ಮಂಡ್ಯ: ಬಹುಕೋಟಿ ವಂಚಕಿ ಐಶ್ವರ್ಯಗೌಡ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗುತ್ತಿವೆ.
9 ಕೋಟಿ ರೂ. ಚಿನ್ನ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ವಂಚಕಿ ಐಶ್ವರ್ಯಾಗೌಡ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಸದ್ಯ ಐಶ್ವರ್ಯ ಗೌಡ (Aishwarya Gowda) ವಿರುದ್ಧ ಮತ್ತೆ ಸಾಲುಸಾಲು ದೂರುಗಳು ದಾಖಲಾಗುತ್ತಿವೆ. ಹೀಗಾಗಿ ಮಂಡ್ಯ ಎಸ್ಪಿ (Mandya SP) ಮಲ್ಲಿಕಾರ್ಜುನ ಬಾಲದಂಡಿ, ಐಶ್ವರ್ಯ ಗೌಡರಿಂದ ಏನಾದರೂ ಜನರು ವಂಚನೆಗೆ ಒಳಗಾಗಿದ್ದರೆ ಧೈರ್ಯದಿಂದ ದೂರು ನೀಡಿ ಎಂದು ಕೋರಿದ್ದಾರೆ.
ಮಾಜಿ ಸಂಸದ ಡಿ.ಕೆ.ಸುರೇಶ್ಗೆ ತಂಗಿ, ನಿಖಿಲ್ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ನನಗೆ ತುಂಬಾ ಪರಿಚಯ. ನಿಮಗೆ ಏನಾದರೂ ಕೆಲಸ ಆಗಬೇಕಿದ್ದರೆ ಹೇಳಿ ಎಂದು ಜನರನ್ನು ನಂಬಿಸಿ, ಚಾಲಾಕಿ ಐಶ್ವರ್ಯ ಗೌಡ ಜನರನ್ನು ವಂಚಿಸಿದ್ದಾಳೆ. ಹೀಗಾಗಿ ಮಂಡ್ಯದಲ್ಲೂ ಸಹ ಖತರ್ನಾಕ್ ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ವಿರುದ್ಧ ಪ್ರಕರಣ ದಾಖಲಾಗುತ್ತಿವೆ
ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...








