Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದ ಪ್ರಮುಖ ಸುದ್ದಿಗಳು : LATEST UPDATES

Namratha Rao by Namratha Rao
February 28, 2021
in Newsbeat, State, ರಾಜ್ಯ
weekend curfew in bangalore latest news today saaksha tv
Share on FacebookShare on TwitterShare on WhatsappShare on Telegram

ರಾಜ್ಯದ ಪ್ರಮುಖ ಸುದ್ದಿಗಳು : LATEST UPDATES

ಪೂರ್ಣ ಸುದ್ದಿಗಳನ್ನು ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

ಮಾರ್ಚ್ 27ರಂದು ಕರ್ನಾಟಕ ಬಂದ್

ಮಾರ್ಚ್ 27ರಂದು ಕರ್ನಾಟಕ ಬಂದ್

Related posts

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

October 2, 2023
ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

October 2, 2023

ಬೆಂಗಳೂರು : ಬೆಲೆ ಏರಿಕೆ ವಿರೋಧಿಸಿ ಹಾಗೂ ತಮಿಳುನಾಡು ಕೈಗೆತ್ತಿಕೊಂಡಿರುವ ಕಾವೇರಿ ನೀರಾವರಿ ಯೋಜನೆಗಳನ್ನು ಕೈ ಬಿಡುವಂತೆ ಒತ್ತಾಯಿಸಿ ಮಾರ್ಚ್ 27 ರಂದು ಕರ್ನಾಟಕ ಬಂದ್ ನಡೆಸಲು ಕನ್ನಡ ಒಕ್ಕೂಟ ಮುಂದಾಗಿದೆ. ಬೆಲೆ ಏರಿಕೆ ಮತ್ತು ತಮಿಳುನಾಡು ಕಾವೇರಿ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ತಮಿಳುನಾಡಿನ ಕಾವೇರಿ ನದಿ ಜೋಡಣೆಯಿಂದಾಗಿ ಕರ್ನಾಟಕಕ್ಕೆ ಭಾರಿ ನಷ್ಟವಾಗುತ್ತದೆ. ಹೀಗಾಗಿ ಕರ್ನಾಟಕ ಸರ್ಕಾರ ಪ್ರಧಾನಿ ಅವರನ್ನು ಭೇಟಿ ಮಾಡಿ ಕಾಮಗಾರಿಗೆ ತಡೆ ತರಬೇಕು ಎಂದು ಮನವಿ ಮಾಡಿಕೊಂಡರು.

`ಈ ಸಲ ಕಪ್ ನಮ್ಮದಾಗ್ಲಿ’ ಅಂತಾ ಹರಕೆ ಕಟ್ಟಿಕೊಂಡ `ಆರ್ ಸಿಬಿಯನ್’

`ಈ ಸಲ ಕಪ್ ನಮ್ಮದಾಗ್ಲಿ’ ಅಂತಾ ಹರಕೆ ಕಟ್ಟಿಕೊಂಡ `ಆರ್ ಸಿಬಿಯನ್’

ಚಿತ್ರದುರ್ಗ : ಚಿತ್ರದುರ್ಗದ ಹಿರಿಯೂರಿನ ಆರ್ ಸಿಬಿ ಅಭಿಮಾನಿಯೊಬ್ಬ ಈ ಬಾರಿಯ ಐಪಿಎಲ್ ನಲ್ಲಿ ಆರ್ ಸಿಬಿ ಕಪ್ ಗೆಲ್ಲಲಿ ಅಂತಾ ದೇವರ ಮೊರೆ ಹೋಗಿದ್ದಾನೆ.

ಹೌದು..! ಹಿರಿಯೂರಿನ ತೇರುಮಲ್ಲೇಶ್ವರ ಸ್ವಾಮಿ ರಥೋತ್ಸವದ ವೇಳೆ ಬೇಡಿಕೆಯನ್ನು ಇಡೇರಿಸುವಂತೆ ತೇರಿಗೆ ಬಾಳೆಹಣ್ಣನ್ನು ಎಸೆದು ಹರಕೆ ಕಟ್ಟಿಕೊಳ್ಳುವುದು ವಾಡಿಕೆಯಾಗಿದೆ.

ಈ ಹಿನ್ನೆಲೆ ಇಲ್ಲಿನ ಆರ್ ಸಿಬಿ ಅಭಿಮಾನಿ ತೇರಿಗೆ ಬಾಳೆಹಣ್ಣು ಮತ್ತು 10 ರೂ. ನೋಟಿನ ಮೇಲೆ ಜೈ ಆರ್ ಸಿಬಿ ಅಂತಾ ಬರೆದು ಹರಕೆ ಕಟ್ಟಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

`ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ನೆಮ್ಮದಿ ತರುವ ಸುದ್ದಿ’

`ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ನೆಮ್ಮದಿ ತರುವ ಸುದ್ದಿ’

ಬೆಂಗಳೂರು : 2019 20ನೇ ಸಾಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಗುಡ್ ನ್ಯೂಸ್ ಕೊಟ್ಟಿದ್ದು, ‘ಹಳೆಯ ಬಸ್ ಪಾಸ್ ಅವಧಿಯನ್ನ ದಿನಾಂಕ 31.03.2021ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಇದೊಂದು ನೆಮ್ಮದಿ ತರುವ ಸುದ್ದಿ. ಸಾರಿಗೆ ಸಚಿವರು ಹಾಗೂ ಅಧಿಕಾರಿಗಳಿಗೆ ನನ್ನ ಧನ್ಯವಾದಗಳು ಅಂತಾ ಬರೆದುಕೊಂಡಿದ್ದಾರೆ.

ಪೊಲೀಸ್ ಜೀಪ್ ನಲ್ಲಿ ಕೆಆರ್ ಎಸ್ ಡ್ಯಾಂ ಮೇಲೆ ಜಾಲಿ ರೈಡ್

ಪೊಲೀಸ್ ಜೀಪ್ ನಲ್ಲಿ ಕೆಆರ್ ಎಸ್ ಡ್ಯಾಂ ಮೇಲೆ ಜಾಲಿ ರೈಡ್

ಮಂಡ್ಯ : ಭದ್ರತೆ ದೃಷ್ಠಿಯಿಂದ ಕೆಆರ್ ಎಸ್ ಡ್ಯಾಂ ಮೇಲೆ ಯಾರೂ ಸಂಚರಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಆದ್ರೆ ಈ ನಿಯಮವನ್ನು ಉಲ್ಲಂಘಿಸಿ ಸರ್ಕಾರಿ ವಾಹನದಲ್ಲಿ ಯುವಕನೊರ್ವ ಕೆ ಆರ್ ಎಸ್ ಡ್ಯಾಂ ಮೇಲೆ ಜಾಲಿ ಡ್ರೈವ್ ಮಾಡಿದ್ದಾನೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.

ಯುವಕನ ಜಾಲಿ ರೈಡ್ ಗೆ ಪೊಲೀಸ್ ಅಧಿಕಾರಿಯೇ ಸಾಥ್ ನೀಡಿದ್ದು, ಯುವಕ ಜೀಪ್ ಚಲಾಯಿಸುತ್ತಿದ್ದರೇ ಪಕ್ಕದಲ್ಲಿ ಕುಳಿತ ಪೊಲೀಸ್ ಅಧಿಕಾರಿ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

ಮಂಗಳೂರು – 93 ಸಿಸಿಟಿವಿ ಕ್ಯಾಮೆರಾಗಳಲ್ಲಿ, ಐದು ಮಾತ್ರ ಕಾರ್ಯನಿರ್ವಹಣೆ

ಮಂಗಳೂರು, ಫೆಬ್ರವರಿ27: ಕಳೆದ ವರ್ಷ ಟ್ರಾಫಿಕ್ ಪೊಲೀಸರು ಸ್ಥಾಪಿಸಿದ 93 ಸಿಸಿಟಿವಿ ಕ್ಯಾಮೆರಾಗಳಲ್ಲಿ, ಐದು ಮಾತ್ರ ಈಗ ಕಾರ್ಯನಿರ್ವಹಿಸುತ್ತಿವೆ.

ಪೊಲೀಸ್ ಅಧಿಕಾರಿಗಳೇ ಕ್ಯಾಮೆರಾಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ ನಂತರ ಮತ್ತು ಈ ಕ್ಯಾಮೆರಾಗಳ ವಾರ್ಷಿಕ ನಿರ್ವಹಣೆಗೆ ಯಾವುದೇ ಕ್ರಮಗಳಿಲ್ಲ ಎಂದು ತಿಳಿದ ನಂತರ ಇದು ಬೆಳಕಿಗೆ ಬಂದಿದೆ.

ಆಯುಕ್ತರು ಈ ವಿಷಯಕ್ಕೆ ಸಂಬಂಧಿಸಿದಂತೆ ಆಯಾ ಗುತ್ತಿಗೆದಾರರಿಗೆ ಪತ್ರ ಬರೆದಿದ್ದಾರೆ.

ಕ್ಯಾಮೆರಾಗಳು ಸೆರೆಹಿಡಿದ ಚಿತ್ರಗಳು ಹಗಲಿನಲ್ಲಿ ಅಸ್ಪಷ್ಟವಾಗಿದೆ ಮತ್ತು ರಾತ್ರಿಯಲ್ಲಿ ಕ್ಯಾಮೆರಾಗಳು ಯಾವುದೇ ಚಿತ್ರಗಳನ್ನು ಸೆರೆಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಪರಿಶೀಲನೆಯಲ್ಲಿ ತಿಳಿದುಬಂದಿದೆ.

ಅಲ್ಲದೆ, ರಸ್ತೆ ಮತ್ತು ಫುಟ್‌ಪಾತ್ ಅಭಿವೃದ್ಧಿ ಕಾರ್ಯಗಳಿಗಾಗಿ ತೆಗೆದುಹಾಕಲಾದ ಸಿಸಿಟಿವಿ ಕ್ಯಾಮೆರಾಗಳನ್ನು ಮರುಸ್ಥಾಪಿಸಲಾಗಿಲ್ಲ. ಲೇಡಿಹಿಲ್ ಮತ್ತು ಲಾಲ್‌ಬಾಗ್ ಜಂಕ್ಷನ್‌ಗಳ ಫುಟ್‌ಪಾತ್‌ನಲ್ಲಿರುವ ಕ್ಯಾಮೆರಾಗಳನ್ನು ಸಹ ತೆಗೆದುಹಾಕಲಾಗಿದೆ. ಆದಾಗ್ಯೂ, ಈಗ ಮರುಸ್ಥಾಪನೆ ಮಾಡಲಾಗುತ್ತಿದೆ.

ಖಾಸಗಿ ಆಸ್ತಿಗಳಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳ ರಿಸೀವರ್‌ಗಳನ್ನು ಸ್ಥಳೀಯರು ತೆಗೆದುಹಾಕಿದ್ದು, ಇದು ಸಂಚಾರ ಪೊಲೀಸ್ ಇಲಾಖೆಗೆ ತೊಂದರೆ ತಂದಿದೆ.

ಲಕ್ಕವಳ್ಳಿ | ರಕ್ತದಾನ ಮಾಡಿ ಮಾದರಿಯಾದ ಪಿಎಸ್ ಐ ಮೇಘ

ಲಕ್ಕವಳ್ಳಿ | ರಕ್ತದಾನ ಮಾಡಿ ಮಾದರಿಯಾದ ಪಿಎಸ್ ಐ ಮೇಘ

ಚಿಕ್ಕಮಗಳೂರು : ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವ ಮೂಲಕ ಯುವ ಪೀಳಿಗೆಯರಿಗೆ ಪಿಎಸ್ ಐ ಮೇಘ ಟಿ ಎನ್ ಯುವ ಪೀಳಿಗೆಯರಿಗೆ ಮಾದರಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಸ್ಪೂರ್ತಿ ಸೇವಾ ಸಂಸ್ಥೆ ವತಿಯಿಂದ ಜಿಲ್ಲಾ ಮೆಗ್ಗಾನ್ ಭೋಧಕ ಆಸ್ಪತ್ರೆ ರಕ್ತನಿಧಿ ಹಾಗೂ ಪ್ರಾಥಮಿಕ ಆಗೋಗ್ಯ ಕೇಂದ್ರ ಲಕ್ಕವಳ್ಳಿ ಇವರ ಸಹಯೋಗದೊಂದಿಗೆ ಒಂದು ದಿನದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಕರ್ತವ್ಯದಲ್ಲಿದ್ದ ಪಿಎಸ್ ಐ ಮೇಘ ಅವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.

ಇನ್ನು ಈ ಶಿಬಿರಕ್ಕೆ ಮುಖ್ಯ ಅಥಿತಿಯಾಗಿ ಬಂದಿದ್ದ ತರೀಕೆರೆ ಶಾಸಕ ಡಿ ಎಸ್ ಸುರೇಶ್ ರವರು ಪಿಎಸ್ ಐ ಮೇಘ ಅವರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಲ್ಲದೇ, ರಕ್ತದಾನಿಗಳಿಗೆ ಫಲಹಾರ ವಿತರಣೆಯನ್ನು ಮಾಡಿದ್ದಾರೆ.

ಈ ಶಿಬಿರಕ್ಕೆ ಊರಿನ 80 ಕ್ಕೂ ಅಧಿಕ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ್ದು ಮಹಿಳೆಯರು ಮತ್ತು ಹಿರಿಯರು ಹೆಚ್ಚಾಗಿ ರಕ್ತದಾನ ಮಾಡಿದ್ದು ವಿಶೇಷತೆಯಾಗಿತ್ತು.

 

 

Tags: karntakaMetroState News
ShareTweetSendShare
Join us on:

Related Posts

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

by Honnappa Lakkammanavar
October 2, 2023
0

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಕಾರಿಗೆ (Electric car) ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಮಧ್ಯಾಹ್ನ...

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

by Honnappa Lakkammanavar
October 2, 2023
0

ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಸ್ಥರು ನೋವಿನಲ್ಲಿಯೂ ಕಣ್ಣು ದಾನ ಮಾಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಪ್ರೇಮಾ ಅವರ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ....

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

by Honnappa Lakkammanavar
October 1, 2023
0

ಬೆಂಗಳೂರು : ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಹಾಕಿದ್ದ ಹೀಲಿಯಂ ಬಲೂನ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಬಲೂನ್ ಗಳು ವಿದ್ಯುತ್...

Free Ration

ಈ ತಿಂಗಳಲ್ಲೇ ಅನ್ನಭಾಗ್ಯ

by Honnappa Lakkammanavar
October 1, 2023
0

ಈ ತಿಂಗಳಲ್ಲಿಯೇ ಅನ್ನಭಾಗ್ಯ ಯೋಜನೆಯ ಪೂರ್ಣ ಪ್ರಮಾಣದ ಅಕ್ಕಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಕೆ ಎಚ್ ಮುನಿಯಪ್ಪ...

ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ

ಬಂದ್ ನಿಂದ ರಾಜ್ಯಕ್ಕೆ ಕೋಟಿ ಕೋಟಿ ರೂ. ಲಾಸ್

by Honnappa Lakkammanavar
September 30, 2023
0

ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ಒಂದೇ ವಾರದಲ್ಲಿ ಎರಡು ಬಾರಿ ಬಂದ್ ಗೆ ಕರೆ ನೀಡಿದ್ದವು. ಹೀಗಾಗಿ ಕೋಟಿ ಕೋಟಿ ರೂ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

October 3, 2023
ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

October 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram