Santosh Hegde | ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದಾರೆ
ಮೈಸೂರು : ಜೈಲಿಗೆ ಹೋಗಿ ಬಂದವರಿಗೆ ಸೇಬಿನ ಹಾರ ಹಾಕುತ್ತಾರೆ. ಭ್ರಷ್ಟರಿಗೆ, ಭ್ರಷ್ಟಾಚಾರಿಗೆ ಜೈಕಾರ ಹಾಕ್ತಾರೆ.
ಏರ್ಪೋರ್ಟ್ ಹೊರಗೆ ಹೋಗಿ ಸ್ವಾಗತ ಕೋರುತ್ತಾರೆ. ಸದ್ಯ ಜನರ ಮನಃ ಸ್ಥಿತಿ ಹಣ, ಅಧಿಕಾರದ ಹಿಂದೆ ಸಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟರಿಗೆ ಮಣೆ ಹಾಕ್ತಾರೆ. ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದಾರೆ.
ಮೂರು ಪಕ್ಷದವರು ಲೋಕಾಯುಕ್ತಕ್ಕೆ ವಿರೋಧಿಯಾಗಿದ್ದಾರೆ. ಚುನಾವಣೆಯ ಕಾರಣದಿಂದ ಗಿಮಿಕ್ ಮಾಡ್ತಿದ್ದಾರೆ.
ಒಂದು ವೇಳೆ ಸುಪ್ರೀಂ ಕೋರ್ಟ್ ಮೊರೆ ಹೋದರೆ ಅಧಿಕಾರ ಕಳೆದುಕೊಳ್ಳುವ ಭಯ ಇದೆ.

ಚುನಾವಣೆ ಸಮಿಪಿಸುತ್ತಿರುವ ಹಿನ್ನಲೆ ನೇರವಾಗಿ ಅಪೀಲು ಹೋಗ್ತಿಲ್ಲ. ಹಿಂಬಾಲಕರು ಹಿಂಬಾಗಿಲ ಮೂಲಕ ಸುಪ್ರೀಂ ಮೊರೆ ಹೋಗಬಹುದು ಅದಕ್ಕೆ ಅವಕಾಶ ಇದೆ.
ಸದ್ಯಕ್ಕೆ ಚುನಾವಣೆ ಇರುವ ಕಾರಣ ಗೌಣವಾಗಿದ್ದಾರೆ. ರಾಜ್ಯದಲ್ಲಿ ಪ್ರವಾಹ ಉಂಟಾಗಿ ಸಾವಿರರು ಕೋಟಿ ನಷ್ಠ ಉಂಟಾಗಿದೆ.
ಆದ್ರೇ ೪೦% ಕಮಿಷನ್ ಆಸೆಗಾಗಿ ಜನಪ್ರತಿನಿಧಿಗಳು ಅಧಿಕಾರಿಗಳು ಸೈಲೆಂಟ್ ಆಗಿದ್ದಾರೆ ಎಂದು ಆರೋಪಿಸಿದರು.
ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ. ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ. ಮೂರು ಪಕ್ಷದಲ್ಲೂ ಕೂಡ ಈ ತೀರ್ಪುನ್ನ ವಿರೋಧಿಸಬಹುದು.
ಕಾರಣ ಲೋಕಾಯುಕ್ತ ಇದ್ದ ವೇಳೆ ಸಾಕಷ್ಟು ಪ್ರಕರಣಗಳಲ್ಲಿ ಶಿಕ್ಷೆ ಆಗಿತ್ತು.
ಎಸಿಬಿ ಬಂದ ಬಳಿಕ ಯಾವೊಬ್ಬ ರಾಜಕಾರಣಿ ಮೇಲೆ, ಅಧಿಕಾರಿಯ ಮೇಲೆ ಕ್ರಮ ಜರುಗಿಸರಲಿಲ್ಲ.
ಲೋಕಾಯುಕ್ತಕ್ಕೆ ಸ್ವಾತಂತ್ರ್ಯವಾದ ಅಧಿಕಾರ ಹಾಗೂ ಸವಲತ್ತುಗಳನ್ನ ನೀಡಬೇಕು ಎಂದು ಒತ್ತಾಯಿಸಿದರು.