ಪಾಕಿಸ್ತಾನದ ಪರ ಘೋಷಣೆ ಕೂಗಿ ಸದ್ಯ ಪೊಲೀಸರ ವಶದಲ್ಲಿರುವ ಅಮೂಲ್ಯ ಲಿಯೋನ್ ವಿರುದ್ಧ ಕೋಲಾರದ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಕಿಡಿಕಾರಿದ್ದಾರೆ. ಭಾರತದಲ್ಲಿದ್ದುಕೊಂಡು ಪಾಕಿಸ್ಥಾನ ಪರ ಘೋಷಣೆ ಕೂಗಿದ್ದು ಅಕ್ಷ್ಯಮ್ಯ ಅಪರಾಧ. ಈ ರೀತಿಯ ಘೋಷಣೆ ಕೂಗಿದ್ದರ ಹಿಂದೆ ಪಾಕಿಸ್ತಾನದ ಕೈವಾಡ ಇರಬಹುದು. ಹಣ ಆಸೆಗೆ ಈ ಯುವತಿ ಹೀಗೆ ಮಾಡಿದ್ದಾಳೆ ಅನಿಸುತ್ತಿದೆ ಎಂದು ಆರೋಪಿಸಿದರು. ಅಮೂಲ್ಯ ಲಿಯೋನ್ ಳ ತಂದೆಯೇ ಮಗಳಿಗೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ. ಇಂತಹ ದೇಶದ್ರೋಹ ಘೋಷಣೆ ಕೂಗುವವರನ್ನು ಗಡಿಪಾರು ಮಾಡಿದಾಗ ಮಾತ್ರ ಬುದ್ಧಿ ಬರುತ್ತದೆ ಎಂದರು. ವಿರೋಧ ಪಕ್ಷಗಳು ಪ್ರಧಾನಿ ಮೋಧಿಯನ್ನು ವಿರೋಧಿಸುವ ನಿಟ್ಟಿನಲ್ಲಿ ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ. ದೇಶದ್ರೋಹದ ಕಾನೂನಿನಲ್ಲಿ ತಿದ್ದುಪಡಿ ತಂದು ಕಠಿಣ ಶಿಕ್ಷೆ ವಿಧಿಸಿದಾಗ ಮಾತ್ರ ಇಂತಹವರಿಗೆ ಬುದ್ಧಿ ಬರುತ್ತದೆ ಎಂದರು.
ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...








