ಬೆಂಗಳೂರು: ರೌಡಿಶೀಟರ್ ಮಿಲ್ಟ್ರಿ ಸತೀಶ್ ಹತ್ಯೆ ಪ್ರಕರಣದ ಹಿಂದಿನ ಕಹಾನಿ ಹೊರ ಬಿದ್ದಿದೆ.
ರೌಡಿಶೀಟರ್ ಸತೀಶ್ ಕೊಲೆಗೆ ಜೈಲಿನಿಂದಲೇ ಸುಪಾರಿ ನೀಡಲಾಗಿತ್ತು ಎನ್ನಲಾಗಿದೆ. ಜೈಲಿನಿಂದಲೇ ರೌಡಿಶೀಟರ್ ಶಿವಕುಮಾರ್ ಬಬ್ಲಿ ಸುಪಾರಿ ನೀಡಿದ್ದ. ಪರಪ್ಪನ ಅಗ್ರಹಾರದಿಂದಲೇ ಮೂರು ತಿಂಗಳಿಂದ ಸ್ಕೆಚ್ ಮಾಡಿದ್ದ. ಅಲ್ಲದೇ, ವಿವೇಕನಗರದಲ್ಲಿ ಹೆಂಡತಿ ಜೊತೆ ಮಲಗಿದ್ದಾಗಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಹತ್ಯೆಗೆ ಮೀಸೆ ಚಿಗುರದ ಬಿಸಿ ರಕ್ತದ ಹುಡುಗರನ್ನೇ ಶಿವಕುಮಾರ್ ಸಿದ್ಧಪಡಿಸಿದ್ದ ಎನ್ನಲಾಗಿದೆ.
ಆಡುಗೋಡಿ, ವಿಲ್ಸನ್ ಗಾರ್ಡಸ್ನ ಮೂವರು ಯುವಕರನ್ನು ಗುರುತಿಸಿದ್ದ. ಜೈಲಲ್ಲಿ ಇದ್ದುಕೊಂಡೇ ಶಾರ್ಪ್ ಇರುವ ಹುಡುಗರನ್ನು ಗುರುತಿಸಿ ಮೂರು ಲಕ್ಷ ರೂ. ಅಡ್ವಾನ್ಸ್ ನೀಡಿ, ಮೂರು ತಿಂಗಳು ತರಬೇತಿ ಕೂಡ ಕೊಡಿಸಿದ್ದ ಎನ್ನಲಾಗಿದೆ. ಸೋಮಶೇಖರ್, ವಿಘ್ನೇಶ್ ಹಾಗೂ ಪ್ರವೀಣ್ ಎಂಬ ಹುಡುಗರು ಆಗಾಗ ಗಲಾಟೆ ಕೂಡ ಮಾಡುತ್ತಿದ್ದರು. ಅವರ ವಿರುದ್ಧ ಸುಮಾರು ಏಳೆಂಟು ಕೇಸ್ ಗಳು ಇದ್ದವು. ಹೀಗಾಗಿ ಇವರಿಗೆ 10 ಲಕ್ಷ ರೂ. ನಂತೆ 30 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು. ಅಲ್ಲದೇ, ಜಾಮೀನಿಂದ ಹಿಡಿದು ಕುಟುಂಬದ ನಿರ್ವಹಣೆಗೂ ಹಣ ಸಹಾಯ ಮಾಡುತ್ತೇವೆ ಅಂತ ಹೇಳಲಾಗಿತ್ತು ಎನ್ನಲಾಗಿದೆ.
ಹೀಗಾಗಿ ಈ ಹುಡುಗರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.