ಹೊಸದಿಲ್ಲಿ : ರಾಜ್ಯಸ್ಥಾನ ಕಾಂಗ್ರೆಸ್ ನಲ್ಲಿ ಕ್ಷಿಪ್ರಗತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಸಚಿನ್ ಪೈಲಟ್ ಅವರನ್ನು ರಾಜಸ್ಥಾನ ಉಪಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲಾಗಿದೆ.
ಜೊತೆಗೆ ಪೈಲಟ್ ರ ಆಪ್ರರಾಗಿದ್ದ ವಿಶ್ವೇಂದ್ರ ಸಿಂಗ್, ರಮೇಶ್ ಮೀನಾ ಅವರನ್ನೂ ಕ್ಯಾಬಿನೆಟ್ನಿಂದ ಕೈಬಿಡಲಾಗಿದೆ. ಸಚಿನ್ ಪೈಲಟ್ ಬದಲಿಗೆ ಗೋವಿಂದ್ ಸಿಂಗ್ ದೋಟಾಸ್ರಾ ಅವರು ಕಾಂಗ್ರೆಸ್ ರಾಜ್ಯ ಅಧ್ಯಕ್ಷರನ್ನಾಗಿ ನೇಮಕಗೊಳ್ಳಲಿದ್ದಾರೆ.