ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಕರ ಸಂಕ್ರಾತಿಯ  ಪೌರಾಣಿಕ ಹಿನ್ನಲೆ ಮತ್ತು ವೈಜ್ಞಾನಿಕ ನೋಟ..!

Namratha Rao by Namratha Rao
January 14, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

ನಾನು ಹಿಂದೂಸ್ತಾನಿ, ನಾನು ಕನ್ನಡಿಗ – ನನ್ನ ದೇಶಪ್ರೇಮಕ್ಕೆ ಬಿಜೆಪಿಯ ಸರ್ಟಿಫಿಕೇಟ್ ಬೇಕಿಲ್ಲ: ಧ್ವಜಾರೋಹಣ ವಿವಾದಕ್ಕೆ ಜಮೀರ್ ತೆರೆ

ನಾನು ಹಿಂದೂಸ್ತಾನಿ, ನಾನು ಕನ್ನಡಿಗ – ನನ್ನ ದೇಶಪ್ರೇಮಕ್ಕೆ ಬಿಜೆಪಿಯ ಸರ್ಟಿಫಿಕೇಟ್ ಬೇಕಿಲ್ಲ: ಧ್ವಜಾರೋಹಣ ವಿವಾದಕ್ಕೆ ಜಮೀರ್ ತೆರೆ

August 16, 2026
‘ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ?’: ಖಾಕಿ ಪಡೆಗೆ ಧಮ್ಕಿ ಹಾಕಿದ  ಸಿಜೆಪಿ ನಾಯಕ ಆಶುತೋಷ್ ರಾಂಕಾ

‘ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ?’: ಖಾಕಿ ಪಡೆಗೆ ಧಮ್ಕಿ ಹಾಕಿದ ಸಿಜೆಪಿ ನಾಯಕ ಆಶುತೋಷ್ ರಾಂಕಾ

August 16, 2026

ಮಕರ ಸಂಕ್ರಾತಿಯ  ಪೌರಾಣಿಕ ಹಿನ್ನಲೆ ಮತ್ತು ವೈಜ್ಞಾನಿಕ ನೋಟ..!

ಹಿಂದೂಗಳು ಆಚರಣೆ ಮಾಡುವ ಮುಖ್ಯ ಹಬ್ಬಗಳಲ್ಲಿ ಒಂದಾಗಿರುವ ಮಕರ ಸಂಕ್ರಾಂತಿಯು ಅನೇಕ ವಿಶೇಷತೆಗಳಿಂದ ಕೂಡಿದೆ. ಒಂದೊಂದು ಭಾಗದಲ್ಲೂ ಒಂದೊಂದು ರೀತಿಯಲ್ಲಿ ವಿಶೇಷವಾಗಿ ಆಚರನೆ ಮಾಡಲಾಗುತ್ತೆ. ಅದ್ರಲ್ಲೂ ದಕ್ಷಿಣ ಭಾರತದಲ್ಲಿ ಅದ್ಧೂರಿಯಾಗಿ ಸಂಕ್ರಾಂತಿ ಆಚರಿಸಲಾಗುತ್ತೆ. ವರ್ಷದ ಮೊದಲ ಬೆಳೆ, ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತವಾಗಿದೆ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ.  ಅದ್ರಲ್ಲೂ ಮುಖ್ಯವಾಗಿ ಕರ್ನಾಟಕ,  ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಈ ಹಬ್ಬವನ್ನ ಅದ್ಧೂರಿಯಾಗಿ ಸಾಂಪ್ರದಾಯಿಕ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ.

ಪೌರಾಣಿಕ ಹಿನ್ನೆಲೆ

ಈ ಮಕರ ಸಂಕ್ರಾತಿಯ ಪೌರಾಣಿಕ ಹಿನ್ನೆಲೆಯನ್ನ ನೋಡೋದಾದ್ರೆ ಜ್ಯೋತಿಷ್ಯ ಶಾಸ್ತ್ರ, ಪುರಾಣಗಳಲ್ಲಿ ಅನೇಕ ವಿಭಿನ್ನ ರೀತಿಯ ವಿಶ್ಲೇಷಣೆಗಳು ಸಿಗುತ್ತವೆ. ಜೋತಿಷ್ಯ ಶಾಸ್ತ್ರದ ಪ್ರಕಾರ ನೋಡುವುದಾದರೆ,  ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿವುದನ್ನೇ, ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಜನವರಿ 14 ರಂದು ನಡೆಯುವ ಮಕರಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ. ಮಹಾಭಾರತದ  ಕತೆಯಲ್ಲಿ ಇಚ್ಚಾ ಮರಣಿಯಾದ.  ಭೀಷ್ಮರು ಪ್ರಾಣ ಬಿಡಲು ಉತ್ತರಾಯಣ ಪರ್ವ ಕಾಲವನ್ನು ಕಾದಿದ್ದರು ಎಂಬ ಉಲ್ಲೆಖವೂ ಇದೆ.

ಜಗಚ್ಚಕ್ಷುವಾದ ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಯನ್ನು ಪ್ರವೇಶಿಸುವ ಸಂಧಿ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಹೆಸರು ಸೌರಮಾನದ ಪ್ರಕಾರ ಸೂರ್ಯನು ಮೇಷಾದಿ ಹನ್ನೆರಡು ರಾಶಿಗಳನ್ನು ಪ್ರವೇಶಿಸುವಾಗಲೂ ಸಂಕ್ರಾಂತಿ ಬರುತ್ತದೆ. ಆದರೆ ಅವುಗಳಲ್ಲಿ ಕರ್ಕಾಟಕ ಸಂಕ್ರಾಂತಿ ಹಾಗೂ ಮಕರ ಸಂಕ್ರಾಂತಿಗಳು ದಕ್ಷಿಣಾಯನ, ಉತ್ತರಾಯಣಗಳ ಪ್ರಾರಂಭದ ದಿನಗಳಾದ್ದರಿಂದ ವಿಶೇಷ ಮಹತ್ವವುಳ್ಳವುಗಳಾಗಿವೆ. ಸಂಕ್ರಾಂತಿ ಒಂದು ವಿಧದಲ್ಲಿ ಸೂರ್ಯಾರಾಧನೆ.

ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ, ಎಲ್ಲೆಲ್ಲಿ ಹೇಗೆ ಆಚರಣೆ ಮಾಡಲಾಗುತ್ತೆ ನಿಮಗೆ ಗೊತ್ತಿದ್ಯಾ…!

ಇನ್ನೂ ಇದನ್ನ ಉತ್ತರಾಯಣ ಪಣ್ಯ ಕಾಲ ಎಂದೂ  ಕರೆಯಲಾಗುತ್ತೆ.  ಮಾಸದಲ್ಲಿ ಬರುವ (ಜನವರಿ 13 ಅಥವಾ 14 ರಂದು) ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯಕಾಲವೆಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಉತ್ತರಾಯಣ ಪುಣ್ಯಕಾಲ ಶ್ರೇಷ್ಠವೆಂದು ಹೇಳಲಾಗಿದೆ. ಅದಕ್ಕಾಗಿಯೇ ಭೀಷ್ಮ ದೇಹ ತ್ಯಜಿಸಲು, ಉತ್ತರಾಯಣದ ಕಾಲದವರೆಗೂ, ಶರಶಯ್ಯೆಯಲ್ಲಿ ಹರಿಸ್ಮರಣೆ ಮಾಡುತ್ತಾ ಕಾದಿದ್ದರು. ಉತ್ತರಾಯಣ, ದೇವತೆಗಳ ಕಾಲ, ದಕ್ಷಿಣಾಯನ ಪಿತೃಗಳ ಕಾಲವಾಗಿರುತ್ತದೆ. ಆದ್ದರಿಂದ ಯಜ್ಞ ಯಾಗಾದಿಗಳಿಗೆ, ಸಮಸ್ತ ದೇವತಾ ಕಾರ್ಯ ಶುಭಕಾರ್ಯಗಳಿಗೆ ಉತ್ತರಾಯಣ ಕಾಲ ಶ್ರೇಷ್ಠವಾಗಿದೆ.

ಸೂರ್ಯನು ಇದೇ ಜನವರಿ 13 ರಂದು ರಾತ್ರಿ 12 ಗಂಟೆ 57 ನಿಮಿಷಕ್ಕೆ ನಿರಯಣ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಈ ವೇಳೆಗೆ ರಾತ್ರಿಯಾಗಿದ್ದರಿಂದ ಜನವರಿ 14ರಂದು ಮಕರ ಸಂಕ್ರಾತಿಯನ್ನು ಆಚರಿಸಲಾಗುತ್ತದೆ. 14ರಂದು ಹಗಲು ಪೂರ್ತಿ ಅಂದರೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪುಣ್ಯ ಕಾಲವಿರುತ್ತದೆ.

ವೈಜ್ಞಾನಿಕ ನೋಟ:

ರೈತರು ತಾವು ಬೆಳೆದ ಧಾನ್ಯ, ಕಬ್ಬನ್ನು ಈ ದಿನ ದೇವಸ್ಥಾನಕ್ಕೆ, ತನ್ನ ನೆರೆಹೊರೆಯವರಿಗೆ ಹಂಚುತ್ತಾರೆ. ಜೊತೆಗೆ ಎಳ್ಳು  ಬೆಲ್ಲವನ್ನು ಆತ್ಮೀಯರಿಗೆ ಹಂಚುವ ಮೂಲಕ ಒಳ್ಳೆಯ ಮಾತಾಡಿ ಎಂಬ ಸಂದೇಶ ರವಾನಿಸುತ್ತಾರೆ. ಈ ಮೂಲಕ ಮತ್ತಷ್ಟು  ಬಾಂಧವ್ಯವನ್ನು ಸದೃಢಗೊಳ್ಳುತ್ತೆ. ಇನ್ನೂ  ಚಳಿಗಾಲದ ಶೀತ ವಾತಾವರಣದಲ್ಲಿ ದೇಹಕ್ಕೆ ಉಷ್ಣತೆಯನ್ನು ನೀಡುವುದರ ಜೊತೆಗೆ ಇ ಪದಾರ್ಥಗಳು  ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿರೋದು ವೈಜ್ಞಾನಿಕ ಕಾರಣವಾಗಿದೆ.

ಇನ್ನೂ ವರ್ಷವಿಡೀ ಬೆವರು ಸುರಿಸಿ ದುಡಿವ ರೈತನಿಗೆ ಹೆಗಲಾಗಿದ್ದುಕೊಂಡು ಶ್ರಮಿಸುವ ಹಸುಗಳಿಗೂ ಈ ದಿನ ಸ್ನಾನ ಮಾಡಿಸಿ ಬಣ್ಣಗಳಿಂದ ಹಸುಗಳಿಗೆ ಅಲಂಕಾರ ಮಾಡಿ ಕಾಲಿಗೆ ಗೆಜ್ಜೆಗಳನ್ನು ಕಟ್ಟಿ, ಪೂಜೆ ಮಾಡುತ್ತಾರೆ. ಸಂಜೆಯ ವೇಳೆ ಭತ್ತದ ಹುಲ್ಲಿನ ರಾಶಿ ಹಾಕಿ ಕಿಚ್ಚನ್ನು ಉರಿಸಲಾಗುತ್ತದೆ. ಈ ಕಿಚ್ಚು ಏಳುತ್ತಿದ್ದಂತೆ ರಾಸುಗಳನ್ನು ಹಾಯಿಸಲಾಗುತ್ತದೆ. ಕಿಚ್ಚು ಹಾಯಿಸುವುದರಿಂದ ಹಸುಗಳ ಮೈಯಲ್ಲಿರುವ ಉಣ್ಣೆ ನಿಯಂತ್ರಣವಾಗುತ್ತದೆ. ಇದು ಈ ಸಂಪ್ರದಾಯದ ಹಿಂದಿನ ವೈಜ್ಞಾನಿಕ ಕಾರಣ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: makara sankranthi 2021sankranthisankrathi specialities rituals
ShareTweetSendShare
Join us on:

Related Posts

ನಾನು ಹಿಂದೂಸ್ತಾನಿ, ನಾನು ಕನ್ನಡಿಗ – ನನ್ನ ದೇಶಪ್ರೇಮಕ್ಕೆ ಬಿಜೆಪಿಯ ಸರ್ಟಿಫಿಕೇಟ್ ಬೇಕಿಲ್ಲ: ಧ್ವಜಾರೋಹಣ ವಿವಾದಕ್ಕೆ ಜಮೀರ್ ತೆರೆ

ನಾನು ಹಿಂದೂಸ್ತಾನಿ, ನಾನು ಕನ್ನಡಿಗ – ನನ್ನ ದೇಶಪ್ರೇಮಕ್ಕೆ ಬಿಜೆಪಿಯ ಸರ್ಟಿಫಿಕೇಟ್ ಬೇಕಿಲ್ಲ: ಧ್ವಜಾರೋಹಣ ವಿವಾದಕ್ಕೆ ಜಮೀರ್ ತೆರೆ

by Shwetha
August 16, 2026
0

ಬೆಂಗಳೂರು: "ನಾನು ಹಿಂದೂಸ್ತಾನಿ, ನಾನು ಕನ್ನಡಿಗ. ದೇಶಾಭಿಮಾನ ಮತ್ತು ದೇಶಭಕ್ತಿಯನ್ನು ನಾವು ಬಿಜೆಪಿಯವರಿಂದ ಕಲಿಯಬೇಕಾದ ಅಗತ್ಯವಿಲ್ಲ" ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿಪಕ್ಷಗಳ ಟೀಕೆಗೆ...

‘ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ?’: ಖಾಕಿ ಪಡೆಗೆ ಧಮ್ಕಿ ಹಾಕಿದ  ಸಿಜೆಪಿ ನಾಯಕ ಆಶುತೋಷ್ ರಾಂಕಾ

‘ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ?’: ಖಾಕಿ ಪಡೆಗೆ ಧಮ್ಕಿ ಹಾಕಿದ ಸಿಜೆಪಿ ನಾಯಕ ಆಶುತೋಷ್ ರಾಂಕಾ

by Shwetha
August 16, 2026
0

ಜೈಪುರ: ಜರ್ಜರಿತಗೊಂಡಿದ್ದ ಸರ್ಕಾರಿ ಶಾಲೆಯ ಕಟ್ಟಡದ ಛಾವಣಿ ಕುಸಿದು ಬಿದ್ದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳದಲ್ಲಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ತೀವ್ರ ಹೈಡ್ರಾಮಾ...

‘ನಮ್ಮ ಕುಟುಂಬ ಕಾಪಾಡಿದ್ದು ಭಾರತೀಯ ಸೇನೆ, RSS ಅಲ್ಲ’: ಕಲಬುರಗಿಯಲ್ಲಿ ಇರೋದು ಪಟೇಲರ ಪ್ರತಿಮೆ, ಚಡ್ಡಿ ಹಾಕಿರೋರದ್ದಲ್ಲ -ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ರಿವರ್ಸ್ ಅಟ್ಯಾಕ್

‘ನಮ್ಮ ಕುಟುಂಬ ಕಾಪಾಡಿದ್ದು ಭಾರತೀಯ ಸೇನೆ, RSS ಅಲ್ಲ’: ಕಲಬುರಗಿಯಲ್ಲಿ ಇರೋದು ಪಟೇಲರ ಪ್ರತಿಮೆ, ಚಡ್ಡಿ ಹಾಕಿರೋರದ್ದಲ್ಲ -ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ರಿವರ್ಸ್ ಅಟ್ಯಾಕ್

by Shwetha
August 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಆರ್‌ಎಸ್‌ಎಸ್ ನಡುವಿನ ಸಮರ ಈಗ ಮತ್ತಷ್ಟು ತೀವ್ರಗೊಂಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಇತಿಹಾಸ ಮತ್ತು...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 16, 2026
0

ದಿನ ಭವಿಷ್ಯ: 16-08-2026. ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಚೈತನ್ಯ ಮತ್ತು ಆತ್ಮವಿಶ್ವಾಸ ತುಂಬಿರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳನ್ನು ಮೇಲಧಿಕಾರಿಗಳು...

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram