ಬೆಂಗಳೂರು: ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಕುರಿತ ವಿಧೇಯಕ ಇತ್ತೀಚೆಗೆ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಹೀಗಾಗಿ ಶಾಲಾ ಕ್ಯಾಂಪರ್ ನಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ ಅಕ್ಕಪಕ್ಕದ ಕಾಂಡಿಮೆಂಟ್ಸ್ ಹಾಗೂ ಬೀಡಾ ಸ್ಟಾಲ್ಗಳ ಮೇಲೆ ದಕ್ಷಿಣ ವಿಭಾಗದ ಪೊಲೀಸರ ದಾಳಿ ನಡೆಸಿದ್ದಾರೆ.
ದಕ್ಷಿಣ ವಿಭಾಗದ 243 ಅಂಗಡಿಗಳಲ್ಲಿ ಮಾದಕ ವಸ್ತು ಮಾರಾಟದ ಕುರಿತು ಪರಿಶೀಲನೆ ನಡೆಸಿದ್ದು, ನಿಯಮ ಬಾಹಿರವಾಗಿ ಸಿಗರೇಟ್ ಮಾರುತ್ತಿದ್ದ 19 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. 78 ಅಂಗಡಿ ಮಾಲೀಕರಿಗೆ ದಕ್ಷಿಣ ವಿಭಾಗದ ಪೊಲೀಸರು ದಂಡ ಹಾಕಿದ್ದಾರೆ.
ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಸಚಿವ ದಿನೇಶ್ ಗುಂಡೂರಾವ್ ಮಂಡನೆ ಮಾಡಿದ್ದು, ಹುಕ್ಕಾಬಾರ್ಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಬಾರದು ಅಂತಿದೆ. ಆದರೆ, ಅನೇಕ ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಹುಕ್ಕಾ ಬಾರ್ ಆರಂಭಿಸಿವೆ ಎಂಬ ಆರೋಪ ಕೇಳಿ ಬಂದಿವೆ. ಕಾನೂನಿನಲ್ಲಿ 18 ವರ್ಷದೊಳಗಿನವರಿಗೆ ಮಾರಬಾರದು ಎಂದು ಇತ್ತು. ಅದನ್ನು 21 ವರ್ಷಕ್ಕೆ ಏರಿಸಲಾಗಿದೆ. ಶಾಲಾ – ಕಾಲೇಜುಗಳ ಮೂರು ಮೀಟರ್ ಒಳಗೆ ಮಾರಾಟ ಮಾಡಬಾರದು ಅಂತ ನಿಯಮ ಇದೆ.