ರಾಯಚೂರು : ಕೊರೊನಾ ನಿಯಂತ್ರಣಕ್ಕಾಗಿ ದೇವರ ಮೊರೆ ಹೋದ ಜನ Raichur
ರಾಯಚೂರು : ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಜಿಲ್ಲೆಯ 776 ಗ್ರಾಮಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ ಹೆಗ್ಗಡದಿನ್ನಿಯ ಗ್ರಾಮಸ್ಥರು ಕೊರೊನಾ ನಿಯಂತ್ರಣಕ್ಕಾಗಿ ದೇವರ ಮೊರೆ ಹೋಗಿದ್ದಾರೆ.
ಗ್ರಾಮದ ದೇವಸ್ಥಾನದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆಯನ್ನ ಹಮ್ಮಿಕೊಂಡಿದ್ದಾರೆ.
16 ದಿನಗಳ ಕಾಲ ಗ್ರಾಮದ ಮಾರುತೇಶ್ವರ ದೇವರಿಗೆ ರುದ್ರಾಭಿಷೇಕ, ಊರ ಬುಡ್ಡೆ ಕಲ್ಲಿಗೆ ರುದ್ರಾಭಿಷೇಕ, ನಂದಾ ದೀಪ ಮಾರೆಮ್ಮ ದೇವಸ್ಥಾನದಲ್ಲಿ ಗ್ರಾಮಸ್ಥರಿಂದ ವಿಶೇಷ ಪೂಜೆ ನಡೆಯುತ್ತಿದೆ. ಒಂದೊಂದು ದಿನ ಒಂದೊಂದು ಕುಟುಂಬದವರು ಪೂಜೆ ,ಅಭಿಷೇಕ ಸಲ್ಲಿಸುತ್ತಿದ್ದಾರೆ.
ಈ ಗ್ರಾಮದಲ್ಲಿ ಎಂಟಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಎರಡು ಸಾವು ಸಂಭವಿಸಿವೆ.