ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೆಚ್ಚಿನ ನಾಯಕನನ್ನು ಪಟ್ಟಕ್ಕೇರಿಸಿದ ಸಂತೋಷ್ ಯಾರು..?

Mahesh M Dhandu by Mahesh M Dhandu
November 28, 2020
in Newsbeat, Politics, ರಾಜಕೀಯ
sucide attempt
Share on FacebookShare on TwitterShare on WhatsappShare on Telegram

ಬಿಎಸ್ ವೈಗೂ ಸಂತೋಪ್ ಗೂ ಇರುವ ಸಂಬಂಧವೇನು..?

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ನಿನ್ನೆ ರಾತ್ರಿ ಆತ್ಮಹತ್ಯಗೆ ಯತ್ನಿಸಿದ್ದಾರೆ. ಸದ್ಯ ಅವರಿಗೆ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆತ್ಮಹತ್ಯೆಗೆ ಯತ್ನಿಸಿರುವ ಸಂತೋಷ್ ಮಾನಸಿಕ ನೋವಿಗೆ ಕಾರಣ ಇನ್ನೂ ನಿಗೂಢವಗಿದೆ.

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

March 29, 2026

santhosh

ಹಾಗಾದ್ರೆ ಯಾರು ಈ ಎನ್.ಆರ್ ಸಂತೋಷ್..?

ಬಿಎಸ್ ವೈಗೂ ಸಂತೋಪ್ ಗೂ ಇರುವ ಸಂಬಂದವೇನು..?

ಸಂತೋಷ್ ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು..?

ಸದ್ಯ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎನ್.ಆರ್. ಸಂತೋಷ್ ಹೆಸರು ಮುನ್ನೆಲೆಗೆ ಬಂದಿದ್ದು ಕೇವಲ ನಾಲ್ಕು ವರ್ಷಗಳ ಹಿಂದೆ.

ಹೌದು..!
ಯಡಿಯೂರಪ್ಪ ಅವರಿಗೆ ನಂಬಿಕಸ್ಥ ಪಿಎ ಆಗಿದ್ದ ಕಾಪು ಸಿದ್ಧಲಿಂಗಸ್ವಾಮಿ ಅವರನ್ನು ಏಕಾಏಕಿ ಹೊರ ಹಾಕಲಾಯಿತು. ಈ ಸಂದರ್ಭದಲ್ಲಿ ಬಿಎಸ್ ವೈ ರ ದೂರದ ಸಂಬಂಧಿಯಾಗಿದ್ದ ಸಂತೋಷ್, ಬುದ್ಧಿವಂತ, ಸಂಘದ ಹಿನ್ನೆಲೆಯುಳ್ಳವ, ಸಂಘಟನಾ ಚತುರ ಎಂಬ ಕಾರಣಕ್ಕೆ ಆರಂಭದಲ್ಲಿ ಸಿದ್ದಲಿಂಗ ಸ್ವಾಮಿ ಜಾಗಕ್ಕೆ ಬಂದರು.

ಯಡಿಯೂರಪ್ಪ ಅವರ ದಿನ ವಹಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದರು. ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಬರುವ ನಾಯಕರೊಂದಿಗೂ ಅತ್ಯುತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದರು. ಇಷ್ಟಾಗಿಯೂ ಸಂತೋಷ್ ಹೆಸರು ಎಲ್ಲೂ ಪ್ರಸ್ತಾಪ ಆಗಿರಲಿಲ್ಲ.

ಆದ್ರೆ 2017 ರಲ್ಲಿ ಕೆ.ಎಸ್. ಈಶ್ವರಪ್ಪ ಅವರ ಆಪ್ತ ನಾಗಿದ್ದ ವಿನಯ್ ಅಪಹರಣಕ್ಕೆ ಯತ್ನಿಸಿ ಮಾರಣಾಂತಿಕ ಹಲ್ಲೆ ನಡೆದಿತ್ತು. ವಿನಯ್ ಬಳಿ ಇದೆ ಎನ್ನಲಾದ ಒಂದು ಸಿಡಿಗಾಗಿ ಆ ದಾಳಿ ನಡೆದಿತ್ತು.

ವಿನಯ್ ನನ್ನು ಅಪಹರಣ ಮಾಡಿಸಲು ಸುಪಾರಿ ನೀಡಿದ್ದ ಆರೋಪ ಸಂತೋಷ್ ಮೇಲೆ ಕೇಳಿ ಬಂದಿತ್ತು. ತಲೆಮರೆಸಿಕೊಂಡಿದ್ದ ಸಂತೋಷ್ ಗಾಗಿ ಪೊಲೀಸರು ಶೋಧ ನಡೆಸಿದ್ದರು.

ಮೊಬೈಲ್ ಮಾಹಿತಿ ಆಧರಿಸಿ ಯಡಿಯೂರಪ್ಪ ಅವರ ಮನೆಯಲ್ಲಿ ಶೋಧ ನಡೆಸಲು ಪ್ರಯತ್ನಿಸಿದ್ದರು. ಅಂತಿಮವಾಗಿ ಜಾಮೀನು ಪಡೆದು ಪೊಲೀಸರ ಮುಂದೆ ಸಂತೋಷ್ ಹಾಜರಾಗಿದ್ದರು.

ವಿನಯ್ ಹತ್ಯೆಗೆ ಯತ್ನಿಸಿದ ಆರೋಪದಡಿ ಸಂತೋಷ್ ಅವರನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

santhosh

ಇದಾದ ಬಳಿಕ ಸಂತೋಷ್ ಹೆಸರು ರಾಜ್ಯಕ್ಕೆ ಪರಿಚಯವಾಗಿತ್ತು. ಈ ಪ್ರಕರಣದ ಹೊರತಾಗಿಯೂ ಯಡಿಯೂರಪ್ಪ ಅವರು ಸಂತೋಷ್ ಅವರನ್ನು ಆಪ್ತ ಕಾರ್ಯದರ್ಶಿ ಹುದ್ದೆಯಿಂದ ಹೊರಗಿಡಲಿಲ್ಲ. ಅಷ್ಟರ ಮಟ್ಟಿಗೆ ಯಡಿಯೂರಪ್ಪ ಅವರ ನಂಬಿಕೆ ಗಳಿಸಿದ್ದರು.

ಈ ಮಧ್ಯೆ ಮೈತ್ರಿ ಸರ್ಕಾರ ಅಲುಗಾಡುತ್ತಿದೆ ಎಂಬ ಸಂಗತಿ ತಿಳಿದ ಸಂತೋಷ್, ಆಪರೇಷನ್ ಕಮಲ ಯಶಸ್ವಿಗೊಳಿಸಿ ತನ್ನ ನಾಯಕ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ರೆಬೆಲ್ ಶಾಸಕರಿಗೆ ಮೂಲ ಸೌಕರ್ಯ, ಪ್ಲೈಟ್ ಟಿಕೆಟ್ ಹೀಗೆ ಎಲ್ಲವನ್ನೂ ನಿಭಾಯಿಸುವ ಮೂಲಕ ದೊಡ್ಡ ಸುದ್ದಿಯಾಗಿದ್ದರು. ಸಂತೋಷ್ ಅವರ ಸೇವೆ ಹಾಗೂ ನಿಷ್ಠೆ ನೋಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತನ್ನ ರಾಜಕೀಯ ಕಾರ್ಯದರ್ಶಿ ಯನ್ನಾಗಿ ನೇಮಿಸಿಕೊಂಡಿದ್ದರು.

ಇನ್ನು ಇತ್ತೀಚೆಗೆ ನವೆಂಬರ್ 25 ರೊಳಗೆ ಸಂತೋಷ್ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಸಂಗತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಇದಾದ ಮೂರೇ ದಿನದಲ್ಲಿ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸದ್ಯ ಇದು ಭಾರಿ ಚರ್ಚೆ ಕಾರಣವಾಗಿದ್ದು, ತನ್ನ ನಿಷ್ಠೆಗೆ ಪ್ರತಿಫಲ ಸಿಗಲಿಲ್ಲ ಎಂಬ ಕಾರಣಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದರಾ ? ಅಥವಾ ವೈಯಕ್ತಿಕ ಕಾರಣಗಳಿಂದ ಜೀವ ತ್ಯಜಸಿಲು ಮುಂದಾದರೇ ಎಂಬುದು ಪೆÇಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ.

Tags: BS Yeddyurappasanthosh
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

by Shwetha
March 29, 2026
0

ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ ಎಂದು ಸಚಿವ S. S. ಮಲ್ಲಿಕಾರ್ಜುನ ತಿಳಿಸಿದ್ದಾರೆ. ಸದ್ಯ ಜಮೀರ್ ಅಹಮದ್...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram