ಈರುಳ್ಳಿ ಉತ್ತಪ್ಪಂ
ಬೇಕಾಗುವ ಪದಾರ್ಥಗಳು
1 ಕಪ್ ಉದ್ದಿನ ಬೇಳೆ
3 ಕಪ್ ಅಕ್ಕಿ
1 ಟೀಸ್ಪೂನ್ ಮೆಂತ್ಯ
1 ಟೀಸ್ಪೂನ್ ಕಡ್ಲೆಬೇಳೆ
ರುಚಿಗೆ ತಕ್ಕಷ್ಟು ಉಪ್ಪು
ನುಣ್ಣಗೆ ಕತ್ತರಿಸಿದ ಕೊತ್ತಂಬರಿ, ಈರುಳ್ಳಿ, ಹಸಿಮೆಣಸಿನಕಾಯಿ ಮತ್ತು ಕರಿಬೇವು ಸೊಪ್ಪು

ಮಾಡುವ ವಿಧಾನ
ಕಡ್ಲೆಬೇಳೆ, ಅಕ್ಕಿ ಮತ್ತು ಮೆಂತೆಯನ್ನು 3 ರಿಂದ 4 ಗಂಟೆಗಳ ಕಾಲ ಅಥವಾ ರಾತ್ರಿಯಿಡೀ ನೆನೆಸಿಡಿ. ಉದ್ದಿನ ಬೇಳೆಯನ್ನು ಕೂಡ 3 ರಿಂದ 4 ಗಂಟೆ ಅಥವಾ ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ.
ಉದ್ದಿನ ಬೇಳೆಯಿಂದ ನೀರನ್ನು ಸೋಸಿ ಅಗತ್ಯವಿರುವಷ್ಟು ನೀರನ್ನು ಸೇರಿಸಿ ನಯವಾಗಿ ಅರೆಯಿರಿ. ನೆನೆಸಿದ ಕಡ್ಲೆಬೇಳೆ, ಅಕ್ಕಿ ಮತ್ತು ಮೆಂತೆಯ ನೀರನ್ನು ಸೋಸಿ, ಅಗತ್ಯವಿರುವಷ್ಟು ನೀರನ್ನು ಸೇರಿಸಿ ಸ್ವಲ್ಪ ಒರಟಾಗಿ ಅರೆಯಿರಿ.

ಉದ್ದಿನ ಬೇಳೆ ಹಿಟ್ಟನ್ನು ಅಕ್ಕಿ ಹಿಟ್ಟಿನ ಮಿಶ್ರಣದ ಜೊತೆ ಸೇರಿಸಿ, ಚೆನ್ನಾಗಿ ಕಲಸಿ. ಇದನ್ನು 8-10 ಗಂಟೆಗಳ ಕಾಲ ಮುಚ್ಚಿ, ರಾತ್ರಿಯಿಡೀ ಹುದುಗಿಸಲು ಬಿಡಿ. ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಚೆನ್ನಾಗಿ ಕಲಸಿ.
ದೋಸೆ ಕಾವಲಿಯನ್ನು ಬಿಸಿ ಮಾಡಿ, ಹಿಟ್ಟನ್ನು ಹಾಕಿ ಸ್ವಲ್ಪ ದಪ್ಪವಾಗಿ ವೃತ್ತಾಕಾರವಾಗಿ ಹರಡಿ. ನುಣ್ಣಗೆ ಕತ್ತರಿಸಿದ ಕೊತ್ತಂಬರಿ ಸೊಪ್ಪು, ಈರುಳ್ಳಿ, ಮೆಣಸಿನಕಾಯಿ ಮತ್ತು ಕರಿಬೇವು ಸೊಪ್ಪನ್ನು ಸಿಂಪಡಿಸಿ. ಅದರ ಸುತ್ತಲೂ ಒಂದು ಚಮಚ ಎಣ್ಣೆಯನ್ನು ಸುರಿಯಿರಿ. 2 ನಿಮಿಷಗಳ ಕಾಲ ಮಧ್ಯಮ ಉರಿಯಲ್ಲಿ ಮುಚ್ಚಳವನ್ನು ಮುಚ್ಚಿ ಬೇಯಿಸಿ. ಇನ್ನೊಂದು ಬದಿಯನ್ನು ತಿರುಗಿಸಿ ಬೇಯಿಸಿ.
ತೆಂಗಿನಕಾಯಿ ಚಟ್ನಿಯೊಂದಿಗೆ ಬಿಸಿ ಈರುಳ್ಳಿ ಉತ್ತಪಂ ಅನ್ನು ಸವಿಯಿರಿ
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇಲ್ಲಿದೆ ಇಮ್ಯುನಿಟಿ ಬೂಸ್ಟರ್ ಡ್ರಿಂಕ್ಸ್#Saakshatv #healthtips #ImmunityBoosterDrinks https://t.co/T9iVoNZHuW
— Saaksha TV (@SaakshaTv) April 16, 2021
ಬೂದುಕುಂಬಳಕಾಯಿ ಮಜ್ಜಿಗೆ ಹುಳಿ#Saakshatv #cookingrecipe #Boodukumbalakayi #majjigehuli https://t.co/HGcFk6L8E7
— Saaksha TV (@SaakshaTv) April 16, 2021
ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ – ಮುಂಬೈ ತೊರೆದು ಬೆಂಗಳೂರಿಗೆ ಹಾರಿದ ದೀಪಿಕಾ – ರಣವೀರ್ ಜೋಡಿ#Maharashtracurfew #DeepikaPadukone https://t.co/kxvhIRddmi
— Saaksha TV (@SaakshaTv) April 16, 2021
ಆವತೀಯತೆ ಆರಂಭದ ಮುಂದುವರೆದ ಭಾಗ..#Saakshatv #aavathiyathe #ವಿಪ್ರಭಾ #ಆವತೀಯತೆ https://t.co/Sr9ri1vMtx
— Saaksha TV (@SaakshaTv) April 19, 2021
#Saakshatv #cookingrecipe #onionuttappam








