ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

847 ಕೋಟಿ ರೂಪಾಯಿಗಳ ತೆರಿಗೆ ಹಣ ನಷ್ಟ : ತಕ್ಷಣ ಮುಖ್ಯಮಂತ್ರಿಗಳ ಮಧ್ಯ ಪ್ರವೇಶಕ್ಕೆ ಆಪ್‌ ಆಗ್ರಹ

Mahesh M Dhandu by Mahesh M Dhandu
September 25, 2021
in Newsbeat, State, ರಾಜ್ಯ
BBMP saaksha tv
Share on FacebookShare on TwitterShare on WhatsappShare on Telegram

847 ಕೋಟಿ ರೂಪಾಯಿಗಳ ತೆರಿಗೆ ಹಣ ನಷ್ಟ – ತಕ್ಷಣ ಮುಖ್ಯಮಂತ್ರಿಗಳ ಮಧ್ಯ ಪ್ರವೇಶಕ್ಕೆ ಆಪ್‌ ಆಗ್ರಹ

ಬೆಂಗಳೂರು  : ಪ್ರತಿವರ್ಷ ಕೊಟ್ಯಾಂತರ ರೂಪಾಯಿಗಳಷ್ಟು ತೆರಿಗೆ ಹಣವನ್ನು ಉಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ ಅಳವಡಿಕೆ ಕಾರ್ಯಕ್ಕೆ ನಗರದ ಸಚಿವರು ಹಾಗೂ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಿದ್ದಾರೆ. ಇದರಿಂದ ಮೂರು ವರ್ಷಗಳಲ್ಲಿ ಸುಮಾರು 847 ಕೋಟಿ ರೂಪಾಯಿಗಳ ನಷ್ಟವಾಗಿದ್ದು, ಜನರ ತೆರಿಗೆ ಹಣ ಅನಗತ್ಯ ವ್ಯವಯವಾಗುವುದನ್ನು ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಆಗ್ರಹಿಸಿದ್ದಾರೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ನಗರದ ಪ್ರೆಸ್‌ಕ್ಲಬ್‌ ನಲ್ಲಿಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‌ಇಡಿ ಬಲ್ಬ್‌ ಗಳ ಅಳವಡಿಕೆಗೆ ಷಹಾಪೋರ್ಜಿ ಪಲ್ಲೊಂಜಿ, ಎಸ್‌ಎಮ್‌ಎಸ್‌ ಇನ್ಪ್ರಾಸ್ಟ್ರಕ್ಚರ್‌ ಮತ್ತು ಸಮುದ್ರ ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌ – ಈ ಮೂರು ಕಂಪನಿಗಳ ಕನ್ಸೋರ್ಷಿಯಮ್‌ ಗೆ 2018 ರಲ್ಲಿ ಟೆಂಡರ್‌ ನೀಡಲಾಗಿತ್ತು. ನಗರದಲ್ಲಿ ಬೀದಿ ದೀಪಗಳ ವಿದ್ಯುತ್‌ ಬಳಕೆಯ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಪಿಡಬ್ಲೂಸಿ ಸಂಸ್ಥೆಯನ್ನೂ ನೇಮಿಸಲಾಗಿತ್ತು. ಈ ಸಂಸ್ಥೆಯ ವತಿಯಿಂದ ನಡೆಸಲಾದ ಅಧ್ಯಯನದಲ್ಲಿ ಬಿಬಿಎಂಪಿ ಪ್ರತಿವರ್ಷ ತನ್ನ 4.85 ಲಕ್ಷ ಬೀದಿದೀಪಗಳ ನಿರ್ವಹಣೆಗೆ 240 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ. ಅದರಲ್ಲಿ ಸುಮಾರು 200 ಕೋಟಿ ರೂಪಾಯಿಗಳನ್ನು ಬೆಸ್ಕಾಂಗೆ ನೀಡಲಾಗುತ್ತಿದೆ. ವರ್ಷಪೂರ್ತಿ ಬೀದಿದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡಿದಲ್ಲಿ ಈ ವೆಚ್ಚ ಸುಮಾರು 330 ಕೋಟಿಗಳಿಗೆ ತಲುಪುತ್ತದೆ ಎನ್ನುವುದನ್ನ ಸ್ಥಳೀಯ ಆಡಳಿತ ಅಂದಾಜು ಕೂಡಾ ಮಾಡಿದೆ.

BBMP saaksha tv

ಜಾಗತಿಕ ಟೆಂಡರ್‌ ಕರೆಯುವ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವೆಚ್ಚವನ್ನು 233 ಕೋಟಿ ರೂಪಾಯಿಗಳಿಗೆ ಇಳಿಸುವ ಅಂದಾಜು ಮಾಡಲಾಗಿತ್ತು. ಈ ಉಳಿತಾಯ ಎಲ್‌ಇಡಿ ವಿದ್ಯುತ್‌ ದೀಪಗಳ ಅಳವಡಿಕೆಯಿಂದಾಗುವ ವಿದ್ಯುತ್‌ ಬಳಕೆಯಲ್ಲಿನ ಇಳಿಕೆಯಿಂದ ಸಾಧ್ಯವಾಗುತ್ತಿತ್ತು. ವಿದ್ಯುತ್‌ ಬಳಕೆಯ ಪ್ರಮಾಣ 290 ಕೋಟಿ ರೂಪಾಯಿಗಳಿಂದ 33 ಕೋಟಿ ರೂಪಾಯಿಗಳಿಗೆ ಇಳಿಕೆಯಾಗುತ್ತಿತ್ತು. 5 ಲಕ್ಷ ಎಲ್‌ಇಡಿ ವಿದ್ಯುತ್‌ ದೀಪಗಳನ್ನು ಅಳವಡಿಸಿ ಅವುಗಳ ಸಮರ್ಪಕ ನಿರ್ವಹಣೆಯಿಂದ ಶೇಕಡಾ 85.50% ರಷ್ಟು ವಿದ್ಯುತ್‌ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಈ ಕನ್ಸೋರ್ಷಿಯಮ್‌ ಸುಮಾರು 175 ಕೋಟಿ ರೂಪಾಯಿಗಳನ್ನು ಆದಾಯ ಪಡೆದುಕೊಳ್ಳುತ್ತಿತ್ತು.

ಆದರೆ, ಇಂತಹ ಉತ್ತಮ ಯೋಜನೆ ಕಾರ್ಯಗತಗೊಳಿಸುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದಕ್ಕೆ ನಮ್ಮ ರಾಜಕೀಯ ವ್ಯವಸ್ಥೆಯ ದುಷ್ಟ ಶಕ್ತಿಗಳ ಕಾರಣ. ಸೆಪ್ಟೆಂಬರ್‌ 9 ರಂದು ಯಶವಂತಪುರದಲ್ಲಿ ಎಲ್‌ ಇಡಿ ಬೀದಿದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ ನೌಕರರ ಮೇಲೆ ನಗರದ ಕೆಲ ಸಚಿವರು ಹಾಗೂ ಮಾಜಿ ಕಾರ್ಪೋರೇಟರ್‌ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಅಲ್ಲದೆ, ಪ್ರತಿನಿತ್ಯ ಅವರ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಶ್ವವಿಖ್ಯಾತ ಬೆಂಗಳೂರು ನಗರದಲ್ಲೇ ಇಂತಹ ಕ್ರಾಂತಿಕಾರಿ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ವಿಷಾಧನೀಯ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆ ಕಾರ್ಯಗತವಾಗಿದ್ದರೆ ಸುಮಾರು 847 ಕೋಟಿ ರೂಪಾಯಿಗಳ ಉಳಿತಾಯ ಆಗುತ್ತಿತ್ತು. ಆದರೆ ರಾಜಕೀಯ ಪ್ರತಿನಿಧಿಗಳ ದುಷ್ಟ ಮನಸ್ಥಿತಿಯಿಂದ ಇದು ಸಾಧ್ಯವಾಗಿಲ್ಲ. ಈ ನಷ್ಟವನ್ನು ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಆಡಳಿತ ನಡೆಸಿದ ಜೆಸಿಬಿ ಪಕ್ಷಗಳಿಂದ ವಸೂಲು ಮಾಡಿಕೊಳ್ಳಬೇಕು ಎಂದು ಮೋಹನ್‌ ದಾಸರಿ ಆಗ್ರಹಿಸಿದರು.

ನಗರದ ಜನತೆಯ ಕೋಟ್ಯಾಂತರ ರೂಪಾಯಿ ಹಣವನ್ನು ಉಳಿಸುವಂತಹ ಯೋಜನೆಗೆ ಅಡ್ಡಗಾಲು ಹಾಕುವ ಮೂಲಕ ರಾಜಕಾರಣಿಗಳು ಅಭಿವೃದ್ದಿಯ ಪರವಲ್ಲ ಎನ್ನುವ ಧೋರಣೆಯನ್ನು ತೋರಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಈ ಕೂಡಲೇ ಮಧ್ಯ ಪ್ರವೇಶಿಸಿಬೇಕು ಹಾಗೂ ಬೀದಿ ದೀಪಗಳ ಎಲ್‌ಇಡಿ ಅಳವಡಿಕೆಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು.

Tags: #Saaksha TVappBJPkarnataka
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram