ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಆರೋಪಿ ಆದಿತ್ಯ ಆಳ್ವನನ್ನು ಚೆನ್ನೈನಲ್ಲಿ ಹೆಡೆಮುರಿ ಕಟ್ಟಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಮಾಜಿ ಸಚಿವ ದಿ.ಜೀವರಾಜ್ ಆಳ್ವ ಪುತ್ರ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಬಾಮೈದನಾಗಿರುವ ಆದಿತ್ಯ ಆಳ್ವ, ಡ್ರಗ್ಸ್ ಪ್ರಕಣದಲ್ಲಿ 6ನೇ ಆರೋಪಿ. ತಮಿಳುನಾಡಿನ ಹಲವು ರೆಸಾರ್ಟ್ಗಳಲ್ಲಿ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವ, ಪದೇ ಪದೆ ಸ್ಥಳ ಬದಲಾಯಿಸುತ್ತಿದ್ದ. ಆದರೆ, ಕೆಲ ದಿನಗಳಿಂದ ಚೆನ್ನೈ ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದ ಆದಿತ್ಯ ಆಳ್ವನ ಮೊಬೈಲ್ ಲೋಕೇಶನ್ ಟ್ರೇಸ್ ಮಾಡಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಳೆದ ರಾತ್ರಿಯೇ ಚೆನ್ನೈನಲ್ಲಿ ಆದಿತ್ಯ ಆಳ್ವನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಖಚಿತಪಡಿಸಿದ್ದಾರೆ. ಇಂದು ಆರೋಪಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಷ್ಟಡಿಗೆ ಪಡೆಯಲಾಗುವುದು ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಯನ್ನುಸಿಸಿಬಿ ಪೊಲೀಸರು ಬಂಧಿಸಿದ್ದರು. ರಾಗಿಣಿ, ಸಂಜನಾ ವಿಚಾರಣೆ ಸಂದರ್ಭದಲ್ಲೇ ಆದಿತ್ವ ಆಳ್ವ ಸೆಲೆಬ್ರಿಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆದಿತ್ಯ ಆಳ್ವನ ವಿರುದ್ಧ 6ನೇ ಆರೋಪಿ ಎಂದು ಎಫ್ಐಆರ್ ದಾಖಲಾಗಿತ್ತು.
ಚಳ್ಳೆಹಣ್ಣು ತಿನ್ನಿಸಿದ್ದ ಆದಿತ್ಯ ಆಳ್ವ..!
ಆದಿತ್ಯ ಆಳ್ವ, ಹೋಟೆಲ್ ಉದ್ಯಮಿ. ಪಂಚಾತಾರಾ ಹೋಟೆಲ್ ಜತೆಗೆ ರೆಸಾರ್ಟ್ ಮಾಲೀಕ ಕೂಡ. ಈತನ ರೆಸಾರ್ಟ್ಗಳಲ್ಲೇ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂದು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದರು. ಹೀಗಾಗಿ ಈತನ ಬಂಧನಕ್ಕೆ ಸಿಸಿಬಿ ಪೊಲೀಸರು ವ್ಯಾಪಕ ಬಲೆ ಬೀಸಿದ್ದರು.
ರಾಗಿಣಿ, ಸಂಜನಾ ಅರೆಸ್ಟ್ ಆಗುತ್ತಿದ್ದಂತೆ ತನ್ನ ವಿರುದ್ಧ ಎಫ್ಐಆರ್ ದಾಖಲಾಗದೇ ಇದ್ದರೂ ಆದಿತ್ಯ ಆಳ್ವ ಮನೆ ಖಾಲಿ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಹೀಗಾಗಿ ಮುಂಬೈನ ಸಹೋದರಿ ಹಾಗೂ ವಿವೇಕ್ ಒಬೆರಾಯ್ ಮನೆ ಮೇಲೂ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಅಲ್ಲಿಯೂ ಸಿಗದೇ ಇದ್ದಾಗ ಆದಿತ್ಯ ಆಳ್ವ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿತ್ತು.
ಸೆಲೆಬ್ರಿಟಿಗಳಿಗೆ ಶುರುವಾಯ್ತಾ ನಡುಕ..!
ಆದಿತ್ಯ ಆಳ್ವ ತನ್ನ ರೆಸಾರ್ಟ್ನಲ್ಲಿ ಸಾಕಷ್ಟು ಡ್ರಗ್ಸ್ ಪಾರ್ಟಿಗಳನ್ನು ಮಾಡುತ್ತಿದ್ದ ಆರೋಪವಿದೆ. ಈ ಡ್ರಗ್ಸ್ ಪಾರ್ಟಿಗಳಲ್ಲಿ ಸೆಲೆಬ್ರಿಟಿಗಳು, ರಾಜಕಾರಣಿಗಳು, ಅವರ ಮಕ್ಕಳು ಪಾಲ್ಗೊಳ್ಳುತ್ತಿದ್ದರಂತೆ. ಹೀಗಾಗಿ ಆದಿತ್ಯ ಆಳ್ವನ ಅವರ ಬಂಧನದಿಂದ ಹಲವು ಸೆಲೆಬ್ರಿಟಿಗಳಿಗೆ ನಡುಕ ಶುರುವಾಗಿದೆ ಎನ್ನಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಎ6 ಆರೋಪಿಯಾಗಿದ್ದ ಆದಿತ್ಯಾ ಆಳ್ವ ವಿರುದ್ಧ ಸೆಪ್ಟೆಂಬರ್ 4ರಂದು ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ದಾಖಲಾಗುವ ಮೊದಲೇ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವನನ್ನು ನಾಲ್ಕು ತಿಂಗಳ ಬಳಿಕ ಸಿಸಿಬಿ ಪೊಲೀಸರ ಬಂಧಿಸಿ ಇಂದು ಮುಂಜಾನೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಕರೆತರಲಾಗಿದೆ. ಹೀಗಾಗಿ ಡ್ರಗ್ಸ್ ಪಾರ್ಟಿಗಳ ಬಗ್ಗೆ ಯಾರ ಹೆಸರು ಬಾಯ್ಬಿಡುತ್ತಾನೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel