ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜಕೀಯದ ಕನ್ನಡಕ ಹಾಕಿ ಆರ್‌ಎಸ್‌ಎಸ್ ಅನ್ನು ನೋಡಬೇಡಿ : ಸಿ.ಟಿ.ರವಿ

Mahesh M Dhandu by Mahesh M Dhandu
October 7, 2021
in Newsbeat, Politics, ರಾಜಕೀಯ
CT Ravi saaksha tv

CT Ravi saaksha tv

Share on FacebookShare on TwitterShare on WhatsappShare on Telegram

ರಾಜಕೀಯದ ಕನ್ನಡಕ ಹಾಕಿ ಆರ್‌ಎಸ್‌ಎಸ್ ಅನ್ನು ನೋಡಬೇಡಿ : ಸಿ.ಟಿ.ರವಿ

ಬೆಂಗಳೂರು : ರಾಜಕೀಯದ ಕನ್ನಡಕ ಹಾಕಿ ಆರ್‌ಎಸ್‌ಎಸ್ ಅನ್ನು ನೋಡಬೇಡಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026

ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗಳ ಬಗ್ಗೆ ಸರಣಿ ಟ್ವೀಟ್ ಗಳ ಮೂಲಕ ಸಿ.ಟಿ.ರವಿ ತಿರುಗೇಟು ಕೊಟ್ಟಿದ್ದಾರೆ.

ಸಿ.ಟಿ.ರವಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ..

ಭಾರತೀಯರನ್ನು ಭಾರತಕ್ಕಾಗಿ ಮಿಡಿಯುವಂತೆ ಮಾಡಬಲ್ಲ ಸಂಸ್ಥೆ ಎಂದೇ ಆರ್‌ಎಸ್‌ಎಸ್ ವಿಶ್ವ ಖ್ಯಾತಿಯಾಗಿದೆ. ಮನೆ-ಮಠ, ಸ್ವಂತ ಬದುಕು ಬಿಟ್ಟು ಸಂಘ ಬಯಸುತ್ತಿರುವ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ತ್ಯಾಗಿಗಳ ದೊಡ್ಡಪಡೆಯೇ ಇಲ್ಲಿದೆ.
ಸಮಾಜದಲ್ಲಿ ನಿಸ್ವಾರ್ಥವಾಗಿ ಕೆಲಸ ಮಾಡುತ್ತಿರುವ ಸಂಘವೇ ಎಂದರೆ ಆರ್‌ಎಸ್‌ಎಸ್.

“ಸರ್ವೇಭವಂತುಸುಖಿನಃ” ಎಂಬ ಶ್ಲೋಕದಂತೆ ಪ್ರತಿಯೊಬ್ಬ ಭಾರತೀಯ ಸುಖೀ ಜೀವನ ಅನುಭವಿಸಲಿ ಎಂಬ ಧ್ಯೇಯ ಸಂಘದ ಸಿದ್ದಾಂತ. ಕಳೆದ 96 ವರ್ಷಗಳಿಂದ ಸಂಘದ ಶಾಖೆಗಳಲ್ಲಿ ಕೇವಲ ದೇಶಭಕ್ತಿಯ ಸಂಸ್ಕಾರ ಕೊಡುವ ಕೆಲಸವಾಗುತ್ತಿದೆ. ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ, ಸಮಾಜ ಸುಧಾರಣೆ, ರಾಜಕೀಯ ಸೇರಿಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಆರ್‌ಎಸ್‌ಎಸ್‌ನಲ್ಲಿ ವ್ಯಕ್ತಿ ನಿರ್ಮಾಣದ ಜೊತೆ ರಾಷ್ಟ್ರ ನಿರ್ಮಾಣದ ಧ್ಯೇಯ ಇರುವ ಕಾರಣ ಇಂದು ನಮ್ಮ ಪ್ರಧಾನಿಗಳು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಸಂಘದ ಸ್ವಯಂ ಸೇವಕರು. ಉನ್ಮತ ಮಟ್ಟದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಶೂನ್ಯಮಟ್ಟಕ್ಕೆ ತಂದಿದ್ದಾರೆ. ಇದು ಯಾವುದರ ಪರಿಣಾಮ ಸನ್ಮಾನ್ಯ ಹೆಚ್ ಡಿ ಕುಮಾರಸ್ವಾಮಿ ಅವರೇ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಲಾತೂರ್ ಭೂಕಂಪ ಸಂದರ್ಭ, ಗುಜರಾತಿನ ಭೂಕಂಪದ ವೇಳೆ, ಒರಿಸ್ಸಾ ಚಂಡಮಾರುತದ ಸಂದರ್ಭ, ಸುನಾಮಿ ಅಪ್ಪಳಿಸಿದಾಗ, ಉತ್ತರಾಖಂಡದಲ್ಲಿ ಜಲ ಪ್ರಳಯವಾದಾಗ, ತಮಿಳುನಾಡಿನ ಪ್ರವಾಹವಾದಾಗ, ಕೊಡಗಿನಲ್ಲಿ ಭೂಕುಸಿತವಾದಾಗ ಆರ್‌ಎಸ್‌ಎಸ್ ಸೇವಕರು ನಿಸ್ವಾರ್ಥ ಸೇವೆ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಾರ್ಯಕರ್ತರು ಎಂದೂ ಪ್ರಚಾರ ಬಯಸಿದವರಲ್ಲ.

C T Ravi saaksha tv

ಅಸ್ಸಾಂನ ಗುಡ್ಡಗಾಡು ಪ್ರದೇಶದ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ ಕೊಡುವಲ್ಲಿ, ಅವರನ್ನು ನಾಗರೀಕತೆಯ ಕಡೆ ಹೆಜ್ಜೆ ಹಾಕುವಂತೆ ಮಾಡುವಲ್ಲಿ ಹಾಗೂ ಕರ್ನಾಟಕದ ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಸೇವೆ ಮೂಲಕವೇ ನಕ್ಸಲ್ ನೀತಿಗಳನ್ನು ನಿರ್ಮೂಲನೆ ಮಾಡಿದ ಆರ್‌ಎಸ್‌ಎಸ್ ಕಾರ್ಯವನ್ನು ಯಾರಾದರೂ ಮರೆಯಲು ಸಾಧ್ಯವೇ ಹೆಚ್‌ಡಿಕೆ ಅವರೇ ಎಂದು ಸಿಟಿ ರವಿ ಕುಟುಕಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಸ್ವಯಂಸೇವಕರು ತಮ್ಮ ಮನೆಯಲ್ಲಿದ್ದ ಅಕ್ಕಿ-ಬೇಳೆ, ಪಡಿತರಗಳನ್ನು ನಿರ್ಗತಿಕರಿಗೆ ಹಂಚುವ ಉದಾರತೆಯನ್ನು ಮೆರೆದರು. ಎಲ್ಲಿಯೂ ತಾವು ಮಾಡಿದ ಕಾರ್ಯವನ್ನು ತೊರಿಸಲಿಲ್ಲ. ದೇಶದಲ್ಲಿ ಯಾವುದೇ ಮೂಲೆಯಲ್ಲಿ ಜನ ಸಂಕಷ್ಟದಲ್ಲಿ ಇದ್ದಾರೆ ಎಂದರೆ ಸಾಕು ಸ್ವಯಂಸೇವಕರು ತಮ್ಮ ಪ್ರಾಣವನ್ನು ಪಣವಾಗಿಟ್ಟು ರಕ್ಷಿಸುತ್ತಾರೆ.

ಸ್ವದೇಶಿ ವಸ್ತು ಬಳಕೆ ಬಗ್ಗೆ ಜಾಗೃತಿಗಾಗಿ ಜಾಗರಣಾ ಮಂಚ್, ರೈತಪರ ಹೋರಾಟಕ್ಕೆ ಭಾರತೀಯ ಕಿಸಾನ್ ಸಂಘ, ಕಾರ್ಮಿಕರ ಹೋರಾಟಕ್ಕೆ ಭಾರತೀಯ ಮಜ್ದೂರ್ ಸಂಘ, ಕಾಡು ಜನರ ಹಿತದೃಷ್ಟಿಯಿಂದ ವನ್ಯವಾಸಿ ಕಲ್ಯಾಣ ಆಶ್ರಮಗಳಿದ್ದು, ಬಡವರ ನೆರವಿಗೆ ಆರ್‌ಎಸ್‌ಎಸ್ ಬದ್ಧವಾಗಿದೆ.

ಕುಮಾರಸ್ವಾಮಿ ಅವರಿಗೆ ಇನ್ನೂ ಸಂಘದ ಬಗ್ಗೆ ಅನುಮಾನಗಳಿದ್ದರೆ ನಿಮ್ಮ ತಂದೆ ದೇವೇಗೌಡರಲ್ಲಿ ಕೇಳಬೇಕು. ನೀವು ವಿರೋಧ ಪಕ್ಷದಲ್ಲಿರುವ ಕಾರಣ ರಾಜಕೀಯದ ಕನ್ನಡಕ ಹಾಕಿ ಆರ್‌ಎಸ್‌ಎಸ್ ಅನ್ನು ನೋಡಬೇಡಿ. ಸಂಘ ಯಾರನ್ನೂ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿಲ್ಲ. ನಮ್ಮ ಸಿದ್ದಾಂತ ಒಪ್ಪಿದರೆ ಆರ್‌ಎಸ್‌ಎಸ್ ನಿಮ್ಮನ್ನು ಸ್ವಾಗತಿಸುತ್ತದೆ ಎಂದು ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

Tags: #Saaksha TVBJPC T RaviH D KUMARASWAMY
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram