ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚಿರಪರಿಚಿತ “ರಿಷಬ್ ಪಂತ್” ಅಪರಿಚಿತನಾಗಿಬಿಟ್ನಾ..?

Rishabh Pant: From Million-Dollar Marvel to IPL’s Most Forgettable Name?

Shwetha by Shwetha
May 19, 2025
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಚಿರಪರಿಚಿತ “ರಿಷಬ್ ಪಂತ್” ಅಪರಿಚಿತನಾಗಿಬಿಟ್ನಾ..?

ಈ ತರುಣನ ಬಗ್ಗೆ ತುಂಬಾ ನಿರೀಕ್ಷೆಗಳಿದ್ದವು. ಸುಮಾರು ಆರೇಳು ವರ್ಷಗಳ ಹಿಂದೆ ಟೀಮ್ ಇಂಡಿಯಾಗೆ ಎಂಟ್ರಿಯಾದಾಗ ಸಾಕಷ್ಟು ಭರವಸೆ ಮೂಡಿಸಿದ್ದ. ಹೊಡಿಬಡಿ ಆಟದ ಜೊತೆಗ ಎದ್ದೋಬಿದ್ದೋ ಬ್ಯಾಟಿಂಗ್ ಮಾಡುತ್ತಿದ್ದ ಈತ ಟೀಮ್ ಇಂಡಿಯಾದ ಫೈಂiÀiರ್ ಬ್ರಾಂಡ್ ಪ್ಲೇಯರ್ ಅಂತನೇ ಬಿಂಬಿಸಲಾಗಿತ್ತು. ತಾಂತ್ರಿಕತೆಗಿಂತಲೂ ಪವರ್ ಹಿಟ್ ಮೂಲಕವೇ ರನ್ ವೇಗ ಹೆಚ್ಚಿಸುತ್ತಿದ್ದ ಈತನನ್ನು ಸ್ಪೈಡರ್ ಮ್ಯಾನ್ ಅಂತ ಕೂಡ ಕರೆಯಲಾಗುತ್ತಿತ್ತು.
ಮುಖ್ಯವಾಗಿ ಟೆಸ್ಟ್ ಕ್ರಿಕೆಟ್‍ನಲ್ಲಿ ಹೊಡಿ ಬಡಿ ಆಟದ ಮೂಲಕವೇ ಆಸೀಸ್ ನೆಲದಲ್ಲಿ ಭಾರತಕ್ಕೆ ಐತಿಹಾಸಿಕ ಜಯ ತಂದು ಕೊಟ್ಟ ಹುಡುಗ ಅಪಘಾತದಲ್ಲಿ ಬದುಕಿ ಬಂದಿದ್ದೇ ಪವಾಡ. ಗಂಭೀರ ಗಾಯದ ಜೊತೆಗೆ ಕಣ್ಣೇದುರೇ ಹೊತ್ತಿ ಉರಿಯುತ್ತಿದ್ದ ಕಾರಿನಲ್ಲಿ ಬಚಾವ್ ಆಗಿದ್ದು ವಿಸ್ಮಯವೇ ಸರಿ. ಇನ್ನೇನು ಆತನ ಕ್ರಿಕೆಟ್ ಬದುಕು ಮುಗಿದೇ ಹೋಯ್ತು ಅಂದುಕೊಂಡಿದ್ದವರ ಎದುರಿನಲ್ಲೇ ಫಿನಿಕ್ಸ್‍ನಂತೆ ಮೇಲೆದ್ದು ಬಂದ ರೀತಿಯೇ ಅದ್ಭುತ. ಕೈ ಕಾಲಿಗೆ ರಾಡ್ ಹಾಕೊಂಡು, ಕುಂಟುತ್ತಾ, ನಿಧಾನವಾಗಿ ಹೆಜ್ಜೆಯನ್ನಿಟ್ಟಿದ್ದು ಕೂಡ ಮೈದಾನದಲ್ಲಿ. ತಾನು ಇಷ್ಟಪಟ್ಟು, ಕಷ್ಟಪಟ್ಟು ತನ್ನ ಉಸಿರೇ ಕ್ರಿಕೆಟ್ ಅಂತ ನಂಬಿಕೊಂಡಿದ್ದ ಈತ ಮತ್ತೆ ಟೀಮ್ ಇಂಡಿಯಾಗೆ ಎಂಟ್ರಿಯಾದಾಗ ಕ್ರಿಕೆಟ್ ಜಗತ್ತು ಅಚ್ಚರಿಯಿಂದ ನೋಡಿತ್ತು. ತನಗೆ ಅಪಘಾತವಾಗಿದೆ.. ಆದ್ರೂ ತನಗೆ ಏನು ಆಗಿಲ್ಲ ಎಂಬ ರೀತಿಯಲ್ಲಿ ಆಡುತ್ತಿದ್ದ ಈತ ಮತ್ತೆ ಕ್ರಿಕೆಟ್ ಲೋಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ. ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ 11ರ ಬಳಗದಲ್ಲಿ ಆಡಲು ಅವಕಾಶ ಸಿಗದಿದ್ರೂ ಇಂದಿಗೂ ಈತ ಜಾಹಿರಾತು ಲೋಕದ ಕಣ್ಮನಿ ಎಂಬುದರಲ್ಲಿ ಎರಡು ಮಾತಿಲ್ಲ.
ಅಷ್ಟೇ ಅಲ್ಲ, ಈ ಬಾರಿಯ ಐಪಿಎಲ್‍ನಲ್ಲಿ ಈತನನ್ನು ಖರೀದಿಸಲು ಫ್ರಾಂಚೈಸಿಗಳು ಮುಗಿಬಿದ್ದಿದ್ದವು. ಅಬ್ಬಾ.. ಕೋಟಿ ಕೋಟಿ ಲೆಕ್ಕದಲ್ಲಿ ಹರಾಜು ಕೂಗುತ್ತಿದ್ದ ಫ್ರಾಂಚೈಸಿಗಳು ಜಿದ್ದಿಗೆ ಬಿದ್ದವರಂತೆ ಈ ಆಟಗಾರರನ್ನು ತನ್ನ ತೆಕ್ಕೆಗೆ ಬೀಳಿಸಲು ಪ್ರಯತ್ನ ನಡೆಸಿದ್ದವು. ಕೊನೆಗೂ ಐತಿಹಾಸಿಕ ದಾಖಲೆಯ 27ಕೋಟಿಗೆ ಲಕ್ನೋ ಫ್ರಾಂಚೈಸಿ ಈತನನ್ನು ತನ್ನ ಬಲೆಯೊಳಗೆ ಬೀಳಿಸಿಕೊಂಡಿತ್ತು.
ಆದ್ರೆ ಲೆಕ್ನೋ ಫ್ರಾಂಚೈಸಿ ಖರೀದಿ ಮಾಡಿರುವುದು ಸ್ವತಃ ಆತನಿಗೆ ಇಷ್ಟ ಇರಲಿಲ್ಲ. ತಂಡದೊಳಗೆ ಫ್ರಾಂಚೈಸಿ ಮಾಲೀಕರ ಕೈವಾಡ ಜಾಸ್ತಿ ಇರುತ್ತೆ ಎಂಬುದು ಆತನಿಗೂ ಗೊತ್ತಿರದ ವಿಚಾರವೇನು ಅಲ್ಲ. ಈ ಹಿಂದೆ ಕೆ.ಎಲ್. ರಾಹುಲ್‍ಗೆ ಫ್ರಾಂಚೈಸಿ ಮಾಲೀಕ ಏನು ಮಾಡಿದ್ದರು ಎಂಬುದು ಆತನಿಗೂ ಚೆನ್ನಾಗಿಯೇ ಗೊತ್ತಿತ್ತು. ಹಾಗಾಗಿ ತನಗೆ ತಂಡದಲ್ಲಿ ಹೆಚ್ಚು ಫ್ರೀಡಂ ಇರಲ್ಲ ಎಂಬುದು ಮೊದಲೇ ಗೊತ್ತಿತ್ತು. ಈ ಮನಸ್ಥಿತಿಯಲ್ಲಿ ಆತ ಐಪಿಎಲ್‍ನಲ್ಲಿ ಆಡಬೇಕಾದ ಪರಿಸ್ಥಿತಿ ಇತ್ತು.
ಇತ್ತ ಐಪಿಎಲ್‍ನ ದುಬಾರಿ ಪ್ಲೇಯರ್ ಎಂಬ ಪಟ್ಟ…ಆತ್ತ ಫ್ರಾಂಚೈಸಿಯ ಅತೀಯಾದ ನಿರೀಕ್ಷೆ…. ಇನ್ನೊಂದೆಡೆ ಕೈಕೊಟ್ಟ ಫಾರ್ಮ್.. ತಂಡದ ಸಂಘಟಿತ ಆಟದ ವೈಫಲ್ಯ.. ನಾಯಕತ್ವದಲ್ಲಿನ ಕೆಲವೊಂದು ಎಡವಟ್ಟುಗಳು.. ತಂಡದ ಆಯ್ಕೆಯಲ್ಲಿ ಹೆಚ್ಚಿನ ಸ್ವಾತಂತ್ರ್ಯ ಇಲ್ಲದೇ ಇರುವುದರಿಂದ ಈತ ತನ್ನ ಐಪಿಎಲ್ ಕೆರಿಯರ್‍ನಲ್ಲೇ ಕೆಟ್ಟ ಪ್ರದರ್ಶನವನ್ನು ನೀಡಬೇಕಾಯ್ತು. ಕಳೆದ ಹತ್ತು ಪಂದ್ಯಗಳಲ್ಲಿ ಸರಾಸರಿ 12.80ರಂತೆ, 98.47 ಸ್ಟ್ರೈಕ್ ರೇಟ್‍ನಲ್ಲಿ ಕೇವಲ 128 ರನ್ ದಾಖಲಿಸಿದ್ದಾನೆ. ಇದರಲ್ಲಿ ಒಂದೇ ಒಂದು ಅರ್ಧಶತಕವಿದೆ. ಇನ್ನುಳಿದ ಎಲ್ಲಾ ಪಂದ್ಯಗಳಲ್ಲಿ 25ಕ್ಕಿಂತ ಕಮ್ಮಿ ರನ್ ಹೊಡೆದಿದ್ದಾನೆ. ಹೀಗಾಗಿ ಈ ಬಾರಿಯ ಐಪಿಎಲ್‍ನ ದುಬಾರಿ ಪ್ಲೇಯರ್ ವಸ್ರ್ಟ್ ಪ್ಲೇಯರ್ ಎಂಬ ಕಳಂಕ ಬಂದಿದೆ. ಅಷ್ಟೇ ಅಲ್ಲ ಕ್ರಿಕೆಟ್ ಪ್ರೇಮಿಗಳ ಬಾಯಲ್ಲಿ ನಲಿದಾಡುತ್ತಿದ್ದ ರಿಷಬ್ ಪಂತ್ ಎಂಬ ಹೆಸರು ಅಪರಿಚಿತವಾಗಿದೆ.

Related posts

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026
ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

February 11, 2026

ಸನತ್ ರೈ

ShareTweetSendShare
Join us on:

Related Posts

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

by Shwetha
February 11, 2026
0

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಮೈಸೂರು - ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram