ಕೊತ್ತಂಬರಿ ನೀರು ತಯಾರಿಸುವ ವಿಧಾನ ಮತ್ತು ಅದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರ ಆರೋಗ್ಯ ಪ್ರಯೋಜನಗಳು
ಭಾರತದ ಅಡುಗೆಮನೆಯ ಮಸಾಲೆಗಳನ್ನು ಸರಿಯಾಗಿ ಬಳಸಿದರೆ ಅದು ನಮ್ಮ ದೇಹಕ್ಕೆ ಅನೇಕ ಪ್ರಯೋಜನಗಳನ್ನು ತರುತ್ತವೆ. ಭಾರತೀಯ ಮಸಾಲೆ ಪದಾರ್ಥಗಳಲ್ಲಿ ಕೊತಂಬರಿ ಪುಡಿಯೂ ಒಂದಾಗಿದ್ದು, ಅನೇಕ ತರಕಾರಿಗಳಲ್ಲಿ ಬಳಸಲಾಗುತ್ತದೆ. ಇದನ್ನು ವಿಭಿನ್ನ ರುಚಿ, ವಾಸನೆ ಮತ್ತು ರುಚಿಯನ್ನು ಹೆಚ್ಚಿಸಲು ಬಳಸಲಾಗುತ್ತದೆ. ಕೊತ್ತಂಬರಿ ಸೊಪ್ಪು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಕೊತ್ತಂಬರಿ ಸೊಪ್ಪಿನಲ್ಲಿ ಪೊಟ್ಯಾಶಿಯಂ, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಮೆಗ್ನೀಶಿಯಂನಂತಹ ಅನೇಕ ಪೋಷಕಾಂಶಗಳು ಹೇರಳವಾಗಿ ಕಂಡುಬರುತ್ತವೆ. ಇದು ನಮ್ಮ ದೇಹವು ಅನೇಕ ರೋಗಗಳಿಂದ ದೂರವಿರಲು ಸಹಾಯ ಮಾಡುತ್ತದೆ.
ಆಯುರ್ವೇದದ ಪ್ರಕಾರ, ಕೊತ್ತಂಬರಿ ನೀರನ್ನು ತಯಾರಿಸಲು, ಜೀರಿಗೆ, ಕೊತ್ತಂಬರಿ ಬೀಜಗಳು, ಮೆಂತ್ಯ ಮತ್ತು ಕರಿಮೆಣಸುಗಳನ್ನು ರಾತ್ರಿಯಿಡೀ ನೆನೆಸಿಡಬೇಕು.
ಬೆಳಿಗ್ಗೆ, ಆ ನೀರಿಗೆ ನಿಂಬೆ ರಸ ಮತ್ತು ಜೇನುತುಪ್ಪವನ್ನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ನೀವು ಜೀರಿಗೆ, ಕೊತ್ತಂಬರಿ ಬೀಜಗಳು, ಮೆಂತ್ಯ ಮತ್ತು ಕರಿಮೆಣಸು ತಿನ್ನಲು ಬಯಸದಿದ್ದರೆ, ಅವುಗಳನ್ನು ಸೋಸಿ ಬೇರ್ಪಡಿಸಬಹುದು.
ಕೊತ್ತಂಬರಿ ನೀರನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಈ ನೀರಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ಗಳು ದೇಹದಲ್ಲಿನ ಫ್ರೀ ರಾಡಿಕಲ್ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಅಪಾಯ ಕಡಿಮೆ.
ಇದರ ಬಳಕೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು. ಇದು ಸಂಧಿವಾತದ ನೋವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಇದು, ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ ಮತ್ತು ದೇಹದಲ್ಲಿ ನೀರಿನ ಕೊರತೆಯಾಗದಂತೆ ತಡೆಯುತ್ತದೆ.
ಕೊತ್ತಂಬರಿ ನೀರು ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಕೊತ್ತಂಬರಿ ನೀರು ದೇಹದಲ್ಲಿನ ಚಯಾಪಚಯ ಕ್ರಿಯೆಯನ್ನು ನಿಯಂತ್ರಿಸುತ್ತದೆ. ಇದರಿಂದಾಗಿ ಇದು ದೇಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುವಲ್ಲಿ ಕೊತ್ತಂಬರಿ ನೀರು ಕೂಡ ವಿಶೇಷ ಪಾತ್ರ ವಹಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರಿಂದಾಗಿ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
ಕೊತ್ತಂಬರಿ ನೀರು ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದನ್ನು ಕುಡಿಯುವುದರಿಂದ ದೇಹದಿಂದ ವಿಷಗಳನ್ನು ಹೊರಹಾಕಬಹುದು. ಈ ಕಾರಣದಿಂದಾಗಿ ಸೋಂಕಿನ ಅಪಾಯ ಕಡಿಮೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1422747213445439490?s=19
https://twitter.com/SaakshaTv/status/1422354774205243412?s=19
https://twitter.com/SaakshaTv/status/1422384934870732807?s=19
https://twitter.com/SaakshaTv/status/1422400435143516160?s=19
#Saakshatv #healthtips #healthbenefits #corianderwater








