ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

Sandalwood : ಮಲೆನಾಡಿನ ಸಿನಿಹಬ್ಬಕ್ಕೆ ಸತ್ಯ ಪಿಕ್ಚರ್ಸ್ , ಅನ್ಲಾಕ್ ರಾಘವ ಚಿತ್ರತಂಡ ಸಾಥ್

Namratha Rao by Namratha Rao
December 17, 2022
in ಮನರಂಜನೆ, Cinema, News, Newsbeat
sandalwood
Share on FacebookShare on TwitterShare on WhatsappShare on Telegram

Sandalwood : ಮಲೆನಾಡಿನ ಸಿನಿಹಬ್ಬಕ್ಕೆ ಸತ್ಯ ಪಿಕ್ಚರ್ಸ್ , ಅನ್ಲಾಕ್ ರಾಘವ ಚಿತ್ರತಂಡ ಸಾಥ್

ಇಂದು ಜೋಗದೂರು ಶಿವಮೊಗ್ಗದಲ್ಲಿ ಸಿನಿಹಬ್ಬ – ಮಲೆನಾಡ ಕಿರುಚಿತ್ರೋತ್ಸವ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು. ಸತ್ಯ ಪಿಕ್ಚರ್ಸ್ ಸಹಯೋಗದಲ್ಲಿ ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ಹಾಗೂ ಶಿವಮೊಗ್ಗದ ಶಿವಮೊಗ್ಗ ಸಿನಿಮಾಸ್ ಅಡ್ಡ ಜಂಟಿಯಾಗಿ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ‘ಸಿನಿಹಬ್ಬ’ ಕಾರ್ಯಕ್ರಮವನ್ನು ಆಯೋಜಿಸಿದ್ದರು.

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ಕನ್ನಡ ಚಲನಚಿತ್ರರಂಗದಲ್ಲಿ ತಮ್ಮ ವಿಶೇಷ ಶೈಲಿಯಿಂದ ಹೊಸ ಛಾಪು ಮೂಡಿಸುತ್ತಿರುವ ಯುವ ನಿರ್ದೇಶಕರಾದ ಡಿ.ಸತ್ಯಪ್ರಕಾಶ್ ಹಾಗೂ ಕುಶಾಲ್ ಗೌಡ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿನಿಹಬ್ಬದಲ್ಲಿ ಕಿರುಚಿತ್ರಗಳನ್ನು ವೀಕ್ಷಿಸಿ, ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಲೆನಾಡಿನ ಯುವಪ್ರತಿಭೆಗಳು ಸಿನಿಮಾರಂಗದಲ್ಲಿ ಮತ್ತಷ್ಟು ಸಕ್ರಿಯರಾಗುವಂತೆ ಪ್ರೋತ್ಸಾಹಿಸಿದರು.

ಅನ್ ಲಾಕ್ ರಾಘವ ಚಲನಚಿತ್ರದ ನಿರ್ಮಾಪಕರಾದ ಡಿ.ಮಂಜುನಾಥ್ ಅವರು ಸಿನಿಹಬ್ಬವನ್ನು ಉದ್ಘಾಟಿಸಿ, ಉತ್ತಮ ಸಿನಿಕತೆಗಳಿಗೆ ವೇದಿಕೆ ಕಲ್ಪಿಸಿಕೊಡುವುದಕ್ಕಾಗಿ ಪ್ರೋತ್ಸಾಹವಿದ್ದೇ ಇರುತ್ತದೆ ಎಂದರು. ಸಿನಿಹಬ್ಬದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಶಂಕರ್ ನಾಗ್ ಅವರಿಗೆ ಪುಷ್ಪನಮನವನ್ನು ಸಲ್ಲಿಸಲಾಯಿತು.

“ಕನ್ನಡ ಚಿತ್ರರಂಗಕ್ಕೆ ಪ್ರಾದೇಶಿಕ ಸೊಗಡಿನ ಕತೆಗಳ ಅವಶ್ಯಕತೆ ಇದೆ. ಯುವಕರು ನಟನೆಯತ್ತ ಮಾತ್ರ ಹೊರಳದೇ ಅಲ್ಲದೇ ತಾಂತ್ರಿಕ ವಿಭಾಗಗಳಲ್ಲೂ ತೊಡಗಿಸಿಕೊಳ್ಳಬೇಕು” ಎಂದು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಡಿ.ಸತ್ಯಪ್ರಕಾಶ್ ಹೇಳಿದರು.

ತೀರ್ಥಹಳ್ಳಿಯ ನವಪ್ರತಿಭೆ, ಅನ್ ಲಾಕ್ ರಾಘವ ಚಲನಚಿತ್ರದ ನಾಯಕನಟ ಮಿಲಿಂದ್ ಅವರಿಗೆ ಸಭಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರು ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದರು.

ಮಲೆನಾಡ ಯುವ ಪ್ರತಿಭೆಗಳ ಐದು ಕಿರುಚಿತ್ರಗಳು ಸಿನಿಹಬ್ಬದಲ್ಲಿ ಪ್ರದರ್ಶಿತಗೊಂಡದ್ದು ವಿಶೇಷ. ಕಾರ್ತಿಕ್ ಶ್ರೀಯನ್ ನಿರ್ದೇಶನದ ‘ಕಂಪೋಸರ್’, ರಾಕೇಶ್ ಬಿ ಜೆ ಹಾಸನ್ ನಿರ್ದೇಶಿಸಿರುವ ‘ಮಾಧ ಪುರಾಣ’, ಅನೀಶ್ ಎಸ್ ಶರ್ಮಾ ನಿರ್ದೇಶನದ ‘ವಡ್ಡಾರಾಧಕ’, ವಿನಯ್ ಶೆಟ್ಟಿ ನಿರ್ದೇಶಿಸಿರುವ ‘ಅಸ್ಪಷ್ಟ’, ಕಾರ್ತಿಕ್ ಕುರ್ಕುರೆ ನಿರ್ದೇಶಿಸಿರುವ ‘ಅಧ್ಯಾಯ ಮೂರು’ ಹಾಗೂ ‘ಎಕ್ಸಿಬಿಷನಿಸಮ್’ ಕಿರುಚಿತ್ರಗಳನ್ನು ಪ್ರದರ್ಶಿಸಲಾಯಿತು. ಈ ಎಲ್ಲ ಕಿರುಚಿತ್ರಗಳೂ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿದವು.

ಸಿನಿಹಬ್ಬ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿಯ ಸಿನಿಮಾ ನಿರ್ಮಾಪಕರಾದ ನಾಗೇಂದ್ರ ಜೋಯಿಸ್, ಶಿವಮೊಗ್ಗ ಸಿನಿಮಾಸ್ ಅಡ್ಡದ ರಘು ಕಡೂರು ಗುಂಡ್ಲು, ಕುರ್ಕುರೆ ಕ್ರಿಯೇಷನ್ಸ್ ನ ವಿನಯ್ ಶೆಟ್ಟಿ ಹಾಗೂ ಕಾರ್ತಿಕ್ ಕುರ್ಕುರೆ, ಶಿವಮೊಗ್ಗದ ರಂಗಾಯಣದ ನಿರ್ದೇಶಕರಾದ ಸಂದೇಶ್ ಜವಳಿ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Tags: cinema updateskannada filmssaakahatvSandalwood
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram