ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಾವಕಾಶ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 154 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 28, 2021ರೊಳಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಟ್, ಪದವಿ, ಎಂಸಿಎ, ಎಂ.ಟೆಕ್, ಬಿ.ಇ, ಎಂ.ಎಸ್ಸಿ, ಎಂಎಸ್ಡಬ್ಲ್ಯೂ ಮತ್ತು ಎಂ.ಎ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಏಪ್ರಿಲ್ 28,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕು.
ಕಚೇರಿ ವಿಳಾಸ:
The Commissioner,
Rural drinking water and sanitation department,
2nd floor, KHB complex,
Cauvery bhavan,
K.G. Road,
Bengaluru-560 009.
ಸಿಹಿ ಗೆಣಸಿನ ಆರೋಗ್ಯ ಪ್ರಯೋಜನಗಳು#healthtips #healthbenefits #sweetpotato https://t.co/Pc1Z1SjcOn
— Saaksha TV (@SaakshaTv) April 3, 2021
ತಂಪಾದ ಆರೋಗ್ಯಕರ ರಾಗಿ ಅಂಬಲಿ#raagi #healthy #cooking #saakshatv https://t.co/uHFsZgf2ck
— Saaksha TV (@SaakshaTv) April 3, 2021
ನೆಹ್ವಾಲ್ ಅವರ ನೈಜ ಆಟದ ಚಿತ್ರಣ ‘ಸೈನಾ’ ಚಿತ್ರದಲ್ಲಿಲ್ಲ !https://t.co/qRp7c66FMy
— Saaksha TV (@SaakshaTv) April 7, 2021
ಮಧುಮೇಹ ನಿಯಂತ್ರಿಸಲು ನೀರಿನಲ್ಲಿ ನೆನೆಸಿದ ಹಸಿ ಬೆಂಡೆಕಾಯಿhttps://t.co/h6DM8brSNg
— Saaksha TV (@SaakshaTv) April 7, 2021
#Saakshatv #jobs #Rdpr #Karnataka #recruitment