ADVERTISEMENT
Friday, January 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸರ್ವ ಕಷ್ಟ ಪರಿಹಾರಾರ್ಥಾ ಅಂಗಾರಕ ಸಂಕಷ್ಟ ಹರ ಚತುರ್ಥಿ ವ್ರತ ಮತ್ತು ಪೂಜಾ ವಿಧಾನ ತಿಳಿಯಿರಿ…!!

admin by admin
July 26, 2021
in Astrology, Newsbeat, ಜ್ಯೋತಿಷ್ಯ
lord ganesha saakshatv
Share on FacebookShare on TwitterShare on WhatsappShare on Telegram

ಸರ್ವ ಕಷ್ಟ ಪರಿಹಾರಾರ್ಥಾ ಅಂಗಾರಕ ಸಂಕಷ್ಟ ಹರ ಚತುರ್ಥಿ ವ್ರತ ಮತ್ತು ಪೂಜಾ ವಿಧಾನ ತಿಳಿಯಿರಿ…!!

lord ganesha saakshatvಅಂಗಾರಕ ಸಂಕಟಹರ ಚತುರ್ಥಿ…  ನಾಳೆ  ಚತುರ್ಥಿ ತಿಥಿಯಂದು ಆಚರಿಸುವ ವ್ರತಗಳಲ್ಲಿ ಸಂಕಷ್ಟಹರ ಚತುರ್ಥಿಯೂ ಒಂದು.
ಹೆಸರೇ ಹೇಳುವಂತೆ ಕಷ್ಟದಿಂದ ಪಾರಾಗಲು ಈ ವ್ರತವನ್ನು ಆಚರಿಸುವರು. ಚತುರ್ಥಿಯು ಒಂದು ತಿಂಗಳಲ್ಲಿ ಎರಡು ಬಾರಿ ಬರುತ್ತದೆ. ಅವುಗಳಲ್ಲಿ ಕೃಷ್ಣಪಕ್ಷದ ಚತುರ್ಥಿಯಂದೇ ಸಂಕಷ್ಟಿಯನ್ನು ಆಚರಿಸುತ್ತಾರೆ.

Related posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

January 30, 2026
If you do this remedy with turmeric and ghee on Friday, health and financial problems will definitely go away.

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ..

January 30, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಅಂದು ಮಂಗಳವಾರವಾದರೆ ‘ಅಂಗಾರಕ ಚತುರ್ಥಿ’ ಎನ್ನುತ್ತಾರೆ. ಅಂಗಾರಕ ಚತುರ್ಥಿಗೆ ಹೆಚ್ಚಿನ ಮಹತ್ತ್ವವಿದೆ. ಸಂಕಷ್ಟಿಯನ್ನು ಆಚರಿಸುವವರು ಕೃಷ್ಣ ಪಕ್ಷದ ಚತುರ್ಥಿಯಂದು ಹಗಲು ಉಪವಾಸ ಮಾಡುತ್ತಾರೆ.  ಸಂಜೆ ವ್ರತ ಪೂಜಾವನ್ನು ಆಚರಿಸಿ, ಚಂದ್ರದರ್ಶನ ಮಾಡುವುದರೊಂದಿಗೆ ಉಪವಾಸ ಕೊನೆಗೊಳ್ಳುತ್ತದೆ.  ಒಂದು ವರ್ಷದಲ್ಲಿ ಅಧಿಕ ಮಾಸವಿಲ್ಲದಿದ್ದಾಗ ಚೈತ್ರಮಾಸದಿಂದ ಹನ್ನೆರಡು ಕೃಷ್ಣಪಕ್ಷಗಳಿರುತ್ತವೆ. ಹಾಗಾಗಿ ಸಂಕಷ್ಟಿಯ ಸಂಖ್ಯೆಯೂ ಹನ್ನೆರಡು. ಅಧಿಕ ಮಾಸವಿದ್ದಾಗ ಈ ಸಂಖ್ಯೆ ಹದಿಮೂರಕ್ಕೇರುತ್ತದೆ.

ಪೂಜಾ ವಿಧಾನ
ಈ ದಿನ ಬೆಳಿಗ್ಗೆ ಎಳ್ಳನ್ನು ಅರೆದು ನೆಲ್ಲಿಯ ಹಿಟ್ಟಿನೊಂದಿಗೆ ಹಾಲು ಅಥವಾ ಎಣ್ಣೆಯಲ್ಲಿ ಬೆರೆಸಿ ತಲೆಗೆ ಹಚ್ಚಿ ಮಂಗಳಸ್ನಾನ ಮಾಡಬೇಕು.
ಸ್ನಾನವಾದ ಮೇಲೆ ಸಂಕಷ್ಟಹರ ಗಣಪತಿ ವ್ರತದ ಸಂಕಲ್ಪ ಮಾಡಬೇಕು. ಈ ದಿನ ಹಗಲು ಪೂರ್ತಿ ಉಪವಾಸ ಇರಬೇಕು. ಅದು ಅಸಾಧ್ಯವಾದರೆ
ಹಾಲು, ಹಣ್ಣು ಸೇವಿಸಬಹುದು.

ಪೂಜೆಯ ಮಾಡುವ ಸ್ಥಳವನ್ನು ಗೋಮಯದಿಂದ ಶುದ್ಧಗೊಳಿಸಿ, ಅಷ್ಟದಳ ಗಣಪತಿಯ ಮಂಡಲವನ್ನು ಬಿಳಿಯ ಮಣ್ಣಿನಿಂದ ಬರೆಯಬೇಕು.
ಅರಿಸಿನ ಕುಂಕುಮಗಳಿಂದ ಮಂಡಲವನ್ನು ಅಲಂಕರಿಸಬೇಕು ಇದರ ಮೇಲೆ ಕಲಶವನ್ನು ಸ್ಥಾಪಿಸುವುದಕ್ಕಾಗಿ ಎರಡು ಅಗ್ರವಿರುವ ಬಾಳೆಯ ಎಲೇ ಮೇಲೆ ಅಕ್ಕಿಯನ್ನು ಹರಡಬೇಕು.

ಅದರ ಮೇಲೆ ಮೃತ್ತಿಕೆ ನಾಣ್ಯ ಮತ್ತು ನೀರು ಹಾಕಿದ ಕಲಶವನ್ನಿಟ್ಟು, ಅದರ ಮೇಲೆ ಮಾವಿನ ಚಿಗುರು ತೆಂಗಿನಕಾಯಿ ನಾಣ್ಯ ಪವಿತ್ರ ಉಪವೀತಗಳನ್ನು ಇಟ್ಟು, ಎದುರಲ್ಲಿ ವೀಳ್ಯದ ಎಲೆ ಅಡಿಕೆ ಬಾಳೆಹಣ್ಣು ಇಡಬೇಕು. ಈ ಕಲಶಕ್ಕೆ ಪೂಜೆ ಮಾಡಿ ಗಣಪತಿಯನ್ನು ಆವಾಹನೆ ಮಾಡಿ, ಷೋಡಶೋಪಚಾರ ಪೂಜೆ ಮಾಡಬೇಕು.

ಆವಾಹನೆ, ಆಸನ, ಪಾದ್ಯ, ಅರ್ಘ್ಯ ,ಆಚಮನ, ಮಧುಪರ್ಕ,ಪುನರಾಚಮನ,ಪಂಚಾಮೃತ, ಶುದ್ಧೋದಕ ಸ್ನಾನ, ವಸ್ತ್ರ ಉಪವೀತ, ಆಭರಣ ಗಂಧ, ಅಕ್ಷತೆ, ಹೂ ಮುಂತಾದ ಉಪಚಾರಗಳಾದ ಮೇಲೆ ದೂರ್ವೆಗಳಿಂದ (ಎಂದರೆ ಗರಿಕೆಯಿಂದ) ಅಷ್ಟೋತ್ತರ ಶತ ನಾಮಾವಳಿ ಅಥವಾ ಗಕಾರ ಸಹಸ್ರನಾಮ ಪೂಜೆ ಮಾಡಬೇಕು.

ಅಂಗಾರಕ ವ್ರತದ ಕಥೆಯನ್ನು ಓದಬೇಕು
ಕಥೆಯು ಹೀಗಿದೆ.
ಕಥಾಶ್ರವಣ

ಸುಲಭನೆಂಬ ಕ್ಷತ್ರಿಯನು ಸಮುದ್ರೆಯೆಂಬ ಪತ್ನಿಯೊಂದಿಗೆ ಪುರಾಣವನ್ನು ಕೇಳುತ್ತಿದ್ದಾಗ ಮಧುಸೂದನ ಎಂಬವನು ಅಲ್ಲಿಗೆ ಬಂದನು.

ಅವನನ್ನು ನೋಡಿ ಸುಲಭನು ನಗೆಯಾಡಲು, ಸಿಟ್ಟಿಗೆದ್ದ ಮಧುಸೂದನನು ಎತ್ತಾಗುವಂತೆ ಸುಲಭನನ್ನು ಶಪಿಸಿದನು. ಇದರಿಂದ ಕೋಪಗೊಂಡ ಸುಲಭೆಯು ಮಧುಸೂದನನು ಕತ್ತೆಯಾಗುವಂತೆ ಶಪಿಸಿದಳು. ಇದರಿಂದ ಇನ್ನೂ ಕೋಪಗೊಂಡ ಮಧುಸೂದನನು ಆಕೆಗೆ ಪತಿತಳಾಗುವಂತೆ ಶಪಿಸಿದನು.

ಹೀಗೆ ಮೂವರೂ ಶೋಚನೀಯ ಸ್ಥಿತಿಗೆ ತಲುಪಿ ಸಂಚರಿಸುತ್ತಿರುವಾಗ ದೇವಾಲಯವೊಂದರಲ್ಲಿ ಸಂಕಷ್ಟಹರ ಗಣಪತಿಯ ಪೂಜೆ ನಡೆಯುತ್ತಿದ್ದುದನ್ನು ನೋಡಿದರು. ಈ ಶಾಪಗ್ರಸ್ತರಿಗೆ ಅಲ್ಲಿ ಸ್ಥಳವು ದೊರೆಯದಿದ್ದರೂ ಪರಲೋಕದಲ್ಲಿ ಸುಸ್ವಾಗತವು ದೊರೆಯಿತು. ಕೌಂಡಿನ್ಯ ಆಶ್ರಯೆ ಎಂಬ ದಂಪತಿಗಳು ದೂರ್ವೆಯ ಮಹಿಮೆಯನ್ನು ಚರ್ಚಿಸುತ್ತಾರೆ. ಯಮಲೋಕದ ಉತ್ಸವವೊಂದರಲ್ಲಿ ಯಮನು ತಿಲೋತ್ತಮೆಯ ನರ್ತನದಿಂದ ಆಕರ್ಷಿತನಾದನು. ಕೂಡಲೇ ಅಲ್ಲಿಂದ ಹೊರಟರೂ ಯಮನ ತೇಜಸ್ಸಿನಿಂದ ಜ್ವಾಲಾಮಾಲಿಯೆಂಬ ಅಯೋನಿಜನು ಜನಿಸಿದನು.

ಲೋಕಕಂಟಕನಾದ ಅವನನ್ನು ಕೊಲ್ಲಲು ಗಣಪತಿಯೇ ಬರಬೇಕಾಯಿತು. ಅನಲಾಸುರನನ್ನೂ ಆಗ ಸಂಹರಿಸಿದ ಗಣೇಶನಿಗೆ ಚಂದ್ರ ಸಿದ್ಧಿ ಬುದ್ಧಿ ತಾವರೆ ಶೇಷ ಮುಂತಾದವು ಕೊಡುಗೆಯಾಗಿ ದೊರೆತವು. ಆದರೆ ಅವನಿಗೆ ಮನಃಶಾಂತಿ ದೊರೆಯದೆ, ದೂರ್ವಾರ್ಚನೆ ಮಾಡಿದ ಮೇಲೆಯೇ ಮನಸ್ಸಿಗೆ ಶಾಂತಿ ದೊರೆಯಿತು.

ಮಿಥಿಲೆಯ ರಾಜನಾದ ಜನಕನು ಅಪರಿಮಿತವಾಗಿ ಅನ್ನದಾನ ಮಾಡುತ್ತಿದ್ದರೂ ಅವನ ಸಂಪತ್ತು ಹಾಗೆಯೇ ಇದ್ದಿತು. ಇದರಿಂದ ಗರ್ವಿತನಾದ ರಾಜನನ್ನು ಸಾತ್ವಿಕನನ್ನಾಗಿಸಲು ಗಣಪತಿಯು ಕುಷ್ಠರೋಗಿಯಾಗಿ ಬಂದು ಭೋಜನಶಾಲೆಯಲ್ಲಿ ಉಂಡು ಅನ್ನವಿಲ್ಲದಂತೆ ಮಾಡಿದನು. ಬಡದಂಪತಿಗಳ ದೂರ್ವೆಯೊಂದರಿಂದ ತೃಪ್ತನಾಗಿ ಅವರಿಗೆ ವರದಾನ ಮಾಡಿದ್ದನ್ನು ನೋಡಿದ ಮೇಲೆ ರಾಜನಿಗೆ ಜ್ಞಾನೋದಯವಾಯಿತು.

ಆಶ್ರಯೆಯು ನಾರದರ ಸೂಚನೆಯಂತೆ ದೂರ್ವಾದಳದ ಭಾರಕ್ಕೆ ಸರಿಯಾದ ಚಿನ್ನವನ್ನು ಯಾಚಿಸಲು ಇಂದ್ರ ಕುಬೇರ ವಿಷ್ಣು ಶಿವ ಮುಂತಾದ ಮಹಾಮಹಿಮರೆಲ್ಲರೂ ಅದನ್ನು ನೀಡುವಲ್ಲಿ ವಿಫಲರಾದರು.

ಕೃತವೀರ್ಯ ಶೂರಸೇನ ಸ್ಕಂದ ಪಾರ್ವತೀ ದಮಯಂತೀ ನಳ ಪ್ರದ್ಯುಮ್ನ ರುಕ್ಮಿಣೀ ಶ್ರೀಕೃಷ್ಣ ಮುಂತಾದವರು ಆಚರಿಸಿದ ಈ ವ್ರತ ಅಸಾಧಾರಣವಾದುದು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕಥಾಶ್ರವಣವಾದ ಮೇಲೆ

ಧೂಪ ದೀಪವಾದ ಮೇಲೆ ನೈವೇದ್ಯಕ್ಕೆ ಕರಿಗಡುಬು, ಮೋದಕ ಇಡಬೇಕು. ಮೈದಾ ಹಿಟ್ಟು, ರವೆಯನ್ನು ಕಲಸಿ ಕಣಕ ಮಾಡಿ, ಒಳಗೆ ಹೂರಣ ಸೇರಿಸಿ ಎಣ್ಣೆಯಲ್ಲಿ ಕರಿಯುತ್ತಾರೆ.

ಹೂರಣವನ್ನು ಎರಡು ತರಹ ಮಾಡುತ್ತಾರೆ. ಕೊಬ್ಬರಿ ತುರಿ, ಸಕ್ಕರೆ, ಏಲಕ್ಕಿ ಅಥವಾ ಬೆಲ್ಲ, ಕಾಯಿ ತುರಿ, ಏಲಕ್ಕಿ. ಈ ದಿನ ಕಡುಬು ಮಾಡುವಾಗ ಹೂರಣಕ್ಕೆ ಎಳ್ಳನ್ನು ಸೇರಿಸಬೇಕು.

ನೈವೇದ್ಯಕ್ಕೆ ಕನಿಷ್ಠ ಇಪ್ಪತ್ತೊಂದು ಕರಿಗಡಬು ಮತ್ತು ಮೋದಕಗಳನ್ನು ಮಾಡಿಕೊಳ್ಳಬೇಕು. ಪೂಜೆಯ ನಂತರ ಕಡಬು, ಮೋದಕ ದಾನ ಮಾಡಿ, ಉಳಿದ ಕಡಬು, ಮೋದಕಗಳನ್ನು ಪ್ರಸಾದವಾಗಿ ಸ್ವೀಕರಿಸಬೇಕು.

ಎಷ್ಟು ಬೇಕೋ ಅಷ್ಟು ಕರಿಗಡುಬು, ಮೋದಕ ಮಾಡಿಕೊಳ್ಳಬಹುದು. ನೈವೇದ್ಯವಾದ ಮೇಲೆ ಫಲ ಸಮರ್ಪಣ, ದೂರ್ವಾಪೂಜೆ, ಮಂಗಳಾರತಿ, ಮಂತ್ರಪುಷ್ಪ, ಪ್ರದಕ್ಷಿಣ, ನಮಸ್ಕಾರ, ಪ್ರಸನ್ನಾರ್ಘ್ಯ, ಪ್ರಾರ್ಥನೆ ಮಾಡಿ ಪೂಜಾ ಸಮಾಪ್ತಿ ಮಾಡಬೇಕು. ವಾಯನದಾನ, ತೀರ್ಥಪ್ರೋಕ್ಷಣ, ಕಲಶದಾನಗಳಿಂದ ಪೂಜೆ ಸಾಂಗವಾಗಿ ಮುಕ್ತಾಯಗೊಳ್ಳುವುದು.
ಶ್ರೀಮಧ್ವೇಶಾರ್ಪಣಮಸ್ತು

Tags: #astrology#Hindu culture.#saakshatvbengaluruhoroscopekarnatakalord ganeshaPandit Jnaneshwar Rao
ShareTweetSendShare
Join us on:

Related Posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

by admin
January 30, 2026
0

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ'...

If you do this remedy with turmeric and ghee on Friday, health and financial problems will definitely go away.

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ..

by admin
January 30, 2026
0

ಮನೆಯ ಪ್ರತಿ ಕಷ್ಟಗಳು ದೂರವಾಗಬೇಕು ಎಂದರೆ ಅರಿಶಿನದಿಂದ ಈ ಚಿಕ್ಕ ಉಪಾಯವನ್ನು ಮಾಡಿ ಮನೆಯ ಯಜಮಾನಿ ಅರಿಶಿನ ಹಾಗು ತುಪ್ಪದಿಂದ ಈ ಚಿಕ್ಕ ಉಪಾಯವನ್ನು ಮಾಡಿದರೆ ಲಕ್ಷ್ಮಿ...

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

If you regularly chant these 10 mantras of Lord Sri Hari on Ekadashi, your life will change within 24 hours due to its effective influence..!

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

by admin
January 29, 2026
0

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ...

If there are photos of ancestors in this direction, remove them immediately, otherwise you will definitely get Pitru Dosha.

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

by admin
January 28, 2026
0

ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram