ಬೆಂಗಳೂರು: ಕರಾವಳಿ ಕಂಬಳಕ್ಕೆ (Karavali Kambala) ನಗರದ ಪ್ಯಾಲೆಸ್ ಗ್ರೌಂಡ್ ನಲ್ಲಿ (Palace Ground Bengaluru) ಆರಂಭವಾಗಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ಶನಿವಾರದಿಂದ ಎರಡು ದಿನಗಳ ಕಾಲ ಈ ಕಂಬಳ ಸ್ಪರ್ಧೆ ನಡೆಯುತ್ತಿದ್ದು, ಎಲ್ಲ ರೀತಿಯ ಸಿದ್ಧತೆಗಳು ನಡೆದಿವೆ. ಕಂಬಳ ವೀಕ್ಷಣೆಗೆ ಲಕ್ಷಾಂತರ ಜನ ಬರುವ ನಿರೀಕ್ಷೆಯಿದ್ದು, ಹೀಗಾಗಿ ಹೆಬ್ಬಾಳ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗುವ ನಿರೀಕ್ಷೆ ಇದೆ. ಸಂಚಾರದಲ್ಲಿ ಟ್ರಾಫಿಕ್ ಪೆÇಲೀಸರು ಒಂದಷ್ಟು ಬದಲಾವಣೆ ಮಾಡಿದ್ದಾರೆ.
ಕಂಬಳಕ್ಕೆ ಆಗಮಿಸುವ ಸಾರ್ವಜನಿಕರ ವಾಹನಗಳಿಗೆ ಕೃಷ್ಣವಿಹಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಸಿಬಿಡಿ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ಯೂಟರ್ನ್ ಪಡೆದು ಕೃಷ್ಣವಿಹಾರ್ ತಲುಪುವುದು. ಅರಮನೆ ರಸ್ತೆಯಿಂದ- ಮೈಸೂರು ಬ್ಯಾಂಕ್ ಸರ್ಕಲ್, ಎಂವಿ ಜಯರಾಮ ರಸ್ತೆ- ಅರಮನೆ ರಸ್ತೆ, ಬಳ್ಳಾರಿ ರಸ್ತೆ- ಮೇಖ್ರಿ ಸರ್ಕಲ್ ನಿಂದ ಎಲ್ ಆರ್ ಡಿಇ ಜಂಕ್ಷನ್ ವರೆಗೆ, ಕನ್ನಿಂಗ್ ಹ್ಯಾಮ್ ರಸ್ತೆ- ಬಾಳೆಕುಂದ್ರಿ ಸರ್ಕಲ್ ನಿಂದ ಲೀ ಮೆರಿಡಿಯನ್ ಅಂಡರ್ ಪಾಸ್, ಮಿಲ್ಲರ್ ರಸ್ತೆಯಿಂದ ಎಲ್ ಆರ್ ಡಿಇ ಜಂಕ್ಷನ್, ಜಯಮಹಲ್ ರಸ್ತೆ ಹಾಗೂ ಪ್ಯಾಲೇಸ್ ಸುತ್ತಮುತ್ತಲಿನ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಬೇಕಿದೆ. ಎಂವಿ ಜಯರಾಮ ರಸ್ತೆ, ವಸಂತನಗರ, ನಂದಿದುರ್ಗ ರಸ್ತೆ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ತರಳಬಾಳು ರಸ್ತೆ, ಸಿ ವಿ ರಾಮನ್ ರಸ್ತೆಯಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ನಿಷೇಧಿಸಲಾಗಿದೆ. ಈ ಮಾರ್ಗವಾಗಿ ಭಾರೀ ವಾಹನಗಳಿಗೆ ನಿಷೇಧ ಹೇರಲಾಗಿದೆ.