ಟೀಂ ಇಂಡಿಯಾದ ವಿಕೆಟ್ ಕೀಪ್ ಬ್ಯಾಟ್ಸಮನ್ ರಿಷಭ್ ಪಂಥ್ ರಸ್ತೆ ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಶುಕ್ರವಾರ ಬೆಳಗ್ಗೆ ರೂರ್ಕಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಹಲವು ಪರೀಕ್ಷೆಗಳನ್ನ ನಡೆಸಲಾಗಿದೆ. ಮೆದುಳು ಮತ್ತು ಬೆನ್ನುಮೂಳೆಯ ಎಂಆರ್ಐ ಸ್ಕ್ಯಾನಿಂಗ್ ವರದಿಗಳು ಬಿಡುಗಡೆಯಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಬಹಿರಂಗಪಡಿಸಿದ್ದಾರೆ. ಮುಖ ಹಾಗೂ ದೇಹದ ಇತರ ಒಡೆದ ಗಾಯಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಊತ ಮತ್ತು ನೋವಿನ ಕಾರಣ ಪಾದ ಮತ್ತು ಮೊಣಕಾಲು ಸ್ಕ್ಯಾನಿಂಗ್ ಗಳನ್ನ ಶನಿವಾರ ಅಂದರೆ ಇಂದು ಮಾಡಲಾಗುವುದು ಎಂದು ಮ್ಯಾಕ್ಸ್ ಆಸ್ಪತ್ರೆಯ ವೈದ್ಯರು ವಿವರಿಸಿದ್ದಾರೆ
ಈ ನಡುವೆ ಬಿಸಿಸಿಐ ಪಂತ್ ಆರೋಗ್ಯದ ಬಗ್ಗೆ ಸತತವಾಗಿ ವಿಚಾರಿಸುತ್ತಿದೆ. ಪಂತ್ ಅವರ ಕುಟುಂಬ ಸದಸ್ಯರು ಮತ್ತು ವೈದ್ಯರು ದೂರವಾಣಿ ಮೂಲಕ ವಿವರಗಳನ್ನ ಕಲೆಹಾಕುತ್ತಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶುಕ್ರವಾರ ಹೇಳಿಕೆ ಬಿಡುಗಡೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಹೊಸ ವರ್ಷದ ಆರಂಭದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ T20I ಮತ್ತು ODI ಸರಣಿಗೆ ಪಂತ್ ಆಯ್ಕೆಯಾಗಿರಲಿಲ್ಲ. ಹಾಗಾಗಿ ವಿರಾಮವಿತ್ತು. ಈ ಹಿನ್ನಲೆಯಲ್ಲಿ ಪಂತ್ ಹೊಸ ವರ್ಷದ ಆರಂಭಕ್ಕೂ ಮುನ್ನ ಮನೆಗೆ ಹೋಗಿ ಕುಟುಂಬದವರಲ್ಲಿ ಅಚ್ಚರಿ ಮೂಡಿಸಲು ಪ್ಲಾನ್ ಮಾಡಿಕೊಂಡಿದ್ದ.
ಶುಕ್ರವಾರ ಬೆಳಗಿನ ಜಾವ 5.30ರ ಸುಮಾರಿಗೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಮಂಗಳೂರಿನಲ್ಲಿ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಮ್ಮ ಆಸ್ಪತ್ರೆಗೆ ಕರೆತಂದಾಗ ಪಂತ್ ಸಂಪೂರ್ಣ ಪ್ರಜ್ಞೆ ಹೊಂದಿದ್ದರು. ನಾನು ಅವನೊಂದಿಗೆ ಮಾತನಾಡಿದೆ. ರೂರ್ಕಿಯ ಸ್ಥಳೀಯ ಆಸ್ಪತ್ರೆಯಲ್ಲಿ ಪಂತ್ಗೆ ಚಿಕಿತ್ಸೆ ನೀಡಿದ ಡಾ.ಸುಶೀಲ್ ನಗರ್, ‘‘ಅಮ್ಮನಿಗೆ ಸರ್ಪ್ರೈಸ್ ಮಾಡಲು ನಮ್ಮ ಮನೆಗೆ ಬರುತ್ತೀರಾ ಎಂದು ಕೇಳಿದರು ಎಂದು ಡಾಕ್ಟರ್ ತಿಳಿಸಿದ್ದಾರೆ.
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಪಂತ್ ಅವರ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ತಮ್ಮ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. ಪಂತ್ ಉತ್ತರಾಖಂಡ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಕಟುಂಬದವರೊಂದಿಗೆ ಮಾತನಾಡಿ ಧೈರ್ಯ ಹೇಳಿದ್ದಾರೆ.
Rishabh pant: Pant MRI scanning report revealed… What did the doctor say ?