ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರಾ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ.. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಬಹುದು. ಹತ್ತನೆಯ ದಿನ ‘ವಿಜಯ ದಶಮಿ’, ಈ ದಿನ ಶಮಿವೃಕ್ಷಕ್ಕೆ ಪೂಜೆ ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವುದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತಿದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನವಾಗಿದೆ..
ಶಾರದೀಯ ನವರಾತ್ರಿ 2022 ಯಾವಾಗ?
ಈ ವರ್ಷ, ಒಂಬತ್ತು ದಿನಗಳ ಕಾಲ ನಡೆಯುವ ನವರಾತ್ರಿ ಉತ್ಸವವು ಸೆಪ್ಟೆಂಬರ್ 26 ರಂದು ಪ್ರಾರಂಭವಾಗಿ ಅಕ್ಟೋಬರ್ 5 ರಂದು ಕೊನೆಗೊಳ್ಳಲಿದೆ.
ನವರಾತ್ರಿಯ ವೈಶಿಷ್ಟ್ಯಗಳು:
ನವರಾತ್ರಿ ಒಂಭತ್ತು ರಾತ್ರಿಗಳ ಸಮೂಹ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ಈಗ ನಾವು ಆಚರಿಸುವುದು ಶರನ್ನವರಾತ್ರಿ. ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿಯನ್ನು ವಿಶೇಷವಾಗಿ ಆಚರಿಸುವುದಲ್ಲದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. ಮಂಗಳವಾರದಿಂದ 9 ದಿನಗಳ ಕಾಲ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ.
ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ.ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರ ಸಂಹಾರ ಮಾಡಿದರೆ ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತದೆ. ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿರುತ್ತವೆ .
ಈ ವಿಧದಲ್ಲಿ 9 ದಿನಗಳ ಕಾಲ ಆದಿ ಶಕ್ತಿಗೆ ನವ ವಿಧದ ಪೂಜೆಯನ್ನು ಸಲ್ಲಿಸಲಾಗಯತ್ತದೆ.
* ಮೊದಲ ದಿನ ಅಂದರೆ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ.
* ಎರಡನೇ ದಿನ ಅಂದ್ರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ.
* ಮೂರನೇ ದಿನ ತದಿಗೆ – ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
* ನಾಲ್ಕನೇ ದಿನ ಚತುರ್ದಶಿ – ಶೈಲ ಜಾತಾ ದುರ್ಗಾಪೂಜಾ.
* ಐದನೇ ದಿನ ಪಂಚಮಿ – ದೂಮೃಹಾ ದುರ್ಗಾಪೂಜಾ.
* ಆರನೇ ದಿನ ಷಷ್ಠಿ – ಚಂಡ-ಮುಂಡ ಹಾ ದುರ್ಗಾಪೂಜಾ.
* ಏಳನೇ ದಿನ ಸಪ್ತಮಿ – ರಕ್ತ ಬೀಜ ದುರ್ಗಾಪೂಜಾ.
* ಎಂಟನೇ ದಿನ ಅಷ್ಟಮಿ – ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
* ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ.
* ಏಳನೇ ದಿನ ಅಂದರೆ ಸಪ್ತಮಿಯಿಂದ ತ್ರಿದಿನ ದುರ್ಗಾಪೂಜಾ ಎಂದೂ ಮಾಡುತ್ತಾರೆ.
ಅಂದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ಪೂಜೆ ಮಾಡುತ್ತಾರೆ. ನವರಾತ್ರಿಯಲ್ಲಿ ಸಪ್ತಮಿಗೆ ವಿಶೇಷ ಸ್ಥಾನವಿದೆ. ಸಪ್ತಮಿಯ ಮೂಲಾನಕ್ಷತ್ರದಂದು ಪುಸ್ತಕ, ಪವಿತ್ರಗ್ರಂಥಗಳನ್ನು, ಚಿನ್ನ, ಬೆಳ್ಳಿ ಪೂಜೆಗೆ ಆಯ್ಕೆ. ಹಾಗೂ ನವಮಿಯಂದು ಆಯುಧಗಳನ್ನು ಪೂಜಿಸಲು. ಅಂದೇ ಪುಸ್ತಕಗಳನ್ನಿಟ್ಟು ಪೂಜೆಗೆ ಸರಸ್ವತಿ ಪೂಜೆ ಎಂದೂ ಕರೆಯುತ್ತಾರೆ.
ನವರಾತ್ರಿ 2022 ಇತಿಹಾಸ:
ರಾಮನಿಂದ ರಾವಣನ ವಧೆಯಾಗಲು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು.
ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು.
ಹಾಗೂ
ನವರಾತ್ರಿಯು ರಾಕ್ಷಸ ಮಹಿಷಾಸುರನ ವಧೆ ಮತ್ತು ಕೆಡುಕಿನ ಮೇಲೆ ಒಳಿತಿನ ವಿಜಯವನ್ನು ಆಚರಿಸುತ್ತದೆ. ಬ್ರಹ್ಮದೇವನು ಮಹಿಷಾಸುರನಿಗೆ ಅವನ ಅಪಾರವಾದ ಸಮರ್ಪಣೆಯಿಂದಾಗಿ ಅಮರತ್ವದ ಉಡುಗೊರೆಯನ್ನು ನೀಡುವುದರೊಂದಿಗೆ ಕಥೆಯು ಪ್ರಾರಂಭವಾಗುತ್ತದೆ. ಆದಾಗ್ಯೂ, ವರವು ಒಂದು ಷರತ್ತಿನೊಂದಿಗೆ ಬಂದಿತು – ಅವನನ್ನು ಸೋಲಿಸಲು ಸಾಧ್ಯವಾಗುವ ಏಕೈಕ ವ್ಯಕ್ತಿ ಮಹಿಳೆ. ಯಾವುದೇ ಮಹಿಳೆ ತನ್ನನ್ನು ಸೋಲಿಸುವಷ್ಟು ಶಕ್ತಿಶಾಲಿ ಎಂದು ರಾಕ್ಷಸ ನಂಬಲಿಲ್ಲ ಮತ್ತು ಭೂಮಿಯ ಮೇಲಿನ ಜನರನ್ನು ಭಯಭೀತಗೊಳಿಸಲು ಪ್ರಾರಂಭಿಸಿತು. ದೇವರಿಗೆ ಅವನನ್ನು ತಡೆಯಲು ಸಾಧ್ಯವಾಗಲಿಲ್ಲ.
ಆದ್ದರಿಂದ, ಭಗವಾನ್ ಬ್ರಹ್ಮ, ಭಗವಾನ್ ವಿಷ್ಣು ಮತ್ತು ಶಿವನು ತಮ್ಮ ಶಕ್ತಿಯನ್ನು ಒಟ್ಟುಗೂಡಿಸಿ ಮಹಿಷಾಸುರನನ್ನು ನಾಶಮಾಡುವ ದುರ್ಗಾ ದೇವಿಯನ್ನು ಸೃಷ್ಟಿಸಿದರು. ಅವರು ಅವಳನ್ನು ಹಲವಾರು ಆಯುಧಗಳೊಂದಿಗೆ ಸಜ್ಜುಗೊಳಿಸಿದರು. ಮಾ ದುರ್ಗ ಮತ್ತು ಮಹಿಷಾಸುರ ನಡುವಿನ ಯುದ್ಧವು ಹತ್ತು ದಿನಗಳ ಕಾಲ ನಡೆಯಿತು. ಆದರೆ, ಕೊನೆಗೆ ಎಮ್ಮೆಯಾಗಿ ಬದಲಾದಾಗ, ದುರ್ಗಾ ಮಾತೆ ಅವನನ್ನು ಸೋಲಿಸಲು ಸಾಧ್ಯವಾಯಿತು.