saalumarada-veerachari | ನ್ಯಾಯ ಸಿಗದೆ ಇದ್ದದ್ದಕ್ಕೆ ಸಾಲುಮರದ ವೀರಾಚಾರಿ ಆತ್ಮಹತ್ಯೆ
ದಾವಣಗೆರೆ : ನ್ಯಾಯ ಸಿಗದೆ ಇದ್ದದ್ದಕ್ಕೆ ಸಾಲುಮರದ ವೀರಾಚಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಧ್ಯರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ವೀರಾಚಾರಿ ಸಾವಿಗೆ ಶರಣಾಗಿದ್ದಾರೆ.
ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ಮಿಟ್ಲಕಟ್ಟೆಯ ವೀರಾಚಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಿಟ್ಲಕಟ್ಟೆಯಲ್ಲಿ ಪಡಿತರ ವಿತರಣೆಯಲ್ಲಿ ಕಡಿಮೆ ನೀಡಿ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.
![saalumarada-veerachari no more](http://saakshatv.com/wp-content/uploads/2022/09/veerachari.png)
ನಿನ್ನೆಯಷ್ಟೆ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಯನ್ನ ಸಲ್ಲಿಸಿದ್ದರು. ಕಳೆದ ಎರಡ್ಮೂರು ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದರು.
ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 3 ಸಾವಿರ ಮರಗಳನ್ನ ಬೆಳೆಸಿದ್ದರು.
ನಿತ್ಯ ಪರಿಸರ ಹಾಗೂ ಮರಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.
ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದ ವೀರಾಚಾರಿ, ಹೋರಾಟಕ್ಕೆ ನ್ಯಾಯ ಸಿಗದೆ ಇದ್ದದ್ದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.