ಸ್ಯಾಂಡಲ್ ವುಡ್ ನಟರು ಒಟ್ಟಾಗಿರುವ ಫೋಟೋ ಶೇರ್ ಮಾಡಿ ಒಗ್ಗಟ್ಟಿನ ಸಂದೇಶ ರವಾನಿಸಿದ ಜಗ್ಗೇಶ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನ ಸುದ್ದಿ ಕನ್ನಡ ಚಿತ್ರರಂಗ , ಅಪ್ಪು ಅಭಿಮಾನಿಗಳು, ಇಡೀ ಕರುನಾಡಿನ ಜನರಿಗೆ ಬರಸಿಡಿಲಿನಂತೆ ಅಪ್ಪಳಿಸಿತ್ತು. ಅಪ್ಪುವನ್ನ ಕಳೆದುಕೊಂಡು ಸ್ಯಾಂಡಲ್ ವುಡ್ ಬರಿದಾಗಿದೆ. ಕರುನಾಡಿನ ಜನ ಇನ್ನೂವರೆಗೂ ಸಹ ಈ ಕಹಿ ಸತ್ಯವನ್ನ ಸ್ವೀಕರಿಸಲು ಸಾಧ್ಯವಾಗ್ತಿಲ್ಲ. ನಂಬಲಾಗದೇ ಕಣ್ಣೀರಿಡುತ್ತಿದ್ದಾರೆ.
ತಾರೆಯರು ಕೂಡ ಅಪ್ಪು ನೆನೆದು ಭಾವುಕ ಪೋಸ್ಟ್ ಗಳನ್ನ ಮಾಡ್ತಾಯಿದ್ದಾರೆ. ಈ ನಡುವೆ ಜಗ್ಗೇಶ್ ಅವರು ಇಡೀ ಸ್ಯಾಂಡಲ್ ವುಡ್ ನಟ ಒಗ್ಗಟ್ಟಿಗೆ ಕರೆ ನೀಡಿದ್ದಾರೆ. ಹೌದು, ಸ್ಯಾಂಡಲ್ವುಡ್ನ ಪ್ರಮುಖ ನಟರ ಭಾವಚಿತ್ರಗಳು ಒಟ್ಟಿಗೆ ಇರುವ ಫೋಟೊವೊಂದು ಟ್ವಿಟರ್ನಲ್ಲಿ ವೈರಲ್ ಆಗಿದೆ. ಯುನೈಟೆಡ್ ಕೆಎಫ್ಐ ಕನ್ನಡ ಚಿತ್ರರಂಗ, ಯುನೈಟೆಡ್ ಕೆಎಫ್ಐ ಫ್ಯಾನ್ಸ್ ಎಂಬ ಸಾಲುಗಳು ಆ ಫೋಟೊದಲ್ಲಿದ್ದು, ನಾವೆಲ್ಲರೂ ಒಗ್ಗಟ್ಟಾಗಿರೋಣ ಎಂಬ ಸಂದೇಶವನ್ನು ಬಿಂಬಿಸುತ್ತಿದೆ.
ಈ ಫೋಟೊವನ್ನು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿರುವ ನಟ ಜಗ್ಗೇಶ್ ಅವರು, “ಈ ಭಾವ ನನ್ನಕಣ್ಣಲ್ಲಿ ಆನಂದಭಾಷ್ಪ ತರಿಸಿತು! ಮಾನ್ಯರೆ ನಾವೆಲ್ಲಾ ಶಾರದೆಯ ಮಕ್ಕಳು ಚಿತ್ರರಂಗ ನಮ್ಮ ಮನೆ! ಕನ್ನಡಿಗರು ನಮ್ಮ ಬಂಧುಗಳು! ನಮ್ಮ ಈಒಗ್ಗಟ್ಟು ರಾಜಣ್ಣನ ಕಾಲದಲ್ಲಿ ಇತ್ತು!ಮತ್ತೆ ಬರೋದಿಲ್ಲವೆ ಎಂಬ ಕೊರಗು ಕಾಡುತ್ತಿತ್ತು!ಈಗ ಇದನ್ನ ನೋಡಿ ಹಾಲುಜೇನು ಸವಿದಂತೆ ಆಯಿತು! ಈ ಒಗ್ಗಟ್ಟಿನ ಮಂತ್ರ ಯಾವ ಅಡೆತಡೆ ಇಲ್ಲದೆ ಮುಂದುವರಿಯಲಿlove all” ಎಂಬ ಸಂದೇಶ ರವಾನಿಸಿದ್ದಾರೆ.
ಇಂದಿನಿಂದ ಅಪ್ಪು ಸಮಾಧಿ ದರ್ಶನಕ್ಕೆ ಅವಕಾಶ