ನಿರ್ದೇಶಕ ನಿತೀಶ್ ತ್ರಿವಾರಿ (Nitesh Tiwari) ರಾಮಾಯಣ (Ramayana) ಆಧರಿಸಿ ಸಿನಿಮಾ ಮಾಡುತ್ತಿದ್ದು, ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಹೆಸರು ಕೇಳಿ ಬಂದಿತ್ತು. ಆದರೆ, ಸದ್ಯ ನಟಿ ಶ್ರೀದೇವಿ ಅವರ ಮಗಳ ಹೆಸರು ಕೇಳಿ ಬರುತ್ತಿದೆ.
ರಾಮನಾಗಿ ರಣ್ಬೀರ್ ಕಪೂರ್ (Ranbir Kapoor) ಈಗಾಗಲೇ ಆಯ್ಕೆಯಾಗಿದ್ದಾರೆ. ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಬದಲು ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ (Janhvi Kapoor) ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಚಿತ್ರದ ಪ್ರೀ- ಪ್ರೊಡಕ್ಷನ್ ಹಂತದ ಕೆಲಸಗಳು ಕೂಡ ಭರದಿಂದ ಸಾಗುತ್ತಿವೆ. ಇನ್ನುಳಿದ ಪಾತ್ರಗಳ ಆಯ್ಕೆ ಕೂಡ ನಡೆಯುತ್ತಿದೆ.
ರಣಬೀರ್ ರಾಮನ ಪಾತ್ರ ಮಾಡುತ್ತಾರೆ ಎನ್ನುತ್ತಿದ್ದಂತೆ ಸೀತೆಯಾಗಿ ಆಲಿಯಾ ಭಟ್ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ, ಡೇಟ್ ಸಮಸ್ಯೆಯಿಂದ ಆಲಿಯಾ ಭಟ್ ಈ ಪಾತ್ರ ಒಪ್ಪಿಕೊಂಡಿಲ್ಲ. ಹೀಗಾಗಿ ಸಾಯಿ ಪಲ್ಲವಿ (Sai Pallavi) ಸೀತೆಯ ಪಾತ್ರ ಮಾಡಲಿದ್ದಾರೆ ಎನ್ನಲಾಗಿತ್ತು. ಈಗ ಶ್ರೀದೇವಿ ಮಗಳಿಗೆ ಸೀತೆಯಾಗುವ ಅದೃಷ್ಟ ಒಲಿದು ಬಂದಿದೆ ಎನ್ನಲಾಗಿದೆ.