ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ನನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್ಡಿ ರೇವಣ್ಣ (HD Revanna) ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ.
ಮಗ ಜೈಲು ಪಾಲಾದ ನಂತರ ಇದೇ ಮೊದಲ ಬಾರಿಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ (Parappana Agrahara) ಆಗಮಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ. ಇತ್ತೀಚೆಗಷ್ಟೇ ಭವಾನಿ ರೇವಣ್ಣ (Bhavani Revanna) ಮಗನನ್ನು ನೋಡಲು ಆಗಮಿಸಿದ್ದರು. ಇದರ ಬೆನ್ನಲ್ಲಿಯೇ ಈಗ ಹೆಚ್ಡಿ ರೇವಣ್ಣ ಆಗಮಿಸಿದ್ದಾರೆ.
ಮಂಗಳವಾರವಷ್ಟೇ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರೇವಣ್ಣ, ನಾನು ಸದ್ಯಕ್ಕೆ ಪ್ರಜ್ವಲ್ (Prajwal Revanna) ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೆ ಕೊಟ್ಟಿದ್ದೇನೆ ಎಂದು ಮಾತನಾಡಿಕೊಳ್ಳುತ್ತಾರೆ. ಹೀಗಾಗಿ ಹೋಗಲ್ಲ ಅಂದಿದ್ದರು. ಆದರೆ, ಈಗ ಅವರೇ ಮಗನನ್ನು ನೋಡಲು ಬಂದಿದ್ದಾರೆ.