ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಓಶೋ’ಯಿಸಂ

Shwetha by Shwetha
April 23, 2021
in Marjala Manthana, Newsbeat, ನ್ಯೂಸ್ ಬೀಟ್, ಮಾರ್ಜಲ ಮಂಥನ
Saakshatv Oshoyisam episode 1
Share on FacebookShare on TwitterShare on WhatsappShare on Telegram

ಓಶೋ’ಯಿಸಂ Saakshatv Oshoyisam episode 1

ಓಶೋ ಎಂದರೆ ಯಾರು? ಬುದ್ಧನಾಗಲು ಹೊರಟ, ಸೆಕ್ಸ್‌ ಗುರುವೆಂದು ಕರೆಸಿಕೊಂಡ ಓಶೋ ಯಾರಿಗೆ ಅರ್ಥವಾದರು? Saakshatv Oshoyisam episode 1

Related posts

reliance-digital-india-sale-disco-offers-august-2026

ರಿಲಯನ್ಸ್ ಡಿಜಿಟಲ್ ತಂದಿದೆ ‘ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್

August 13, 2026
upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

August 13, 2026

ಸರಳವಾಗಿ ಓಶೋ ಎಂದರೆ ಉನ್ನತ ಅರಿವಿನ ಬೌದ್ಧ ಭಿಕ್ಕು ಎಂಬರ್ಥ ಬರುತ್ತದೆ. ನಮ್ಮ ಸಂಸ್ಕೃತದ ಉಪಾಧ್ಯಾಯ ಎನ್ನುವರ್ಥ. ಓಶೋ ಎನ್ನುವುದು ಜಪಾನಿ ಮತ್ತು ಚೀನಿ ಭಾಷೆಗಳಲ್ಲಿ ಮಾಸ್ಟರ್, ಗುರು ಎನ್ನುವರ್ಥದಲ್ಲಿ ವ್ಯಾಖ್ಯಾನಿಸಲ್ಪಡುತ್ತದೆ. ಅಥವಾ ಸಾಗರದಷ್ಟು ಆಳದಲ್ಲಿ ವಿಲೀನವಾಗುವುದು ಎಂದವನು ವಿಲಿಯಂ ಜೇಮ್ಸ್. ಆದರೆ ಓಶೋ ಎಂದರೆ ಗೂಢಾರ್ಥದಲ್ಲಿ ಬೆಳಕು, ಜ್ಞಾನ, ಅನಂತದ ಅರಿವು. ಚಂದ್ರಮೋಹನ್ ಜೈನ್ ಎನ್ನುವ ಅತ್ಯಂತ ಸಾಮಾನ್ಯ ಸಾಧಾರಣ ಮನುಷ್ಯ ಮೊದಲು ಆಚಾರ್ಯ ರಜನೀಶನಾದ, ನಂತರ ಭಗವಾನ್ ರಜನೀಶ ಎಂದು ಕರೆಸಿಕೊಂಡ ಆದರೂ ಆತ ತೃಪ್ತನಾಗಿದ್ದು ಮಾತ್ರ ಕೊನೆಯಲ್ಲಿ ಓಶೋ ಆದ ನಂತರವೇ. ಜಿಡ್ಡು ಕೃಷ್ಣಮೂರ್ತಿಯನ್ನು ಆಧುನಿಕ ಬುದ್ಧ ಎಂದು ಕರೆದ ಈ ಓಶೋ ಯಾರು?
Saakshatv Oshoyisam episode 1

ಓಶೋ ಕುರಿತಾಗಿ ಈವರೆಗೆ ರಚನೆಯಾಗಿರುವುದು ಬರೋಬ್ಬರಿ 1500ಕ್ಕೂ ಹೆಚ್ಚು ಪುಸ್ತಕಗಳು, ಜಗತ್ತಿನ 40 ಭಾಷೆಗಳಲ್ಲಿ ಪ್ರಕಟಗೊಂಡಿವೆ. ಸಾವಿರಾರು ಗಂಟೆಯ ಉಪನ್ಯಾಸಗಳ ವೀಡಿಯೋ ಲಭ್ಯವಿದೆ. ಇಡೀ ಪ್ರಪಂಚದಾದ್ಯಂತ ಸುಮಾರು 200ಕ್ಕೂ ಅಧಿಕ ಓಶೋ ಧ್ಯಾನ ಕೇಂದ್ರಗಳಿವೆ. 60ರ ದಶಕದಲ್ಲಿ ಪ್ರವರ್ಧಮಾನಕ್ಕೆ ಬಂದ ಓಶೋ 80ರ ದಶಕದವರೆಗೆ ಸುಮಾರು 30 ವರ್ಷಗಳ ಕಾಲ ಭಾರತೀಯ ಆಧ್ಯಾತ್ಮಿಕ ಲೋಕದ ಅಧಿಪತ್ಯ ಸಾಧಿಸಿದವರು. ವಿಶ್ವದ 14 ರಾಷ್ಟ್ರಗಳಲ್ಲಿ ಅವರ ಆಧ್ಯಾತ್ಮಿಕ ತತ್ವಗಳ ಬೋಧನೆ ಕಾರ್ಯಾಚರಣೆ ನಡೆದಿತ್ತು. ಓಶೋ ದೈಹಿಕವಾಗಿ ಅಗಲಿದ್ದು 90ರ ದಶಕದಲ್ಲಿ ಆದರೇ ಇಂದಿಗೂ ಭಾರತೀಯ ಡಿವೈನ್‌ ಮಾರುಕಟ್ಟೆಯಲ್ಲಿ ಓಶೋ ಅನ್ನುವ ಹೆಸರಿಗೆ ಇರುವ ತಾಕತ್ತು ಅದ್ಭುತ. ನೆಟ್‌ ಫ್ಲಿಕ್ಸ್‌ ನಲ್ಲಿ ವೈಲ್ಡ್‌ ವೈಲ್ಡ್‌ ಕಂಟ್ರಿ ಎಂದೊಂದು ಡಾಕ್ಯುಮೆಂಟರಿ ಇದೆ. ಸಾಧ್ಯವಾದರೆ ನೋಡಿ. ಓಶೋರ ಜೀವನ ಚರಿತ್ರೆಯನ್ನು ಅದರಲ್ಲೂ ಮುಖ್ಯವಾಗಿ ಪುನಾ ಆಶ್ರಮದಿಂದ ಓರೇಗಾನ್‌ ವರೆಗಿನ ಓಶೋ ಆಧ್ಯಾತ್ಮಿಕ ಯಾತ್ರೆಯನ್ನು ಸಾಧ್ಯವಾದಷ್ಟು ಕ್ಲುಪ್ತವಾಗಿ ಚಿತ್ರಿಸುವ ಪ್ರಯತ್ನ ಮಾಡಲಾಗಿದೆ.

ಓಶೋ ಸನ್ಯಾಸಿಯಲ್ಲದ ಸನ್ಯಾಸಿ, ಸಂತನಲ್ಲದ ಸಂತ, ಗುರುವಲ್ಲದ ಗುರು. ಭಾರತೀಯ ಸಮಾಜದ ಮಡಿವಂತಿಕೆಯನ್ನು ಮೀರಿ ಕಾಮದ ಕುರಿತಾಗಿ ಮಾತನಾಡಿ ವಿವಾದ ಸೃಷ್ಟಿಸಿಕೊಂಡವರು. ಅರಿಷಡ್ವರ್ಗಗಳನ್ನು ಮೀರದೇ ತಮ್ಮದೇ ಆದ ಭ್ರಮಾಲೋಕದಲ್ಲಿ ವಿಹರಿಸಿದವರು. ತಾವು ಧರಿಸುವ ಪೋಷಾಕಿನಿಂದ ಹಿಡಿದು ದುಬಾರಿ ರೋಲ್ಸ್ ರಾಯ್ಸ್ ಕಾರುಗಳ ಸಹಿತ, ದುಬಾರಿ ವಾಚುಗಳ ಸಹಿತ ಸುದ್ದಿಯಾಗುತ್ತಿದ್ದವರು. ತಮ್ಮನ್ನು ಭೇಟಿಯಾಗುತ್ತಿದ್ದ ಗಣ್ಯರಿಂದ ಅನೇಕ ತರಹೇವಾರಿ ದುಬಾರಿ ಗಿಫ್ಟುಗಳನ್ನು ಪಡೆದುಕೊಳ್ಳುತ್ತಿದ್ದವರು. ಓಶೋರನ್ನು ವಿರೋಧಿಸಬೇಕೆ ನಿಮಗೆ ಇಷ್ಟೇ ಸಂಗತಿಗಳು ದಕ್ಕುತ್ತವೆ. ಆದರೆ ಓಶೋರನ್ನು ಇಷ್ಟಪಡುತ್ತೀರಾದರೇ ಅವರ ನೂರಾರು ಸಾವಿರಾರು ಕಥೆಗಳು, ಜೋಕ್ಸುಗಳು, ಉಪಮೆಗಳು, ವಿದ್ವತ್‌ ಪೂರ್ಣ ಉಪನ್ಯಾಸಗಳು ಸಿಗುತ್ತವೆ. ಓಶೋರನ್ನು ಅರ್ಥ ಮಾಡಿಕೊಳ್ಳಲೂ ಒಂದು ಮಟ್ಟಿನ ಪ್ರಬುದ್ಧತೆ ಬೇಕು, ಬೌದ್ಧಿಕವಾಗಿ ಪ್ರಬುದ್ಧರಲ್ಲದವರಿಗೆ ಓಶೋ ನಿಲುಕುವುದಿಲ್ಲ ಎಂದು ಗುರುಗಳಾದ ರವಿ ಬೆಳಗೆರೆ ಸದಾ ಹೇಳುತ್ತಿದ್ದರು.

From sex to superconsciousness ಎಂದ ಓಶೋ ಪೋಲಿಗುರುವಾಗಿಬಿಟ್ಟರು. ಭಾರತದ ಆಧ್ಯಾತ್ಮಿಕ ಮಾರುಕಟ್ಟೆಯನ್ನೇ ತನ್ನ ಕಬ್ಜಾದಲ್ಲಿಟ್ಟುಕೊಂಡಿದ್ದ ಭಗವಾನ್‌ ರಜನೀಶರನ್ನು ಮಡಿವಂತ ಸಮಾಜ ನೇಪಥ್ಯಕ್ಕೆ ಸರಿಸಿಬಿಟ್ಟಿತು. ಕೇವಲ 60 ವರ್ಷಗಳು ಮಾತ್ರ ಬದುಕಿದ್ದ ಓಶೋ ಆದ್ಯಾತ್ಮದ ಜೊತೆ ಬುದ್ದ, ಪ್ರೇಮ, ಸೂಫಿ, ಜೆನ್‌, ಬದುಕು, ಸತ್ಯದರ್ಶನ, ವ್ಯಂಗ್ಯ ವಿಡಂಬನೆ ಎಲ್ಲದರ ಬಗ್ಗೆಯೂ ನಿರರ್ಗಳ ಮಾತಾಡಿದರು. ಆದರೆ ಓಶೋ ಬದುಕಿನ ವೇವ್‌ ಲೆಂತ್‌ ಕುಸಿತದಲ್ಲಿ ಅವರು ಕುಖ್ಯಾತರಾಗಿದ್ದು ಕೇವಲ ಸೆಕ್ಸ್‌ ಗುರು ಎಂದಾಗಿ ಮಾತ್ರ. ಒಂದು ಕಾಲದಲ್ಲಿ ರಾಜನಂತೆ ಮೆರೆದಿದ್ದ ವಿದೇಶಗಳಿಂದ ಗಡಿಪಾರಾಗಿ ಮತ್ತೆ ಪೂನಾದ ಆಶ್ರಮಕ್ಕೆ ಬಂದರು. ಮತ್ತೆ ಮತ್ತೆ ವಿವಾದಗಳನ್ನು ಸೃಷ್ಟಿಸಿಕೊಂಡರು, ಬದುಕಿನ ಜೊತೆ ಸಾವಿನಲ್ಲೂ ನಿಗೂಢವಾಗಿಯೇ ಉಳಿದರು.
Saakshatv Oshoyisam episode 1

ಓಶೋ ಒಂದೇ ಒಂದಕ್ಷರ ಬರೆಯಲಿಲ್ಲ, ಆದರೆ ಅವರು ಮಾತಾಡಿದ ಪ್ರತಿ ವಾಕ್ಯಗಳೂ ಪುಸ್ತಕವಾಗಿ ಆಧ್ಯಾತ್ಮಿಕ ಮಾರುಕಟ್ಟೆಯನ್ನು ಆಕ್ರಮಿಸಿಕೊಂಡವು. ಅವರು ಮುಕ್ತ ಲೈಂಗಿಕತೆಯನ್ನು ಪ್ರತಿಪಾದಿಸಿದರು, ಲೈಂಗಿಕತೆಯ ಬಗ್ಗೆ, ಕಾಮದ ಬಗ್ಗೆ, ಮೈಥುನದ ಯೋಗಾವಸ್ಥೆಯ ಬಗ್ಗೆ ಮುಕ್ತವಾಗಿ ಮಾತಾಡಿದರು. ಬುದ್ದನಷ್ಟೇ ಕ್ರಿಸ್ತನನ್ನು ಪ್ರೀತಿಸಿದರು. ಪ್ರಸಿದ್ಧಿಯ ತುತ್ತತುದಿಯಲ್ಲೇ ಡಿಪ್ರೆಷನ್‌ ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ ವಿನೋದ್ ಖನ್ನಾ ಎಂಬ ಸ್ಪುರದ್ರೂಪಿ ನಟನನ್ನು ಶಿಷ್ಯನಾಗಿ ಸ್ವೀಕರಿಸಿ ಬದುಕಿಸಿದರು. ಮೋಹ, ಮತ್ಸರ ಮತ್ತು ಲೋಭಗಳಿಗೆ ತಮ್ಮದೇ ವ್ಯಾಖ್ಯಾನ ನೀಡಿದ ಓಶೋ, ಅರಿಷಡ್ವರ್ಗಗಳನ್ನು ಮೀರುವ ಸ್ಥಿತಿಯನ್ನೇ ಬುದ್ಧ ಎಂದರು. ಪರಂಪರೆಗಳನ್ನು ಗೊಡ್ಡು ಸಂಪ್ರದಾಯಗಳನ್ನು ಖಂಡತುಂಡವಾಗಿ ವಿರೋಧಿಸಿದರು. ಗಾಂಧಿಯನ್ನು, ಸಮಾಜವಾದವನ್ನು ಮತ್ತು ಧರ್ಮವನ್ನು ಮುಚ್ಚುಮರೆಯಿಲ್ಲದೇ ನಿರ್ಭೀಡೆಯಿಂದ ಟೀಕಿಸಿದರು.

ಇಂತಹ ಓಶೋರನ್ನು ಈವರೆಗೆ ಜಗತ್ತಿನ ಸಾವಿರ ಸಾವಿರ ಮಂದಿ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ತಮ್ಮದೇ ಆದ ದೃಷ್ಟಿಕೋನದಲ್ಲಿ ಓಶೋರ ವ್ಯಕ್ತಿತ್ವವನ್ನು ಓರೆಹಚ್ಚಲು ಯತ್ನಿಸಿದ್ದಾರೆ. ಓಶೋ ಯಾರಿಗೆಷ್ಟು ಅರ್ಥವಾದರು? ಒಂದು ಕಾಲದಲ್ಲಿ ನಾನು ಇಷ್ಟ ಪಟ್ಟು ಓದಿದ್ದು ಓಶೋ ಮತ್ತು ಜಿಡ್ಡು ಪುಸ್ತಕಗಳನ್ನೇ. ಓಶೋ ಅಲಿಯಾಸ್‌ ಭಗವಾನ್‌ ಅಲಿಯಾಸ್‌ ಆಚಾರ್ಯ ರಜನೀಶ್‌ ಅವರ ಒಟ್ಟಾರೆ ಬದುಕು, ಚಿಂತನೆ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದ ಕುರಿತಾಗಿ ಈ ಸಂಚಿಕೆಯಿಂದ ಬರೆಯಲು ಪ್ರೇರಣೆಯಾಗಿದೆ; ಇದು ಮೊದಲ ಅಧ್ಯಾಯ, ಒಪ್ಪಿಸಿಕೊಳ್ಳಿ.

-ವಿಶ್ವಾಸ್‌ ಭಾರದ್ವಾಜ್‌ (ವಿಭಾ)
***

#Oshoyisam #ಓಶೋ #ವಿಭಾ

ಸಾಕ್ಷಾಟಿವಿ ಸುದ್ದಿ ಸಂಪಾದಕ ವಿಶ್ವಾಸ್ ಭಾರದ್ವಾಜ್ ಅವರ ಕಿರು ಪರಿಚಯ

Tags: Oshoyisam episode 1ಓಶೋಓಶೋ'ಯಿಸಂ
ShareTweetSendShare
Join us on:

Related Posts

reliance-digital-india-sale-disco-offers-august-2026

ರಿಲಯನ್ಸ್ ಡಿಜಿಟಲ್ ತಂದಿದೆ ‘ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್

by admin
August 13, 2026
0

ರಿಲಯನ್ಸ್ ಡಿಜಿಟಲ್ ತಂದಿದೆ 'ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್ (D.I.S.C.O.)' ಸ್ಮಾರ್ಟ್ಫೋನ್‌ಗಳು, ಗೃಹೋಪಯೋಗಿ ವಸ್ತುಗಳು, ಟಿವಿಗಳು, ಲ್ಯಾಪ್ ಟಾಪ್ ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ ಗಳ ಮೇಲೆ ವಿಶೇಷ ಕೊಡುಗೆಗಳು ಮುಂಬೈ,  2026: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ರಿಟೇಲರ್  ರಿಲಯನ್ಸ್ ಡಿಜಿಟಲ್, ತನ್ನ ಅಪ್ರತಿಮ ಡಿಜಿಟಲ್ ಇಂಡಿಯಾ ಸೇಲ್‌ಗಾಗಿ ಹೊಸ ಗುರುತನ್ನು D.I.S.C.O. (ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್) ಅನ್ನು ಪ್ರಾರಂಭಿಸಿದೆ. ರಿಲಯನ್ಸ್ ಡಿಜಿಟಲ್ ಸ್ಟೋರ್ಸ್, RelianceDigital.in ಮತ್ತು ಮೈಜಿಯೋ ಸ್ಟೋರ್ಸ್‌ನಲ್ಲಿ ಆಗಸ್ಟ್ 16 ರವರೆಗೆ ಚಾಲನೆಯಲ್ಲಿರುವ ಈ ಅಭಿಯಾನವು ಸ್ಮಾರ್ಟ್ಫೋನ್‌ಗಳು, ಟಿವಿಗಳು, ಲ್ಯಾಪ್‌ಟಾಪ್, ಗೃಹೋಪಯೋಗಿ ವಸ್ತುಗಳು ಮತ್ತು ಹೆಚ್ಚಿನವುಗಳ ಮೇಲೆ ವಿಶೇಷ ಕೊಡುಗೆಗಳನ್ನು ತಂದಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ಮೇಲಿನ ಋತುವಿನ ಕೆಲವು ಅತ್ಯುತ್ತಮ ಡೀಲ್ ಗಳನ್ನು ಒಟ್ಟುಗೂಡಿಸುವ ಈ ಮಾರಾಟವು ಹಳೆಯ ಉತ್ಪನ್ನಗಳ ಮೇಲೆ ವರ್ಧಿತ ವಿನಿಮಯ ಮೌಲ್ಯ, ಆಯ್ದ ಎಲೆಕ್ಟ್ರಾನಿಕ್ಸ್ ಮೇಲೆ ₹ 15,000 ವರೆಗೆ ಎಕ್ಸ್‌ಚೇಂಜ್ ಬೋನಸ್, ಎರಡನೇ ಉತ್ಪನ್ನದ ಖರೀದಿಗೆ ಫ್ಲಾಟ್ 50% ರಿಯಾಯಿತಿ, ಬ್ಯಾಂಕ್ ಕಾರ್ಡ್‌ಗಳು, ಪೇಪರ್ ಫೈನಾನ್ಸ್ ಮತ್ತು ಯುಪಿಐ ಮೂಲಕ ₹ 30,000 ವರೆಗೆ ರಿಯಾಯಿತಿ ಮತ್ತು ಮಾರಾಟದ ಸಮಯದಲ್ಲಿ ಪೂರಕ ಒಂದು ವರ್ಷದ ವಿಸ್ತೃತ ವಾರಂಟಿಯನ್ನು ನೀಡುತ್ತದೆ. ನಿಮ್ಮ ಸ್ಮಾರ್ಟ್ಫೋನ್, ಟಿವಿ, ಲ್ಯಾಪ್‌ಟಾಪ್ ಅಥವಾ ಗೃಹೋಪಯೋಗಿ ಉಪಕರಣಗಳನ್ನು ಅಪ್ಗ್ರೇಡ್ ಮಾಡಲು ಯೋಜಿಸುತ್ತಿದ್ದರೂ, ಅದನ್ನು ಮಾಡಲು ಇದಕ್ಕಿಂತ ಉತ್ತಮ ಸಮಯ ಎಂದಿಗೂ ಸಿಗಲಾರದು.  D.I.S.C.O. ಕೊಡುಗೆಗಳ ವಿವರ ಇಲ್ಲಿದೆ: ಸ್ಮಾರ್ಟ್ಫೋನ್‌ಗಳು ಮತ್ತು ಪರಿಕರಗಳು: ಗ್ರಾಹಕರು ₹10,999 ರಿಂದ ಪ್ರಾರಂಭವಾಗುವ ಕೈಗೆಟುಕುವ 4G ಸ್ಮಾರ್ಟ್ಫೋನ್, ₹13,999 ನಿಂದ 5G ಸ್ಮಾರ್ಟ್ಫೋನ್ ಅಥವಾ ಐಫೋನ್‌ಗಳು ಮತ್ತು ₹2 ಲಕ್ಷದವರೆಗೆ ಬೆಲೆಯ ಫೋಲ್ಡೆಬಲ್ ಫೋನ್ ಸೇರಿದಂತೆ ಪ್ರೀಮಿಯಂ ಫ್ಲ್ಯಾಗ್ ಶಿಪ್ ಸಾಧನಗಳನ್ನು ಹುಡುಕುತ್ತಿರಲಿ, ರಿಲಯನ್ಸ್ ಡಿಜಿಟಲ್ ಪ್ರತಿ ಬೆಲೆ ವಿಭಾಗದಲ್ಲಿ ಆಯ್ಕೆಗಳನ್ನು ಹೊಂದಿದೆ. ಗ್ರಾಹಕರು 30 ತಿಂಗಳವರೆಗೆ ನೋ ಕಾಸ್ಟ್ ಇಎಂಐ, ಆಯ್ದ ಸ್ಮಾರ್ಟ್ಫೋನ್‌ಗಳಿಗೆ 10,000 ರೂ.ವರೆಗೆ ವಿನಿಮಯ ಬೋನಸ್, ಇಯರ್ಬಡ್‌ಗಳು, ಹೆಡ್ಫೋನ್‌ಗಳು, ಬ್ಲೂಟೂತ್ ಸ್ಪೀಕರ್‌ಗಳು, ಧರಿಸಬಹುದಾದ ವಸ್ತುಗಳು ಮತ್ತು ಮೊಬೈಲ್ ಬಿಡಿಭಾಗಗಳಿಗೆ ಯುಪಿಐ ಪಾವತಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಆಯ್ದ ಬ್ಲೂಟೂತ್ ಸ್ಪೀಕರ್,, ಇಯರ್ಬಡ್ ಮತ್ತು ಪವರ್ ಬ್ಯಾಂಕ್ ಮೇಲೆ ₹15,000 ಅಥವಾ ಅದಕ್ಕಿಂತ ಹೆಚ್ಚಿನ ಬೆಲೆಯ ಖರೀದಿಗಳೊಂದಿಗೆ ಫ್ಲಾಟ್ 50% ರಿಯಾಯಿತಿ ಪಡೆಯಬಹುದು. ಗೃಹೋಪಯೋಗಿ ಉಪಕರಣಗಳು: ₹50,000 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಗೆ ಶಾಪಿಂಗ್ ಮಾಡಿ ಮತ್ತು 43,900 ರೂ.ಗಳ ಡೈಸನ್ ಬಿಗ್ ಬಾಲ್ ವ್ಯಾಕ್ಯೂಮ್ ಕ್ಲೀನರ್ ಅನ್ನು 13,900 ರೂ.ಗೆ ಪಡೆಯಿರಿ. ₹39,990 ನಿಂದ ಪ್ರಾರಂಭವಾಗುವ 65-ಇಂಚಿನ 4K UHD ಗೂಗಲ್ ಟಿವಿ ಮೂಲಕ  ನಿಮ್ಮ ಮನೆಯ ಮನರಂಜನೆಯನ್ನು ನವೀಕರಿಸಿ, ಮತ್ತು ₹39,990 ನಿಂದ ಪ್ರಾರಂಭವಾಗುವ ಸೈಡ್ ಬೈ ಸೈಡ್ ರೆಫ್ರಿಜರೇಟರ್ ಆಯ್ಕೆ ಮಾಡಿ ಮತ್ತು 12000/- ವರೆಗಿ‌ನ ಮೌಲ್ಯದ ಉಚಿತ ಪಡೆಯಿರಿ ಮತ್ತು 15,000/-ವರೆಗೆ ವಿನಿಮಯ ಪ್ರಯೋಜನಗಳನ್ನು ಪಡೆಯಿರಿ. ಗ್ರಾಹಕರು *₹18,000 ಮೌಲ್ಯದ ಉಚಿತಗಳೊಂದಿಗೆ ₹55,990 ರಿಂದ ಪ್ರಾರಂಭವಾಗುವ ವಾಷರ್ ಡ್ರೈಯರ್ ಅನ್ನು ಸಹ ಮನೆಗೆ ತರಬಹುದು. ಲ್ಯಾಪ್ ಟಾಪ್‌ಗಳು: ಕೇವಲ ₹ 39,999 ರಿಂದ ಪ್ರಾರಂಭವಾಗುವ ಲ್ಯಾಪ್ ಟಾಪ್‌ಗಳ ಮೇಲೆ ₹ 5,000 ವರೆಗೆ ಉಚಿತ 1+2 ವರ್ಷಗಳ ವಿಸ್ತೃತ ವಾರಂಟಿ ಮತ್ತು ವಿನಿಮಯ ಪ್ರಯೋಜನಗಳನ್ನು ಪಡೆಯಿರಿ.

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

by admin
August 13, 2026
0

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು! ದೆಹಲಿ - ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ...

shatkarma-kerala-mantravada-truth-psychology

Astro- ಈ_ಪ್ರಯೋಗಗಳು_ಕೇರಳದ_ಮಂತ್ರವಾದದ_ಅತ್ಯಂತ_ಹಳೆಯ_ಭಾಗ.

by admin
August 13, 2026
0

ಇದನ್ನ ಷಟ್ಕರ್ಮ ಅಂತ ಕರೀತಾರೆ - ಅಂದ್ರೆ 6 ಕರ್ಮಗಳು. ಒಡಿಯನ್ ವಿದ್ಯೆಯೂ ಇದರಲ್ಲೇ ಬರುತ್ತೆ. ಇವು ಅಥರ್ವಣ ವೇದದಿಂದ ಬಂದಿವೆ ಅಂತ ಹೇಳ್ತಾರೆ. ಶ್ರೀ ಕ್ಷೇತ್ರ...

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram