ರಾಮನಗರ : ಡ್ರಗ್ಸ್ ಮಾಫಿಯಾದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಹೆಸರು ಕೇಳಿಬರುತ್ತಿದ್ದು, ಈ ಬಗ್ಗೆ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿ ಜಮೀರ್ ಅಹಮದ್ ಅವರನ್ನ ಬಂಧಿಸಬೇಕು ಅಂತ ಹೇಳಿರುವವರನ್ನ ಮೊದಲು ಬಂಧಿಸಬೇಕು ಎಂದಿದ್ದಾರೆ.
ನಗರದಲ್ಲಿ ಸ್ಯಾಂಡಲ್ ವುಡ್ ಗೆ ಡ್ರಗ್ ಮಾಫಿಯಾ ನಂಟಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಕನ್ನಡ ಚಿತ್ರರಂಗಕ್ಕೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಜಮೀರ್ ಅವರನ್ನು ಬಂಧಿಸಬೇಕು ಎಂಬ ವಾದದ ಬಗ್ಗೆ ಮಾತನಾಡಿ, ಜಮೀರ್ ಅಹಮದ್ ಅವರನ್ನ ಬಂಧಿಸಬೇಕು ಅಂತ ಹೇಳಿರುವವರನ್ನ ಮೊದಲು ಬಂಧಿಸಬೇಕು. ರಾಜಕಾರಣಕ್ಕೋಸ್ಕರ ಆರೋಪ ಮಾಡಬಾರದು. ಜಮೀರ್ ಅಹಮದ್ ವಿರುದ್ಧ ಮಾತನಾಡಿದ್ರೆ ನಾನು ಲೀಡರ್ ಆಗುತ್ತೇನೆ. ನಾನು ಮುಸ್ಲಿಂ ವಿರೋಧಿ ಅಂತ ತೋರಿಸಿಕೊಳ್ಳುವುದನ್ನ ಬಿಡಬೇಕು. ಇದು ಕೆಟ್ಟ ಅಭ್ಯಾಸ ಇದನ್ನ ಮೊದಲು ಬಿಡಬೇಕು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೆಸರೆಳದೆ ಟಾಂಗ್ ಕೊಟ್ಟರು.
https://youtu.be/UbvwePro0o8