ಪಾಕಿಸ್ತಾನದ ಪರ ಘೋಷಣೆ ಕೂಗಿ ಸದ್ಯ ಪೊಲೀಸರ ವಶದಲ್ಲಿರುವ ಅಮೂಲ್ಯ ಲಿಯೋನ್ ವಿರುದ್ಧ ಕೋಲಾರದ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಕಿಡಿಕಾರಿದ್ದಾರೆ. ಭಾರತದಲ್ಲಿದ್ದುಕೊಂಡು ಪಾಕಿಸ್ಥಾನ ಪರ ಘೋಷಣೆ ಕೂಗಿದ್ದು ಅಕ್ಷ್ಯಮ್ಯ ಅಪರಾಧ. ಈ ರೀತಿಯ ಘೋಷಣೆ ಕೂಗಿದ್ದರ ಹಿಂದೆ ಪಾಕಿಸ್ತಾನದ ಕೈವಾಡ ಇರಬಹುದು. ಹಣ ಆಸೆಗೆ ಈ ಯುವತಿ ಹೀಗೆ ಮಾಡಿದ್ದಾಳೆ ಅನಿಸುತ್ತಿದೆ ಎಂದು ಆರೋಪಿಸಿದರು. ಅಮೂಲ್ಯ ಲಿಯೋನ್ ಳ ತಂದೆಯೇ ಮಗಳಿಗೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ. ಇಂತಹ ದೇಶದ್ರೋಹ ಘೋಷಣೆ ಕೂಗುವವರನ್ನು ಗಡಿಪಾರು ಮಾಡಿದಾಗ ಮಾತ್ರ ಬುದ್ಧಿ ಬರುತ್ತದೆ ಎಂದರು. ವಿರೋಧ ಪಕ್ಷಗಳು ಪ್ರಧಾನಿ ಮೋಧಿಯನ್ನು ವಿರೋಧಿಸುವ ನಿಟ್ಟಿನಲ್ಲಿ ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ. ದೇಶದ್ರೋಹದ ಕಾನೂನಿನಲ್ಲಿ ತಿದ್ದುಪಡಿ ತಂದು ಕಠಿಣ ಶಿಕ್ಷೆ ವಿಧಿಸಿದಾಗ ಮಾತ್ರ ಇಂತಹವರಿಗೆ ಬುದ್ಧಿ ಬರುತ್ತದೆ ಎಂದರು.
ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ
ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...








