ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಓಶೋ’ಯಿಸಂ

Shwetha by Shwetha
April 23, 2021
in Marjala Manthana, Newsbeat, ನ್ಯೂಸ್ ಬೀಟ್, ಮಾರ್ಜಲ ಮಂಥನ
Saakshatv Oshoyisam episode 1
Share on FacebookShare on TwitterShare on WhatsappShare on Telegram

ಓಶೋ’ಯಿಸಂ Saakshatv Oshoyisam episode 1

ಓಶೋ ಎಂದರೆ ಯಾರು? ಬುದ್ಧನಾಗಲು ಹೊರಟ, ಸೆಕ್ಸ್‌ ಗುರುವೆಂದು ಕರೆಸಿಕೊಂಡ ಓಶೋ ಯಾರಿಗೆ ಅರ್ಥವಾದರು? Saakshatv Oshoyisam episode 1

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಸರಳವಾಗಿ ಓಶೋ ಎಂದರೆ ಉನ್ನತ ಅರಿವಿನ ಬೌದ್ಧ ಭಿಕ್ಕು ಎಂಬರ್ಥ ಬರುತ್ತದೆ. ನಮ್ಮ ಸಂಸ್ಕೃತದ ಉಪಾಧ್ಯಾಯ ಎನ್ನುವರ್ಥ. ಓಶೋ ಎನ್ನುವುದು ಜಪಾನಿ ಮತ್ತು ಚೀನಿ ಭಾಷೆಗಳಲ್ಲಿ ಮಾಸ್ಟರ್, ಗುರು ಎನ್ನುವರ್ಥದಲ್ಲಿ ವ್ಯಾಖ್ಯಾನಿಸಲ್ಪಡುತ್ತದೆ. ಅಥವಾ ಸಾಗರದಷ್ಟು ಆಳದಲ್ಲಿ ವಿಲೀನವಾಗುವುದು ಎಂದವನು ವಿಲಿಯಂ ಜೇಮ್ಸ್. ಆದರೆ ಓಶೋ ಎಂದರೆ ಗೂಢಾರ್ಥದಲ್ಲಿ ಬೆಳಕು, ಜ್ಞಾನ, ಅನಂತದ ಅರಿವು. ಚಂದ್ರಮೋಹನ್ ಜೈನ್ ಎನ್ನುವ ಅತ್ಯಂತ ಸಾಮಾನ್ಯ ಸಾಧಾರಣ ಮನುಷ್ಯ ಮೊದಲು ಆಚಾರ್ಯ ರಜನೀಶನಾದ, ನಂತರ ಭಗವಾನ್ ರಜನೀಶ ಎಂದು ಕರೆಸಿಕೊಂಡ ಆದರೂ ಆತ ತೃಪ್ತನಾಗಿದ್ದು ಮಾತ್ರ ಕೊನೆಯಲ್ಲಿ ಓಶೋ ಆದ ನಂತರವೇ. ಜಿಡ್ಡು ಕೃಷ್ಣಮೂರ್ತಿಯನ್ನು ಆಧುನಿಕ ಬುದ್ಧ ಎಂದು ಕರೆದ ಈ ಓಶೋ ಯಾರು?
Saakshatv Oshoyisam episode 1

ಓಶೋ ಕುರಿತಾಗಿ ಈವರೆಗೆ ರಚನೆಯಾಗಿರುವುದು ಬರೋಬ್ಬರಿ 1500ಕ್ಕೂ ಹೆಚ್ಚು ಪುಸ್ತಕಗಳು, ಜಗತ್ತಿನ 40 ಭಾಷೆಗಳಲ್ಲಿ ಪ್ರಕಟಗೊಂಡಿವೆ. ಸಾವಿರಾರು ಗಂಟೆಯ ಉಪನ್ಯಾಸಗಳ ವೀಡಿಯೋ ಲಭ್ಯವಿದೆ. ಇಡೀ ಪ್ರಪಂಚದಾದ್ಯಂತ ಸುಮಾರು 200ಕ್ಕೂ ಅಧಿಕ ಓಶೋ ಧ್ಯಾನ ಕೇಂದ್ರಗಳಿವೆ. 60ರ ದಶಕದಲ್ಲಿ ಪ್ರವರ್ಧಮಾನಕ್ಕೆ ಬಂದ ಓಶೋ 80ರ ದಶಕದವರೆಗೆ ಸುಮಾರು 30 ವರ್ಷಗಳ ಕಾಲ ಭಾರತೀಯ ಆಧ್ಯಾತ್ಮಿಕ ಲೋಕದ ಅಧಿಪತ್ಯ ಸಾಧಿಸಿದವರು. ವಿಶ್ವದ 14 ರಾಷ್ಟ್ರಗಳಲ್ಲಿ ಅವರ ಆಧ್ಯಾತ್ಮಿಕ ತತ್ವಗಳ ಬೋಧನೆ ಕಾರ್ಯಾಚರಣೆ ನಡೆದಿತ್ತು. ಓಶೋ ದೈಹಿಕವಾಗಿ ಅಗಲಿದ್ದು 90ರ ದಶಕದಲ್ಲಿ ಆದರೇ ಇಂದಿಗೂ ಭಾರತೀಯ ಡಿವೈನ್‌ ಮಾರುಕಟ್ಟೆಯಲ್ಲಿ ಓಶೋ ಅನ್ನುವ ಹೆಸರಿಗೆ ಇರುವ ತಾಕತ್ತು ಅದ್ಭುತ. ನೆಟ್‌ ಫ್ಲಿಕ್ಸ್‌ ನಲ್ಲಿ ವೈಲ್ಡ್‌ ವೈಲ್ಡ್‌ ಕಂಟ್ರಿ ಎಂದೊಂದು ಡಾಕ್ಯುಮೆಂಟರಿ ಇದೆ. ಸಾಧ್ಯವಾದರೆ ನೋಡಿ. ಓಶೋರ ಜೀವನ ಚರಿತ್ರೆಯನ್ನು ಅದರಲ್ಲೂ ಮುಖ್ಯವಾಗಿ ಪುನಾ ಆಶ್ರಮದಿಂದ ಓರೇಗಾನ್‌ ವರೆಗಿನ ಓಶೋ ಆಧ್ಯಾತ್ಮಿಕ ಯಾತ್ರೆಯನ್ನು ಸಾಧ್ಯವಾದಷ್ಟು ಕ್ಲುಪ್ತವಾಗಿ ಚಿತ್ರಿಸುವ ಪ್ರಯತ್ನ ಮಾಡಲಾಗಿದೆ.

ಓಶೋ ಸನ್ಯಾಸಿಯಲ್ಲದ ಸನ್ಯಾಸಿ, ಸಂತನಲ್ಲದ ಸಂತ, ಗುರುವಲ್ಲದ ಗುರು. ಭಾರತೀಯ ಸಮಾಜದ ಮಡಿವಂತಿಕೆಯನ್ನು ಮೀರಿ ಕಾಮದ ಕುರಿತಾಗಿ ಮಾತನಾಡಿ ವಿವಾದ ಸೃಷ್ಟಿಸಿಕೊಂಡವರು. ಅರಿಷಡ್ವರ್ಗಗಳನ್ನು ಮೀರದೇ ತಮ್ಮದೇ ಆದ ಭ್ರಮಾಲೋಕದಲ್ಲಿ ವಿಹರಿಸಿದವರು. ತಾವು ಧರಿಸುವ ಪೋಷಾಕಿನಿಂದ ಹಿಡಿದು ದುಬಾರಿ ರೋಲ್ಸ್ ರಾಯ್ಸ್ ಕಾರುಗಳ ಸಹಿತ, ದುಬಾರಿ ವಾಚುಗಳ ಸಹಿತ ಸುದ್ದಿಯಾಗುತ್ತಿದ್ದವರು. ತಮ್ಮನ್ನು ಭೇಟಿಯಾಗುತ್ತಿದ್ದ ಗಣ್ಯರಿಂದ ಅನೇಕ ತರಹೇವಾರಿ ದುಬಾರಿ ಗಿಫ್ಟುಗಳನ್ನು ಪಡೆದುಕೊಳ್ಳುತ್ತಿದ್ದವರು. ಓಶೋರನ್ನು ವಿರೋಧಿಸಬೇಕೆ ನಿಮಗೆ ಇಷ್ಟೇ ಸಂಗತಿಗಳು ದಕ್ಕುತ್ತವೆ. ಆದರೆ ಓಶೋರನ್ನು ಇಷ್ಟಪಡುತ್ತೀರಾದರೇ ಅವರ ನೂರಾರು ಸಾವಿರಾರು ಕಥೆಗಳು, ಜೋಕ್ಸುಗಳು, ಉಪಮೆಗಳು, ವಿದ್ವತ್‌ ಪೂರ್ಣ ಉಪನ್ಯಾಸಗಳು ಸಿಗುತ್ತವೆ. ಓಶೋರನ್ನು ಅರ್ಥ ಮಾಡಿಕೊಳ್ಳಲೂ ಒಂದು ಮಟ್ಟಿನ ಪ್ರಬುದ್ಧತೆ ಬೇಕು, ಬೌದ್ಧಿಕವಾಗಿ ಪ್ರಬುದ್ಧರಲ್ಲದವರಿಗೆ ಓಶೋ ನಿಲುಕುವುದಿಲ್ಲ ಎಂದು ಗುರುಗಳಾದ ರವಿ ಬೆಳಗೆರೆ ಸದಾ ಹೇಳುತ್ತಿದ್ದರು.

From sex to superconsciousness ಎಂದ ಓಶೋ ಪೋಲಿಗುರುವಾಗಿಬಿಟ್ಟರು. ಭಾರತದ ಆಧ್ಯಾತ್ಮಿಕ ಮಾರುಕಟ್ಟೆಯನ್ನೇ ತನ್ನ ಕಬ್ಜಾದಲ್ಲಿಟ್ಟುಕೊಂಡಿದ್ದ ಭಗವಾನ್‌ ರಜನೀಶರನ್ನು ಮಡಿವಂತ ಸಮಾಜ ನೇಪಥ್ಯಕ್ಕೆ ಸರಿಸಿಬಿಟ್ಟಿತು. ಕೇವಲ 60 ವರ್ಷಗಳು ಮಾತ್ರ ಬದುಕಿದ್ದ ಓಶೋ ಆದ್ಯಾತ್ಮದ ಜೊತೆ ಬುದ್ದ, ಪ್ರೇಮ, ಸೂಫಿ, ಜೆನ್‌, ಬದುಕು, ಸತ್ಯದರ್ಶನ, ವ್ಯಂಗ್ಯ ವಿಡಂಬನೆ ಎಲ್ಲದರ ಬಗ್ಗೆಯೂ ನಿರರ್ಗಳ ಮಾತಾಡಿದರು. ಆದರೆ ಓಶೋ ಬದುಕಿನ ವೇವ್‌ ಲೆಂತ್‌ ಕುಸಿತದಲ್ಲಿ ಅವರು ಕುಖ್ಯಾತರಾಗಿದ್ದು ಕೇವಲ ಸೆಕ್ಸ್‌ ಗುರು ಎಂದಾಗಿ ಮಾತ್ರ. ಒಂದು ಕಾಲದಲ್ಲಿ ರಾಜನಂತೆ ಮೆರೆದಿದ್ದ ವಿದೇಶಗಳಿಂದ ಗಡಿಪಾರಾಗಿ ಮತ್ತೆ ಪೂನಾದ ಆಶ್ರಮಕ್ಕೆ ಬಂದರು. ಮತ್ತೆ ಮತ್ತೆ ವಿವಾದಗಳನ್ನು ಸೃಷ್ಟಿಸಿಕೊಂಡರು, ಬದುಕಿನ ಜೊತೆ ಸಾವಿನಲ್ಲೂ ನಿಗೂಢವಾಗಿಯೇ ಉಳಿದರು.
Saakshatv Oshoyisam episode 1

ಓಶೋ ಒಂದೇ ಒಂದಕ್ಷರ ಬರೆಯಲಿಲ್ಲ, ಆದರೆ ಅವರು ಮಾತಾಡಿದ ಪ್ರತಿ ವಾಕ್ಯಗಳೂ ಪುಸ್ತಕವಾಗಿ ಆಧ್ಯಾತ್ಮಿಕ ಮಾರುಕಟ್ಟೆಯನ್ನು ಆಕ್ರಮಿಸಿಕೊಂಡವು. ಅವರು ಮುಕ್ತ ಲೈಂಗಿಕತೆಯನ್ನು ಪ್ರತಿಪಾದಿಸಿದರು, ಲೈಂಗಿಕತೆಯ ಬಗ್ಗೆ, ಕಾಮದ ಬಗ್ಗೆ, ಮೈಥುನದ ಯೋಗಾವಸ್ಥೆಯ ಬಗ್ಗೆ ಮುಕ್ತವಾಗಿ ಮಾತಾಡಿದರು. ಬುದ್ದನಷ್ಟೇ ಕ್ರಿಸ್ತನನ್ನು ಪ್ರೀತಿಸಿದರು. ಪ್ರಸಿದ್ಧಿಯ ತುತ್ತತುದಿಯಲ್ಲೇ ಡಿಪ್ರೆಷನ್‌ ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ ವಿನೋದ್ ಖನ್ನಾ ಎಂಬ ಸ್ಪುರದ್ರೂಪಿ ನಟನನ್ನು ಶಿಷ್ಯನಾಗಿ ಸ್ವೀಕರಿಸಿ ಬದುಕಿಸಿದರು. ಮೋಹ, ಮತ್ಸರ ಮತ್ತು ಲೋಭಗಳಿಗೆ ತಮ್ಮದೇ ವ್ಯಾಖ್ಯಾನ ನೀಡಿದ ಓಶೋ, ಅರಿಷಡ್ವರ್ಗಗಳನ್ನು ಮೀರುವ ಸ್ಥಿತಿಯನ್ನೇ ಬುದ್ಧ ಎಂದರು. ಪರಂಪರೆಗಳನ್ನು ಗೊಡ್ಡು ಸಂಪ್ರದಾಯಗಳನ್ನು ಖಂಡತುಂಡವಾಗಿ ವಿರೋಧಿಸಿದರು. ಗಾಂಧಿಯನ್ನು, ಸಮಾಜವಾದವನ್ನು ಮತ್ತು ಧರ್ಮವನ್ನು ಮುಚ್ಚುಮರೆಯಿಲ್ಲದೇ ನಿರ್ಭೀಡೆಯಿಂದ ಟೀಕಿಸಿದರು.

ಇಂತಹ ಓಶೋರನ್ನು ಈವರೆಗೆ ಜಗತ್ತಿನ ಸಾವಿರ ಸಾವಿರ ಮಂದಿ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ತಮ್ಮದೇ ಆದ ದೃಷ್ಟಿಕೋನದಲ್ಲಿ ಓಶೋರ ವ್ಯಕ್ತಿತ್ವವನ್ನು ಓರೆಹಚ್ಚಲು ಯತ್ನಿಸಿದ್ದಾರೆ. ಓಶೋ ಯಾರಿಗೆಷ್ಟು ಅರ್ಥವಾದರು? ಒಂದು ಕಾಲದಲ್ಲಿ ನಾನು ಇಷ್ಟ ಪಟ್ಟು ಓದಿದ್ದು ಓಶೋ ಮತ್ತು ಜಿಡ್ಡು ಪುಸ್ತಕಗಳನ್ನೇ. ಓಶೋ ಅಲಿಯಾಸ್‌ ಭಗವಾನ್‌ ಅಲಿಯಾಸ್‌ ಆಚಾರ್ಯ ರಜನೀಶ್‌ ಅವರ ಒಟ್ಟಾರೆ ಬದುಕು, ಚಿಂತನೆ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದ ಕುರಿತಾಗಿ ಈ ಸಂಚಿಕೆಯಿಂದ ಬರೆಯಲು ಪ್ರೇರಣೆಯಾಗಿದೆ; ಇದು ಮೊದಲ ಅಧ್ಯಾಯ, ಒಪ್ಪಿಸಿಕೊಳ್ಳಿ.

-ವಿಶ್ವಾಸ್‌ ಭಾರದ್ವಾಜ್‌ (ವಿಭಾ)
***

#Oshoyisam #ಓಶೋ #ವಿಭಾ

ಸಾಕ್ಷಾಟಿವಿ ಸುದ್ದಿ ಸಂಪಾದಕ ವಿಶ್ವಾಸ್ ಭಾರದ್ವಾಜ್ ಅವರ ಕಿರು ಪರಿಚಯ

Tags: Oshoyisam episode 1ಓಶೋಓಶೋ'ಯಿಸಂ
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram