‘KGF’ ಆಯ್ತು… ಈಗ ನೌಕಾ ನೆಲೆ ಅಧಿಕಾರಿಯಾಗಲು ಹೊರಟಿದ್ದಾರಾ ‘ರಾಖಿ ಭಾಯ್’…!
ಬೆಂಗಳೂರು: KGF ಸಿನಿಮಾದ ನಂತರ ನ್ಯಾಷನಲ್ ಸ್ಟಾರ್ ಆಗಿ ಪರ ಭಾಷೆಗಳಲ್ಲೂ ಅಪಾರ ಅಭಿಮಾನಿಗಳನ್ನ ಗಳಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರು ಈಗ ನೌಕಾ ನೆಲೆ ಅಧಿಕಾರಿಯಾಗಲಿದ್ದಾರಾ..? ಹೀಗೊಂದು ಪ್ರಶ್ನೆ ಕಾಡ್ತಿದೆ… ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿರುವ ಫೋಟೋ ಈ ರೀತಿಯಾದ ಅನುಮಾನಗಳನ್ನ ಹುಟ್ಟುಹಾಕಿದೆ..
ಅಂದ್ಹಾಗೆ KGF ಚಾಪ್ಟರ್ 2 ಯಾವಾಗ ರಿಲೀಸ್ ಆಗುತ್ತೆ ಅಂತ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ.. ಲಾಕ್ ಡೌನ್ ಕೊರೊನಾ ಇರದೇ ಹೋಗಿದ್ರೆ ಸಿನಿಮಾ ಜುಲೈ 16 ಕ್ಕೆ ರಿಲೀಸ್ ಆಗಬೇಕಿತ್ತು.. ಆದ್ರೆ ಈಗ ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಪೋನ್ ಆಗುವ ಸಾಧ್ಯತೆಯಿದೆ.
ಅಂದ್ಹಾಗೆ ಯಶ್ ಮುಂದಿನ ಸಿನಿಮಾ ಯಾವುದು ಅನ್ನೋ ಗೊಂದಲಗಳು , ಪ್ರಶ್ನೆ ಕುತೂಹಲಗಳು ಸಹಜವಾಗಿಯೇ ಇದೆ.. ಈ ನಡುವೆ ಯಶ್ ಮುಂದಿನ ಸಿನಿಮಾದಲ್ಲಿ ನೌಕಾಧಿಕಾರಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಫೋಟೋ ಒಂದು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹೌದು ಯಶ್ ಅವರು ನಿರ್ದೇಶಕ ನರ್ತನ್ ಆ್ಯಕ್ಷನ್ ಕಟ್ ಹೇಳುತ್ತಿರುವ ಸಿನಿಮಾಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್ನಲ್ಲಿ ನಿರ್ಮಾಣವಾಗುತ್ತಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿರಲಿದೆ ಎನ್ನಲಾಗ್ತಿದೆ.
ಈ ಮುನ್ನ ನಟ ಡಾ.ಶಿವರಾಜ್ಕುಮಾರ್ ಹಾಗೂ ಶ್ರೀಮುರುಳಿ ಕಾಂಬಿನೇಷನ್ನಲ್ಲಿ ಮೂಡಿಬಂದಿದ್ದ ಮಫ್ತಿ ಸಿನಿಮಾಕ್ಕೆ ನರ್ತನ್ ನಿರ್ದೇಶನ ಮಾಡಿದ್ದರು. ಇದೀಗ್ ಯಶ್ ಮುಂದಿನ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಈ ಸಿನಿಮಾದಲ್ಲಿ ಖಡಕ್ ನೌಕಾ ನೆಲೆಯ ಅಧಿಕಾರಿ ಲುಕ್ನಲ್ಲಿ ಕಾಣಿಸಿಕೊಳ್ಳಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಫ್ಯಾನ್ ಮೇಡ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ೀ ಫೋಟೋ ಎಡಿಟ್ ಆಗಿದ್ರೂ ನೆಟ್ಟಿಗರು ರಾಖಿ ಖಡಕ್ ಲುಕ್ ಗೆ ಫಿದಾ ಆಗಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.