ಕೋವಿಡ್ ಕೇರ್ ಸೆಂಟರ್ ತೆರೆದ ‘ಖತರೋಂಕೆ ಕಿಲಾಡಿ’ ರೋಹಿತ್ ಶೆಟ್ಟಿ
ಮುಂಬೈ: ದೇಶದಲ್ಲಿ ಕೊರೊನಾ ಹೆಮ್ಮಾರಿಯಿಂದ ನಿತ್ಯ ಸಾವಿರಾರು ಜನರು ಪ್ರಾಣ ಕಳೆದುಕೊಳ್ತಿದ್ದಾರೆ. ಸ್ಯಾಂಡಲ್ ವುಡ್ , ಬಾಲಿವುಡ್ , ಕಾಲಿವುಡ್ , ಮಾಲಿವುಡ್ , ಟಾಲಿವುಡ್ ಸೇರಿ ಸಿನಿಮಾರಂಗದವರು, ಸೆಲೆಬ್ರಿಟಿಗಳು ತಾರೆಯರು ಕೂಡ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ.
ಇದೀಗ ಬಾಲಿವುಡ್ ಸಿನಿಮಾ ನಿರ್ದೇಶಕ ಹಾಗೂ ಖ್ಯಾತ ರಿಯಾಲಿಟಿ ಶೋ ಖತರೋಂಕೆ ಕಿಲಾಡಿಯ ಹೋಸ್ಟ್ ರೋಹಿತ್ ಶೆಟ್ಟಿ ಕೊರೊನಾ ರೋಗಿಗಳ ಆರೈಕೆ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.
ರೋಹಿತ್ ಶೆಟ್ಟಿ ಅವರು ಬಡ ರೋಗಿಗಳಿಗಾಗಿ ಉಚಿತ ಕೋವಿಡ್ ಕೇರ್ ಸೆಮಟರ್ ಸ್ಥಾಪನೆ ಮಾಡಿದ್ಧಾರೆ. ನವದೆಹಲಿಯಲ್ಲಿ ಆಕ್ಸಿಜನ್ ಸಹಿತ 25 ಬೆಡ್ಗಳ ಕೊರೊನಾ ಸೆಂಟರ್ ಸ್ಥಾಪಿಸಿದ್ದಾರೆ. ಆಸ್ಪತ್ರೆ ಬಿಲ್ ಕಟ್ಟಲಾಗದ ಬಡ ರೋಗಿಗಳಿಗೆ ಇಲ್ಲಿ ಬೆಡ್ ವ್ಯವಸ್ಥೆ ಮಾಡಲಾಗಿದೆ. ಊಟ ಸೇರಿದಂತೆ ಹಲವು ಸೌಲಭ್ಯಗಳನ್ನು ಉಚಿತವಾಗಿ ಮಾಡಲಾಗಿದೆ.