ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದ ಪ್ರಮುಖ ಸುದ್ದಿಗಳು : LATEST UPDATES

Namratha Rao by Namratha Rao
February 28, 2021
in Newsbeat, State, ರಾಜ್ಯ
weekend curfew in bangalore latest news today saaksha tv
Share on FacebookShare on TwitterShare on WhatsappShare on Telegram

ರಾಜ್ಯದ ಪ್ರಮುಖ ಸುದ್ದಿಗಳು : LATEST UPDATES

ಪೂರ್ಣ ಸುದ್ದಿಗಳನ್ನು ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

ಮಾರ್ಚ್ 27ರಂದು ಕರ್ನಾಟಕ ಬಂದ್

ಮಾರ್ಚ್ 27ರಂದು ಕರ್ನಾಟಕ ಬಂದ್

Related posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025
ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

December 15, 2025

ಬೆಂಗಳೂರು : ಬೆಲೆ ಏರಿಕೆ ವಿರೋಧಿಸಿ ಹಾಗೂ ತಮಿಳುನಾಡು ಕೈಗೆತ್ತಿಕೊಂಡಿರುವ ಕಾವೇರಿ ನೀರಾವರಿ ಯೋಜನೆಗಳನ್ನು ಕೈ ಬಿಡುವಂತೆ ಒತ್ತಾಯಿಸಿ ಮಾರ್ಚ್ 27 ರಂದು ಕರ್ನಾಟಕ ಬಂದ್ ನಡೆಸಲು ಕನ್ನಡ ಒಕ್ಕೂಟ ಮುಂದಾಗಿದೆ. ಬೆಲೆ ಏರಿಕೆ ಮತ್ತು ತಮಿಳುನಾಡು ಕಾವೇರಿ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ತಮಿಳುನಾಡಿನ ಕಾವೇರಿ ನದಿ ಜೋಡಣೆಯಿಂದಾಗಿ ಕರ್ನಾಟಕಕ್ಕೆ ಭಾರಿ ನಷ್ಟವಾಗುತ್ತದೆ. ಹೀಗಾಗಿ ಕರ್ನಾಟಕ ಸರ್ಕಾರ ಪ್ರಧಾನಿ ಅವರನ್ನು ಭೇಟಿ ಮಾಡಿ ಕಾಮಗಾರಿಗೆ ತಡೆ ತರಬೇಕು ಎಂದು ಮನವಿ ಮಾಡಿಕೊಂಡರು.

`ಈ ಸಲ ಕಪ್ ನಮ್ಮದಾಗ್ಲಿ’ ಅಂತಾ ಹರಕೆ ಕಟ್ಟಿಕೊಂಡ `ಆರ್ ಸಿಬಿಯನ್’

`ಈ ಸಲ ಕಪ್ ನಮ್ಮದಾಗ್ಲಿ’ ಅಂತಾ ಹರಕೆ ಕಟ್ಟಿಕೊಂಡ `ಆರ್ ಸಿಬಿಯನ್’

ಚಿತ್ರದುರ್ಗ : ಚಿತ್ರದುರ್ಗದ ಹಿರಿಯೂರಿನ ಆರ್ ಸಿಬಿ ಅಭಿಮಾನಿಯೊಬ್ಬ ಈ ಬಾರಿಯ ಐಪಿಎಲ್ ನಲ್ಲಿ ಆರ್ ಸಿಬಿ ಕಪ್ ಗೆಲ್ಲಲಿ ಅಂತಾ ದೇವರ ಮೊರೆ ಹೋಗಿದ್ದಾನೆ.

ಹೌದು..! ಹಿರಿಯೂರಿನ ತೇರುಮಲ್ಲೇಶ್ವರ ಸ್ವಾಮಿ ರಥೋತ್ಸವದ ವೇಳೆ ಬೇಡಿಕೆಯನ್ನು ಇಡೇರಿಸುವಂತೆ ತೇರಿಗೆ ಬಾಳೆಹಣ್ಣನ್ನು ಎಸೆದು ಹರಕೆ ಕಟ್ಟಿಕೊಳ್ಳುವುದು ವಾಡಿಕೆಯಾಗಿದೆ.

ಈ ಹಿನ್ನೆಲೆ ಇಲ್ಲಿನ ಆರ್ ಸಿಬಿ ಅಭಿಮಾನಿ ತೇರಿಗೆ ಬಾಳೆಹಣ್ಣು ಮತ್ತು 10 ರೂ. ನೋಟಿನ ಮೇಲೆ ಜೈ ಆರ್ ಸಿಬಿ ಅಂತಾ ಬರೆದು ಹರಕೆ ಕಟ್ಟಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

`ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ನೆಮ್ಮದಿ ತರುವ ಸುದ್ದಿ’

`ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ನೆಮ್ಮದಿ ತರುವ ಸುದ್ದಿ’

ಬೆಂಗಳೂರು : 2019 20ನೇ ಸಾಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಗುಡ್ ನ್ಯೂಸ್ ಕೊಟ್ಟಿದ್ದು, ‘ಹಳೆಯ ಬಸ್ ಪಾಸ್ ಅವಧಿಯನ್ನ ದಿನಾಂಕ 31.03.2021ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಇದೊಂದು ನೆಮ್ಮದಿ ತರುವ ಸುದ್ದಿ. ಸಾರಿಗೆ ಸಚಿವರು ಹಾಗೂ ಅಧಿಕಾರಿಗಳಿಗೆ ನನ್ನ ಧನ್ಯವಾದಗಳು ಅಂತಾ ಬರೆದುಕೊಂಡಿದ್ದಾರೆ.

ಪೊಲೀಸ್ ಜೀಪ್ ನಲ್ಲಿ ಕೆಆರ್ ಎಸ್ ಡ್ಯಾಂ ಮೇಲೆ ಜಾಲಿ ರೈಡ್

ಪೊಲೀಸ್ ಜೀಪ್ ನಲ್ಲಿ ಕೆಆರ್ ಎಸ್ ಡ್ಯಾಂ ಮೇಲೆ ಜಾಲಿ ರೈಡ್

ಮಂಡ್ಯ : ಭದ್ರತೆ ದೃಷ್ಠಿಯಿಂದ ಕೆಆರ್ ಎಸ್ ಡ್ಯಾಂ ಮೇಲೆ ಯಾರೂ ಸಂಚರಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಆದ್ರೆ ಈ ನಿಯಮವನ್ನು ಉಲ್ಲಂಘಿಸಿ ಸರ್ಕಾರಿ ವಾಹನದಲ್ಲಿ ಯುವಕನೊರ್ವ ಕೆ ಆರ್ ಎಸ್ ಡ್ಯಾಂ ಮೇಲೆ ಜಾಲಿ ಡ್ರೈವ್ ಮಾಡಿದ್ದಾನೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.

ಯುವಕನ ಜಾಲಿ ರೈಡ್ ಗೆ ಪೊಲೀಸ್ ಅಧಿಕಾರಿಯೇ ಸಾಥ್ ನೀಡಿದ್ದು, ಯುವಕ ಜೀಪ್ ಚಲಾಯಿಸುತ್ತಿದ್ದರೇ ಪಕ್ಕದಲ್ಲಿ ಕುಳಿತ ಪೊಲೀಸ್ ಅಧಿಕಾರಿ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

ಮಂಗಳೂರು – 93 ಸಿಸಿಟಿವಿ ಕ್ಯಾಮೆರಾಗಳಲ್ಲಿ, ಐದು ಮಾತ್ರ ಕಾರ್ಯನಿರ್ವಹಣೆ

ಮಂಗಳೂರು, ಫೆಬ್ರವರಿ27: ಕಳೆದ ವರ್ಷ ಟ್ರಾಫಿಕ್ ಪೊಲೀಸರು ಸ್ಥಾಪಿಸಿದ 93 ಸಿಸಿಟಿವಿ ಕ್ಯಾಮೆರಾಗಳಲ್ಲಿ, ಐದು ಮಾತ್ರ ಈಗ ಕಾರ್ಯನಿರ್ವಹಿಸುತ್ತಿವೆ.

ಪೊಲೀಸ್ ಅಧಿಕಾರಿಗಳೇ ಕ್ಯಾಮೆರಾಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ ನಂತರ ಮತ್ತು ಈ ಕ್ಯಾಮೆರಾಗಳ ವಾರ್ಷಿಕ ನಿರ್ವಹಣೆಗೆ ಯಾವುದೇ ಕ್ರಮಗಳಿಲ್ಲ ಎಂದು ತಿಳಿದ ನಂತರ ಇದು ಬೆಳಕಿಗೆ ಬಂದಿದೆ.

ಆಯುಕ್ತರು ಈ ವಿಷಯಕ್ಕೆ ಸಂಬಂಧಿಸಿದಂತೆ ಆಯಾ ಗುತ್ತಿಗೆದಾರರಿಗೆ ಪತ್ರ ಬರೆದಿದ್ದಾರೆ.

ಕ್ಯಾಮೆರಾಗಳು ಸೆರೆಹಿಡಿದ ಚಿತ್ರಗಳು ಹಗಲಿನಲ್ಲಿ ಅಸ್ಪಷ್ಟವಾಗಿದೆ ಮತ್ತು ರಾತ್ರಿಯಲ್ಲಿ ಕ್ಯಾಮೆರಾಗಳು ಯಾವುದೇ ಚಿತ್ರಗಳನ್ನು ಸೆರೆಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಪರಿಶೀಲನೆಯಲ್ಲಿ ತಿಳಿದುಬಂದಿದೆ.

ಅಲ್ಲದೆ, ರಸ್ತೆ ಮತ್ತು ಫುಟ್‌ಪಾತ್ ಅಭಿವೃದ್ಧಿ ಕಾರ್ಯಗಳಿಗಾಗಿ ತೆಗೆದುಹಾಕಲಾದ ಸಿಸಿಟಿವಿ ಕ್ಯಾಮೆರಾಗಳನ್ನು ಮರುಸ್ಥಾಪಿಸಲಾಗಿಲ್ಲ. ಲೇಡಿಹಿಲ್ ಮತ್ತು ಲಾಲ್‌ಬಾಗ್ ಜಂಕ್ಷನ್‌ಗಳ ಫುಟ್‌ಪಾತ್‌ನಲ್ಲಿರುವ ಕ್ಯಾಮೆರಾಗಳನ್ನು ಸಹ ತೆಗೆದುಹಾಕಲಾಗಿದೆ. ಆದಾಗ್ಯೂ, ಈಗ ಮರುಸ್ಥಾಪನೆ ಮಾಡಲಾಗುತ್ತಿದೆ.

ಖಾಸಗಿ ಆಸ್ತಿಗಳಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳ ರಿಸೀವರ್‌ಗಳನ್ನು ಸ್ಥಳೀಯರು ತೆಗೆದುಹಾಕಿದ್ದು, ಇದು ಸಂಚಾರ ಪೊಲೀಸ್ ಇಲಾಖೆಗೆ ತೊಂದರೆ ತಂದಿದೆ.

ಲಕ್ಕವಳ್ಳಿ | ರಕ್ತದಾನ ಮಾಡಿ ಮಾದರಿಯಾದ ಪಿಎಸ್ ಐ ಮೇಘ

ಲಕ್ಕವಳ್ಳಿ | ರಕ್ತದಾನ ಮಾಡಿ ಮಾದರಿಯಾದ ಪಿಎಸ್ ಐ ಮೇಘ

ಚಿಕ್ಕಮಗಳೂರು : ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವ ಮೂಲಕ ಯುವ ಪೀಳಿಗೆಯರಿಗೆ ಪಿಎಸ್ ಐ ಮೇಘ ಟಿ ಎನ್ ಯುವ ಪೀಳಿಗೆಯರಿಗೆ ಮಾದರಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಸ್ಪೂರ್ತಿ ಸೇವಾ ಸಂಸ್ಥೆ ವತಿಯಿಂದ ಜಿಲ್ಲಾ ಮೆಗ್ಗಾನ್ ಭೋಧಕ ಆಸ್ಪತ್ರೆ ರಕ್ತನಿಧಿ ಹಾಗೂ ಪ್ರಾಥಮಿಕ ಆಗೋಗ್ಯ ಕೇಂದ್ರ ಲಕ್ಕವಳ್ಳಿ ಇವರ ಸಹಯೋಗದೊಂದಿಗೆ ಒಂದು ದಿನದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಕರ್ತವ್ಯದಲ್ಲಿದ್ದ ಪಿಎಸ್ ಐ ಮೇಘ ಅವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.

ಇನ್ನು ಈ ಶಿಬಿರಕ್ಕೆ ಮುಖ್ಯ ಅಥಿತಿಯಾಗಿ ಬಂದಿದ್ದ ತರೀಕೆರೆ ಶಾಸಕ ಡಿ ಎಸ್ ಸುರೇಶ್ ರವರು ಪಿಎಸ್ ಐ ಮೇಘ ಅವರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಲ್ಲದೇ, ರಕ್ತದಾನಿಗಳಿಗೆ ಫಲಹಾರ ವಿತರಣೆಯನ್ನು ಮಾಡಿದ್ದಾರೆ.

ಈ ಶಿಬಿರಕ್ಕೆ ಊರಿನ 80 ಕ್ಕೂ ಅಧಿಕ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ್ದು ಮಹಿಳೆಯರು ಮತ್ತು ಹಿರಿಯರು ಹೆಚ್ಚಾಗಿ ರಕ್ತದಾನ ಮಾಡಿದ್ದು ವಿಶೇಷತೆಯಾಗಿತ್ತು.

 

 

Tags: karntakaMetroState News
ShareTweetSendShare
Join us on:

Related Posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram