ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತದ ಟೆಸ್ಟ್ ಕ್ರಿಕೆಟ್‍ನ ಸಿಕ್ಸರ್ ಬಾಸ್ ರಿಷಬ್ ಪಂತ್..!

Rishabh Pant, six boss of India's test cricket..!

admin by admin
November 15, 2025
in Sports, ಕ್ರಿಕೆಟ್
Rishabh panth

Rishabh pant

Share on FacebookShare on TwitterShare on WhatsappShare on Telegram

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತದ ಪರ ರಿಷಬ್ ಪಂತ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಹೊಡಿಬಡಿ ಆಟದ ಜೊತೆಗೆ ಗಲ್ಲಿ ಕ್ರಿಕೆಟ್ ಆಟವನ್ನು ನೆನಪಿಸುವ ರಿಷಬ್ ಪಂತ್ ಜೀನಿಯಸ್ ಬ್ಯಾಟರ್ ಎಂಬುದರಲ್ಲಿ ಎರಡು ಮಾತಿಲ್ಲ. ಮೇಲ್ನೋಟಕ್ಕೆ ರಿಷಬ್ ಪಂತ್ ಬ್ಯಾಟಿಂಗ್ ಅನ್ನು ನೋಡುವಾಗ ಯಾವಾಗ ಔಟ್ ಆಗ್ತಾರೆ ಅನ್ನೋ ಆತಂಕವಂತೂ ಇದ್ದೇ ಇದೆ. ಯಾಕಂದ್ರೆ ಪಂತ್ ಅವರ ಬ್ಯಾಟಿಂಗ್ ಅನ್ನು ಶೈಲಿಯನ್ನು ಬೌಲರ್‍ಗಳಿಗೆ ಅರ್ಥಮಾಡಿಕೊಳ್ಳುವುದು ಕೂಡ ಅಷ್ಟೇ ಕಷ್ಟ. ಯಾವಾಗ ರಕ್ಷಣಾತ್ಮಕವಾಗಿ ಆಡ್ತಾರೆ.. ಯಾವಾಗ ಆಕ್ರಮಣಕಾರಿಯಾಗಿ ಆಡ್ತಾರೆ ಎಂಬುದು ಪಂತ್‍ಗೆ ಮಾತ್ರ ಗೊತ್ತು. ಯಾಕಂದ್ರೆ ರಿಷಬ್ ಪಂತ್‍ಗೆ ತನ್ನ ಬ್ಯಾಟಿಂಗ್ ಮೇಲೆ ನಂಬಿಕೆ ಇದೆ. ಅದೇ ಪಂತ್ ಅವರ ಸ್ಪೆಷಾಲಿಟಿ.
ಯಾರು ಎಷ್ಟೇ ಟೀಕೆ ಮಾಡಲಿ.. ಎಷ್ಟೇ ಸಲಹೆ, ಮಾರ್ಗದರ್ಶನವನ್ನು ನೀಡಲಿ.. ಅಥವಾ ಮೂರ್ಖ ಅಂತ ಜರೆದ್ರೂ ಪಂತ್ ಮಾತ್ರ ಬ್ಯಾಟಿಂಗ್ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳುತ್ತಿಲ್ಲ. ಏನಿದ್ರೂ ನೆಟ್ಸ್‍ನಲ್ಲಿ ತಾನು ಹೊಡೆಯುವ ಪ್ರತಿ ಹೊಡೆತಗಳನ್ನು ಸತತವಾಗಿ ಅಭ್ಯಾಸ ಮಾಡ್ತಾರೆ. ಎದುರಾಳಿ ಬೌಲರ್‍ಗಳ ಪ್ಲ್ಯಾನ್‍ಗಳನ್ನು ಉಲ್ಟಾಪಲ್ಟಾ ಮಾಡುವ ಕಲೆಯನ್ನು ಚೆನ್ನಾಗಿಯೇ ಕರಗತ ಮಾಡಿಕೊಳ್ಳುತ್ತಾರೆ. ಇದು ರಿಷಬ್ ಪಂತ್ ಅವರ ಸ್ಟ್ರೇಂತ್.
ಹಾಗೇ ನೋಡಿದ್ರೆ ರಿಷಬ್ ಪಂತ್ ಟೀಮ್ ಇಂಡಿಯಾದ ನಾಯಕನಾಗಬೇಕಿತ್ತು. ಆದ್ರೆ ಅದೃಷ್ಟ ಕೈ ಹಿಡಿಯಲಿಲ್ಲ. ಕೆಟ್ಟ ಫಾರ್ಮ್ ಸ್ವಲ್ಪ ಹಿನ್ನಡೆಯನ್ನುಂಟು ಮಾಡಿದ್ರೆ, ಭಯಾನಕ ಕಾರು ಅಪಘಾತ ಅವರ ಕ್ರಿಕೆಟ್ ಬದುಕಿಗೆ ದೊಡ್ಡ ಹೊಡೆತವನ್ನೇ ನೀಡಿತ್ತು. ಸಾವು ಬದುಕಿನ ಹೋರಾಟವನ್ನು ಗೆದ್ದು ಮತ್ತೆ ತಂಡವನ್ನು ಸೇರಿಕೊಂಡಿರುವುದು ಒಂದು ಪವಾಡವೇ ಸರಿ.
ಇನ್ನು ರಿಷಬ್ ಪಂತ್ ತಂಡದಲ್ಲಿದ್ರೆ ಅಲ್ಲಿ ಹಾಸ್ಯಕ್ಕೆ ಏನು ಕೊರತೆ ಇರಲ್ಲ. ವಿಕೆಟ್ ಹಿಂದುಗಡೆ ನಿಂತುಕೊಂಡು ಸದಾ ಮಾತನಾಡುತ್ತಲೇ ಆಟಗಾರರನ್ನು ಹುರಿದುಂಬಿಸ್ತಾ ಇರುತ್ತಾರೆ. ಹಾಗೇ ಪಂದ್ಯದ ಗತಿಯನ್ನು ಅರಿತುಕೊಳ್ಳುವ ಕಲೆ ಇದೆ. ಬೌಲರ್‍ಗಳನ್ನು ಬಳಸಿಕೊಳ್ಳುವ ತಂತ್ರಗಾರಿಕೆಯೂ ಇದೆ. ಫೀಲ್ಡಿಂಗ್ ಸೆಟ್ ಮಾಡುವ ಚಾಕಚಕ್ಯತೆಯೂ ಇದೆ. ಹೀಗಾಗಿಯೇ ಹಲವು ಬಾರಿ ತನ್ನ ಜಾಣ್ಮೆಯಿಂದಲೇ ಟೀಮ್ ಇಂಡಿಯಾಗೆ ಗೆಲುವನ್ನು ತಂದುಕೊಟ್ಟಿರುವುದಕ್ಕೆ ಹಲವು ನಿದರ್ಶನಗಳೂ ಇವೆ.
ಈ ನಡುವೆ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರಿಷಬ್ ಪಂತ್ ಭಾರತದ ಪರ ಹೊಸ ದಾಖಲೆಯನ್ನು ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ಸಿಕ್ಸರ್ ಹೊಡೆದ ದಾಖಲೆಯನ್ನು ಪಂತ್ ಅಧಿಕಾರಯುತವಾಗಿ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಹಿಂದೆ ಸೆಹ್ವಾಗ್ 90 ಸಿಕ್ಸರ್‍ಗಳನ್ನು ಬಾರಿಸಿ ಭಾರತದ ಪರ ಗರಿಷ್ಠ ಸಿಕ್ಸರ್ ಹೊಡೆದ ದಾಖಲೆಯನ್ನು ಬರೆದಿದ್ದರು.
ಸದ್ಯ 92 ಸಿಕ್ಸರ್‍ಗಳನ್ನು ಹೊಡೆದಿರುವ ಪಂತ್‍ಗೆ ವಿಶ್ವ ಟೆಸ್ಟ್ ಕ್ರಿಕೆಟ್‍ನಲ್ಲಿ ಗರಿಷ್ಠ ಸಿಕ್ಸರ್ ದಾಖಲೆಯನ್ನು ಮುರಿಯಲು ಸಾಕಷ್ಟು ಸಮಯ ಬೇಕಾಗುತ್ತದೆ. ಯಾಕಂದ್ರೆ ಈ ದಾಖಲೆ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ ಹೆಸರಿನಲ್ಲಿದೆ. 115 ಪಂದ್ಯಗಳಲ್ಲಿ ಬೆನ್ ಸ್ಟೋಕ್ಸ್ 136 ಸಿಕ್ಸರ್‍ಗಳನ್ನು ಬಾರಿಸಿದ್ದಾರೆ. ಅಲ್ಲದೆ ಸ್ಟೋಕ್ಸ್ ಇನ್ನೂ ಕೂಡ ಆಡ್ತಾ ಇದ್ದಾರೆ. ಹೀಗಾಗಿ ಪಂತ್ ಈ ದಾಖಲೆಯನ್ನು ಮುರಿಯಬೇಕಾದ್ರೆ ಸ್ಥಿರ ಪ್ರದರ್ಶನವನ್ನು ನೀಡಲೇಬೇಕು.
ಇನ್ನುಳಿದಂತೆ ನ್ಯೂಜಿಲೆಂಡ್‍ನ ಬ್ರೆಂಡನ್ ಮೆಕಲಂ 107, ಆಸ್ಟ್ರೇಲಿಯಾದ ಗಿಲ್‍ಕ್ರಿಸ್ಟ್ 100, ನ್ಯೂಜಿಲೆಂಡ್‍ನ ಟೀಮ್ ಸೌಥಿ 98, ವೆಸ್ಟ್ ಇಂಡೀಸ್‍ನ ಕ್ರಿಸ್ ಗೇಲ್ 98, ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ಅವರ ದಾಖಲೆಗಳು ಸದ್ಯದಲ್ಲೇ ಪಂತ್ ಅಳಿಸಿ ಹಾಕಲಿದ್ದಾರೆ.
ಒಟ್ಟಿನಲ್ಲಿ ಭಾರತದ ಟೆಸ್ಟ್ ಕ್ರಿಕೆಟ್‍ನ ಸಿಕ್ಸರ್ ಕಿಂಗ್ ಆಗಿ ರಿಷಬ್ ಪಂತ್ ಹೊರಹೊಮ್ಮಿದ್ದಾರೆ. ಮುಂದೊಂದು ದಿನ ವಿಶ್ವ ಟೆಸ್ಟ್ ಕ್ರಿಕೆಟ್‍ನ ಸಿಕ್ಸರ್ ಕಿಂಗ್ ಆಗ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

Source: Rishabh Pant, six boss of India's test cricket..!
Via: Rishabh Pant, six boss of India's test cricket..!
Tags: #most sixes in test criicket#rishab pantbcciteamindiatest crickettestcricket
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram