋಲೇಔಟ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ನೇಣಿಗೆ ಶರಣಾಗಿರುವ ಅಶೋಕ್ ಕುಮಾರ್, ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್ನೋಟ್ ಬರೆದಿಟ್ಟು ಇಹಲೋಕದ ಪಯಣ ಮುಗಿಸಿದ್ದಾರೆ.
ಮೈಕೋಲೇಔಟ್ನ ಕೆಎಎಸ್ ಕಾಲೋನಿಯಲ್ಲಿ ವಾಸವಾಗಿದ್ದ ಅಶೋಕ್ ಕುಮಾರ್, ಮೂಲತಃ ಶಿವಮೊಗ್ಗದವರು. ಮೈಸೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವೃತ್ತಿ ಆರಂಭವಿಸಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು.
ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಅಶೋಕ್ ಕುಮಾರ್, ರಾತ್ರಿ 12 ಗಂಟೆವರೆಗೂ ಪತ್ನಿ ಜೊತೆಗೆ ಮಾತನಾಡುತ್ತಾ ಕುಳಿತಿದ್ದರು. ಆದರೆ, ಬೆಳಗಿನ ಜಾವ 7 ಗಂಟೆ ಸುಮಾರಿಗೆ ರೂಪ್ ಬಾಗಿಲು ತೆಗೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬೆಂದಿದೆ.
ಮೈಕೋಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಶೋಕ್ ಕುಮಾರ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಡೆತ್ ನೋಟ್ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ. ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಆಂತ್ಯಸಂಸ್ಕಾರ ನಡೆಸಲಾಯಿತು.
ಅಶೋಕ್ ಕುಮಾರ್ ಅವರಿಗೆ ಅನಾರೋಗ್ಯ ಅಥವಾ ಹಣಕಾಸಿನ ಯಾವುದೇ ಸಮಸ್ಯೆ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ಶಂಕೆ ವ್ಯಕ್ತಪಡಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel