ವಿಕೃತ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ತಕ್ಷಣ ಬಂಧಿಸಿ : ಸಿದ್ದರಾಮಯ್ಯ
ಬೆಂಗಳೂರು : ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿರುವ ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ತಕ್ಷಣ ಬಂಧಿಸಿ, ಈತನಿಂದ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಕಕ್ಕಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು ತಲೆಮೇಲೆ ಹೊತ್ತುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ವಜಾ ಮಾಡಬೇಕು.
ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರಗಳನ್ನು ಕಲುಷಿತಗೊಳಿಸಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ಬೋದನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ. @CMofKarnataka ಅವರೇ, ಮೊದಲು ಇದನ್ನು ರದ್ದುಗೊಳಿಸಿ ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ. ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ.
6/7— Siddaramaiah (@siddaramaiah) June 10, 2022
ಪಠ್ಯಪುಸ್ತಕ ಪರಿಷ್ಕರಣೆಯಂತಹ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಟ್ರೋಲರ್ ಗೆ ಒಪ್ಪಿಸಿ, ಅವನ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿರುವ ರಾಡಿಗಳನ್ನು ಸಮರ್ಥಿಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಇದೇ ರೀತಿ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ.
https://twitter.com/siddaramaiah/status/1535125311326523392?s=20&t=5vCcLZwG3_FP79PqQWAwZA
ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ಬೋದನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊದಲು ಇದನ್ನು ರದ್ದುಗೊಳಿಸಿ ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ. ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ.
ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ಈ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ಧವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ನಿಮ್ಮ ತಲೆದಂಡ ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.