ಪ್ರಧಾನಿ ಮಾನಹಾನಿ ಆರೋಪ -TMC ವಕ್ತಾರ ಸಾಕೇತ್ ಗೋಖಲೆ ಬಂಧನ…
ಮೊರ್ಬಿ ಸೇತುವೆ ಕುಸಿತದ ಕುರಿತು ಪ್ರಧಾನಿಯವರ ಮೇಲೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಅವರನ್ನು ಗುಜರಾತ್ ಪೊಲೀಸರು ರಾಜಸ್ಥಾನ್ ನಲ್ಲಿ ಬಂಧಿಸಿದ್ದಾರೆ ಎಂದು TMC ಪಕ್ಷದ ನಾಯಕ ಡೆರೆಕ್ ಓಬ್ರಿಯನ್ ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ.
“ಟಿಎಂಸಿ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಸಾಕೇತ್ ಸೋಮವಾರ ರಾತ್ರಿ 9 ಗಂಟೆಗೆ ನವದೆಹಲಿಯಿಂದ ಜೈಪುರಕ್ಕೆ ವಿಮಾನದಲ್ಲಿ ತೆರಳಿದ್ದಾಗ ಗುಜರಾತ್ ಪೊಲೀಸರು ರಾಜಸ್ಥಾನದ ವಿಮಾನ ನಿಲ್ದಾಣದಲ್ಲಿ ಕಾದಿದ್ದು, ಬಂಧಿಸಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ.
ಮಂಗಳವಾರ ರಾತ್ರಿ ಗೋಖಲೆ ತನ್ನ ತಾಯಿಗೆ ಕರೆ ಮಾಡಿ ತನ್ನನ್ನು ಅಹಮದಾಬಾದ್ಗೆ ಕರೆದುಕೊಂಡು ಹೋಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಲ್ಲಿಗೆ ತಲುಪುವುದಾಗಿ ತಿಳಿಸಿದರು ಎಂದು ಅವರು ಹೇಳಿದರು.
“ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ತಾಯಿಗೆ ಕರೆಮಾಡಿ ಅಹಮದಾಬಾದ್ಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಅಹಮದಾಬಾದ್ ತಲುಪುವುದಾಗಿ ಹೇಳಿದ್ದಾರೆ. ಪೊಲೀಸರು ಎರಡು ನಿಮಿಷಗಳ ಕಾಲ ಅವಕಾಶ ಕೊಟ್ಟಿದ್ದಾರೆ. ನಂತರ ಅವರ ಎಲ್ಲಾ ಪೋನ್ ಮತ್ತು ವಸ್ತಗಳನ್ನ ವಶಪಡಿಸಿಕೊಂಡಿರುವುದಾಗಿ ಡೆರೆಕ್ ಓಬ್ರಿಯನ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
“ಮೊರ್ಬಿ ಸೇತುವೆ ಕುಸಿತದ ಕುರಿತಂತೆ ಸಾಕೇತ್ ಅವರ ಟ್ವೀಟ್ ಕುರಿತು ಅಹಮದಾಬಾದ್ ಸೈಬರ್ ಸೆಲ್ನಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅಕ್ಟೋಬರ್ 30 ರಂದು, ಗುಜರಾತ್ನ ಮೊರ್ಬಿ ಜಿಲ್ಲೆಯ ಮಚ್ಚು ನದಿಯಲ್ಲಿ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ್ದರು.
Saket Gokhale: TMC spokesperson Saket Gokhale arrested on defamation charges against Prime Minister