ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಅಭಿಷೇಕಗಳನ್ನು, ಅರ್ಚನೆಗಳನ್ನು ಮಾಡಿಸುವುದು ಏಕೆ? ನಿಜವಾಗಿಯೂ ದೇವರಿಗೆ ಅರ್ಚನೆ, ಅಭಿಷೇಕ ಮಾಡಿಸಬೇಕೆ?

Shwetha by Shwetha
June 2, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಈ ಅಭಿಷೇಕಗಳನ್ನು, ಅರ್ಚನೆಗಳನ್ನು ಮಾಡಿಸುವುದು ಏಕೆ? ನಿಜವಾಗಿಯೂ ದೇವರಿಗೆ ಅರ್ಚನೆ, ಅಭಿಷೇಕ ಮಾಡಿಸಬೇಕೆ?

ದೈವಭಕ್ತಿ ಉಳ್ಳವರೆಲ್ಲರೂ ಮನದಲ್ಲಿ – ಮನೆಯಲ್ಲಿ ದೇವರನ್ನು ಪೂಜಿಸುತ್ತಾರೆ. ದೇವಾಲಯಗಳಿಗೂ ಹೋಗುತ್ತಾರೆ. ಲಕ್ಷಾರ್ಚನೆ, ಬಿಲ್ವಾರ್ಚನೆ, ಕುಂಕುಮಾರ್ಚನೆ, ಕ್ಷೀರಾಭಿಷೇಕ, ರುದ್ರಾಭಿಷೇಕ ಮಾಡಿಸುತ್ತಾರೆ. ದೇವರಿಗೆ ಬೆಣ್ಣೆ ಅಲಂಕಾರ, ಗೋಡಂಬಿ ಅಲಂಕಾರ, ಅರಿಶಿನ ಕುಂಕುಮ ಅಲಂಕಾರ, ಪುಷ್ಪಾಲಂಕಾರ ಮಾಡಿಸುತ್ತಾರೆ.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಅಭಿಷೇಕ, ಅರ್ಚನೆ ಎಂದರೇನು?ದೇವರಿಗೆ ಅದನ್ನು ಮಾಡುವುದು ಏಕೆ?

ಈ ಅಭಿಷೇಕಗಳನ್ನು, ಅರ್ಚನೆಗಳನ್ನು ಮಾಡಿಸುವುದು ಏಕೆ? ನಿಜವಾಗಿಯೂ ದೇವರಿಗೆ ಅರ್ಚನೆ, ಅಭಿಷೇಕ ಮಾಡಿಸಬೇಕೆ? ಎಂಬ ಪ್ರಶ್ನೆ ನಿಮ್ಮ ಮನದಲ್ಲೂ ಮೂಡಿರ ಬಹುದು. ಗುರು ಮೂಲ, ಋಷಿ ಮೂಲ, ದೈವ ಮೂಲ ಹುಡುಕ ಬಾರದು ಎಂಬ ಹಿರಿಯರ ಮಾತು ಈ ಬಗ್ಗೆ ಮುಂದಡಿ ಇಡಲು ಹಿಂಜರಿಯುವಂತೆ ಮಾಡಿರಲೂ ಬಹುದು.
Saakshatv #astrology importance of abhishekha and archane

ವೇದಕಾಲ : ಪರಬ್ರಹ್ಮ ಸೃಷ್ಟಿಯಾದ ವೇದಕಾಲದಲ್ಲಿ ಮೂರ್ತಿ ಪೂಜೆಯ ಪರಿಕಲ್ಪನೆಯೇ ಇರಲಿಲ್ಲವಂತೆ. ದೇವರನ್ನು ನಿರಾಕಾರ, ನಿರ್ಗುಣ ಎಂದು ಪೂಜಿಸುತ್ತಿದ್ದರು. ನಿರಾಕಾರ, ಆಕಾರ, ಸಾಕಾರ ಎಂದದ್ದು ಆಗಲೇ.

ಆನಂತರ ಅಂದರೆ 60 ಸಾವಿರ ವರ್ಷಗಳ ಹಿಂದೆ ವ್ಯಾಸ ಮಹರ್ಷಿಗಳು ವೇದಗಳನ್ನು ನಾಲ್ಕು ಭಾಗವಾಗಿ ಮಾಡಿದರು. ಆಚಾರ್ಯ ತ್ರಯರಾದ ಶ್ರೀ ಶಂಕರಾಚಾರ್ಯರು, ಮಧ್ವಾಚಾರ್ಯರು ಹಾಗೂ ರಾಮಾನುಜಾಚಾರ್ಯರು ಬದಲಾಗುತ್ತಿದ್ದ ಸನ್ನಿವೇಶಗಳಿಗೆ ಅನುಗುಣವಾಗಿ ಪಂಡಿತ – ಪಾಮರರಿಗೂ ಅರಿವು ನೀಡುವ ರೀತಿಯಲ್ಲಿ ಮೂರ್ತಿಪೂಜೆಯನ್ನು ಸಕ್ರಮಗೊಳಿಸಿದರು.

ಅಷ್ಟಾದಶ ಪುರಾಣಗಳಲ್ಲಿನ ಉಲ್ಲೇಖ, ಮಹಾಭಾರತ, ರಾಮಾಯಣಗಳಲ್ಲಿ ಬರುವ ಮೂರ್ತಿ ಪೂಜೆಯ ಕಲ್ಪನೆ ಹಾಗೂ ಭಾಗವತಗಳನ್ನನುಸರಿಸಿ ದೇವರ ಮೂರ್ತಿಗಳನ್ನು ಕಡೆಯಲಾಯಿತು. ರಾಮಾನುಜಾಚಾರ್ಯರು ಹಾಗೂ ಮಧ್ವಾಚಾರ್ಯರು ವಿಷ್ಣು ಮೂರ್ತಿಗಳ ಪೂಜೆಗೆ ಕಾರಣಾದರೆ, ಶಂಕರರು ಶಿವ ಹಾಗೂ ಶಕ್ತಿ ಮೂರ್ತಿಗಳ ಪ್ರತಿಷ್ಠಾಪನೆ ಮಾಡಿದರು.

ಕಲಿಯುಗದಲ್ಲಿ ಮನುಷ್ಯನ ಮನಸ್ಸು ಚಂಚಲವಾದ್ದರಿಂದ ಹಾಗೂ ದೇವರು ನಿರ್ವಿಕಾರ, ನಿರ್ಗುಣ ಎಂದರೆ ಆ ಸತ್ಯವನ್ನು ಅರಿಯಲಾರದ ಪಾಮರನಿಗೆ ಇದುವೇ ದೇವರು, ದೇವರು ಹೀಗಿದ್ದ ಎಂದು ತೋರಿಸಲು ಅಂದು ದೇವರ ಮೂರ್ತಿಗಳ ಪ್ರತಿಷ್ಠಾಪನೆ ಅನಿವಾರ್ಯವಾಗಿತ್ತು ಎನ್ನುತ್ತಾರೆ. ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಶಾಸ್ತ್ರೀಗಳು.

ಈ ಮೂರ್ತಿಗಳನ್ನು ಪೂಜಿಸಿ, ದೇವರನ್ನು ಮೆಚ್ಚಿಸಿ ಫಲ ಪಡೆಯಲು ಶೋಡಷೋಪಚಾರ (16 ಬಗೆಯ ಪೂಜೆ)ಗಳನ್ನು ವಿವರಿಸಲಾಯಿತು. ಆ ಪ್ರಕಾರವಾಗಿ ಧ್ಯಾನ, ಆಸನ, ಪಾದ್ಯ, ಅರ್ಘ್ಯ, ಆಚಮನ, ಸ್ನಾನ, ವಸ್ತ್ರ, ಉತ್ತರೀಯ, ಆಭರಣ, ಗಂಧ, ಮಂಗಳದ್ರವ್ಯ, ಪುಷ್ಪ, ಆರ್ಚನ, ದೂಪ-ದೀಪ-ನೀರಾಜನ, ನೈವೇದ್ಯ ಹಾಗೂ ಪ್ರಾರ್ಥನೆಗಳು ಅನುಷ್ಠಾನಕ್ಕೆ ಬಂದವು.

ಆಚಾರ್ಯರು ಈ ಒಂದೊಂದು ಪೂಜೆಯ ಕ್ರಮವನ್ನೂ ಜನಸಾಮಾನ್ಯರಿಗೂ ತಿಳಿಯುವಂತೆ ವಿವರಿಸಿ ಜಯಪ್ರಿಯಗೊಳಿಸಿದರು ಎನ್ನುತ್ತಾರೆ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಶಾಸ್ತ್ರೀಗಳು. ಸೂರ್ಯಾರಾಧನೆ, ಸೂರ್ಯ ನಮಸ್ಕಾರ, ಧ್ಯಾನ ಆಗಲೇ ಅಚರಣೆಗೆ ಬಂದದ್ದು. ದೇಹೋ ದೇವಾಲಯ ಪ್ರೋಕ್ತೋ ಜೀವೋ ದೇವಃ ಸನಾತನಃ ತ್ಯಜೇತ್‌ ನಿರ್ಮಾಲ್ಯಂಸೋ ಅಹಂ ಭಾವೇನ ಪೂಜಯೇತ್‌ ಎಂಬ ಉಲ್ಲೇಖವನ್ನೇ ಬಸವಣ್ಣನವರು ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಸವಯ್ಯ ಎಂದು ಶ್ರೀಸಾಮಾನ್ಯನಿಗೂ ತಿಳಿಯುವಂತೆ ವಿವರಿಸಿದರೆನ್ನುತ್ತಾರೆ ಅವರು.

ಆದರೆ, ದೇವರನ್ನು ಪೂಜಿಸುವಾಗ ಮನಸ್ಸು, ಪೂಜಾಸ್ಥಳ ಎಲ್ಲವೂ ಅಂತರ್‌ಶುದ್ಧಿ, ಬಹಿರ್‌ಶುದ್ಧಿಯಿಂದಿರಬೇಕು ಎಂಬ ಕಾರಣದಿಂದ ಸ್ನಾನ (ಶುದ್ಧೋದಕ) ರೂಢಿಗೆ ಬಂದಿದೆ. ನಾವು ನಮ್ಮ ಮಕ್ಕಳು ಮಾತು ಕೇಳದಿದ್ದಾಗ ಚಿನ್ನ, ರನ್ನ, ಬಂಗಾರಿ, ಮುದ್ದು ಎಂದು ಪುಸಲಾಯಿಸುವಂತೆಯೇ, ನಮ್ಮ ಕರೆಯನ್ನು ಕೇಳದ ದೇವರಿಗೆ ಹತ್ತಾರು ಹೆಸರುಗಳಿಂದ ಕರೆಯುವ ಮತ್ತು ‘ಕಲೌನಾಮ ಸಂಕೀರ್ತನೆ’(ಕಲಿಯುಗದಲ್ಲಿ ನಾಮ ಸಂಕೀರ್ತನೆಯಿಂದ ಪುರುಷಾರ್ಥ ಸಿದ್ಧಿ) ಮೂಲಕ ದೇವರನ್ನು ಒಲಿಸಿಕೊಳ್ಳುವ ಪ್ರಯತ್ನವಾಗಿ ಸಹಸ್ರ ನಾಮಾರ್ಚನೆ, ಲಲಿತಾ ಸಹಸ್ರನಾಮವೇ, ಕೋಟಿ ನಾಮಾರ್ಚನೆ ಮೊದಲಾದವು ಹುಟ್ಟಿಕೊಂಡವು ಎಂಬುದು ಅವರ ನಂಬಿಕೆ .

ಅಭಿಷೇಕ : ಮೊದಲೇ ಹೇಳಿದಂತೆ ಅಂತರ್‌ಶುದ್ಧಿ ಬಹಿರ್‌ಶುದ್ಧಿಗಾಗಿ ಮೊದಲು ಶುದ್ಧೋದಕ (ಶುಚಿಯಾದ ನೀರು) ಸ್ನಾನ, ಆನಂತರ ಮಾನವ ನಿರ್ಮಿತವಲ್ಲದ ನೈಸರ್ಗಿಕವಾದ ದ್ರವಗಳಾದ ಕಾಮಧೇನುವಿನಿಂದ ದೊರಕುವ ಹಾಲು-ಮೊಸರು, ತುಪ್ಪ, ಜೇನ್ನೊಣದಿಂದ ಸಿಗುವ ಮಧು, ಕಬ್ಬಿನಿಂದ ಬರುವ ಸಕ್ಕರೆ ಹಾಗೂ ಕಲ್ಪವೃಕ್ಷದಿಂದ ದತ್ತವಾದ ಎಳನೀರಿನಿಂದ ಮಾಡುವ ಅಭಿಷೇಕಕ್ಕೆ ಪಂಚಾಮೃತಾಭಿಷೇಕ ಎನ್ನಲಾಯಿತು. (ಮುಕ್ಕೋಟಿ ದೇವರುಗಳೂ ಗೋವಿನಲ್ಲಿದ್ದಾರೆ ಎಂಬುದು ಪ್ರತೀತಿ ಹೀಗಾಗೇ ಗೋವಿನ ಹಾಲನ್ನು ಮಾತ್ರ ಅಭಿಷೇಕಕ್ಕೆ ಬಳಸಲಾಗುತ್ತದೆ)

ಈ ಅಭಿಷೇಕಗಳನ್ನು ಮಾಡುವಾಗ ಏಕಾಗ್ರತೆ ಹಾಗೂ ದೈವಸ್ತುತಿಗಾಗಿ ಮಂತ್ರಗಳ ಉಗಮವಾಯಿತು. ಚಮಕ, ನಮಕಗಳ ಉಚ್ಚಾರಣೆಯಾಂದಿಗೆ ದೇವರಿಗೆ ಅಭಿಷೇಕ ಮಾಡುವುದು ರೂಢಿಗೆ ಬಂತು.
Procedure to worship god saaksha tv

ಅಲಂಕಾರ : ನಾವು ಸ್ನಾನ ಮಾಡಿ ಶುಚಿಯಾದ ವಸ್ತ್ರ ಧರಿಸುವಂತೆಯೇ ದೇವರಿಗೂ ಅಲಂಕಾರ ಮಾಡಲಾಗುತ್ತದೆ. ಹೆಣ್ಣು ಮಕ್ಕಳಿಲ್ಲದವರು, ತಮ್ಮ ಗಂಡು ಮಕ್ಕಳಿಗೇ ಹೆಣ್ಣು ಅಲಂಕಾರ ಹಾಕಿ ನೋಡಿ ಆನಂದಪಡುವಂತೆಯೇ ಭಕ್ತನು, ತನ್ನ ಆರಾಧ್ಯ ದೈವನಿಗೆ ಬೆಣ್ಣೆ, ಗೋಡಂಬಿ, ಪುಷ್ಪ ಮೊದಲಾದುವುಗಳಿಂದ ಅಲಂಕರಿಸಿ ಆನಂದಪಡುತ್ತಾನೆ. ಮನುಷ್ಯನ ಉತ್ಕಟ ಭಕ್ತಿಯಿಂದ ಬೆಳೆದದ್ದೇ ವಿವಿಧ ಬಗೆಯ ಅಲಂಕಾರಗಳು.

ಧೂಪ – ದೀಪ : ವಾತಾವರಣದಲ್ಲಿ ಕಾಣದ ಕಲ್ಮಶಗಳನ್ನು ಹೋಗಲಾಡಿಸಿ ಕಲುಷಿತ ವಾತಾವರಣವನ್ನು ಶುದ್ಧವಾಗಿಡಲು ಸಾಮ್ರಾಣಿ, ದಶಾಂಗ – ಗುಗ್ಗುಳಗಳ ಬಳಕೆ. ಅಲ್ಲದೆ ಶೀತಕ್ಕೆ ಉಷ್ಣವೇ ಮದ್ದು ಅಲ್ಲವೇ ಹೀಗಾಗಿ ಶುದ್ಧೋದಕ- ಪಂಚಾಮೃತ ಅಭಿಷೇಕದಿಂದ ಶೀತವಾದ ದೇವರಿಗೆ ಮಂಗಳಾರತಿ, ದೀಪಾರತಿ, ಸಾಂಮ್ರಾಣಿಯ ಮೂಲಕ ಉಷ್ಣ ಪೂಜೆ ಮಾಡಲಾಗುತ್ತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ದೀಪ : ದೀಪ ಶಕ್ತಿ ಸ್ವರೂಪ, ಬೆಳಕಲ್ಲಿ ಆತ್ಮನಿವೇದನಾರ್ಥವಾಗಿ ಹಾಗೂ ಕಣ್ಣತುಂಬ ದೇವರನ್ನು ಬೆಳಕಲ್ಲಿ ತುಂಬಿಕೊಳ್ಳುವ ಸಲುವಾಗಿ ದೀಪಾರಾಧನೆ.

ನೈವೇದ್ಯ : ಇಷ್ಟೆಲ್ಲಾ ಆದ ಮೇಲೆ ದೇವರ ಹಸಿವು ನೀಗಸಲು ಏನಾದರೂ ಕೊಡಬೇಕಲ್ಲವೇ ಅದುವೇ ನೈವೇದ್ಯ. ಸಾಮಾನ್ಯವಾಗಿ ದೇವರ ನೈವೇದ್ಯಕ್ಕೆ ಕದಳಿಫಲ ಹಾಗೂ ನಾರಿಕೇಳ (ಬಾಳೆಹಣ್ಣು ಹಾಗೂ ತೆಂಗಿನಕಾಯಿ) ಮಾತ್ರವೇ ಶ್ರೇಷ್ಠ. ಈ ಎರಡೂ ಮಾನವನ ಎಂಜಲಿನ ಸೋಂಕಿಲ್ಲದೆ ಬೆಳೆವ ಫಲಗಳು.

ಮಾವು, ಹಲಸು ಎಲ್ಲವೂ ನಾವು ತಿಂದು ಎಸೆದ ಹಣ್ಣಿನ ಒಳಗಿರುವ ಬೀಜದಿಂದ ಹುಟ್ಟುವುದಾದ್ದರಿಂದ ಇದು ನೈವೇದ್ಯಕ್ಕೆ ಯೋಗ್ಯವಲ್ಲ ಎನ್ನುತ್ತಾರೆ ಹಿರಿಯರು.

ವ್ರತಗಳು : ನಮ್ಮಲ್ಲಿ ಬಹುತೇಕ ವರ್ಷದ 365ದಿನಕ್ಕೂ ಒಂದೊಂದು ವ್ರತವಿದೆ. ಈ ಸ್ಪರ್ಧೆ, ಒತ್ತಡದ ವಿಶ್ವದಲ್ಲಿ ನಿರ್ದಿಷ್ಟ ದಿನಗಳಲ್ಲಾದರೂ ದೇವರನ್ನು ಸ್ಮರಿಸಲಿ ಎಂಬ ಕಾರಣಕ್ಕಾಗಿ ಹಬ್ಬ- ಹರಿದಿನ – ವ್ರತಗಳನ್ನು ಮಾಡಲಾಗಿದೆ. ಹೇಗೆಂದರೆ ಒಂದು ಊರಿಗೆ ಒಂದೇ ಒಂದು ದೇವಾಲಯ ಸಾಕು. ಆದರೂ ಎಲ್ಲ ಬಡಾವಣೆಗಳಲ್ಲೂ ದೇವಾಲಯ ಇರುತ್ತದೆ.

#Saakshatv #astrology

Tags: abhishekha and archanesaakshatv astrology
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram