ಬೆಳಗಾವಿ : ಎಲ್ಲ ಪಕ್ಷಗಳಲ್ಲಿ ಮುಸುಕಿನ ಗುದ್ದಾಟವಿದೆ. ಬಿಜೆಪಿಯಲ್ಲಿಯೂ ನಮಗಿಂತ ಹೆಚ್ಚು ಮುಸುಕಿನ ಗುದ್ದಾಟವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ( Sathish Jarakiholi) ಹೇಳಿದ್ದಾರೆ. ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಬಿಜೆಪಿ ಪರ ಪ್ರಚಾರ ಪ್ರಕಾಶ್ ಹುಕ್ಕೇರಿ (Prakash hukkeri ) ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ, ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂಬ ಪ್ರಕಾಶ್ ಹುಕ್ಕೇರಿ ಹೇಳಿಕೆ ನನಗೆ ಅಚ್ಚರಿ ತಂದಿದೆ.
ಕಾಂಗ್ರೆಸ್ ಪಕ್ಷದಲ್ಲಿದ್ದು ಬೇರೆ ಪಕ್ಷದ ಪರ ಹೇಳಿಕೆ ಕೊಡೋದು ಎಷ್ಟರ ಮಟ್ಟಿಗೆ ಸರಿ. ಪ್ರಕಾಶ್ ಹುಕ್ಕೇರಿ ಆತ್ಮಾವಲೋಕನ ಮಾಡಿಕೊಳ್ಳೋದು ಮುಖ್ಯ. ಒಂದು ಪಕ್ಷದಲ್ಲಿದ್ದು ಬೇರೆ ಪಕ್ಷದ ಪರ ಹೇಳಿಕೆ ಕೊಡೋದು ಸರಿಯಲ್ಲ.
ಪ್ರಕಾಶ್ ಹುಕ್ಕೇರಿ ಕಾಂಗ್ರೆಸ್ನಲ್ಲಿ ಎಲ್ಲ ಸ್ಥಾನಗಳನ್ನು ಎಂಜಾಯ್ ಮಾಡಿದ್ದಾರೆ. ಜಿ.ಪಂ. ಸದಸ್ಯನಿಂದ ಹಿಡಿದು, ಎಂಎಲ್ಎ, ಎಂಪಿ, ಎಂಎಲ್ಸಿ, ಮಂತ್ರಿ ಎಲ್ಲವೂ ಆಗಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ಹೀರೋನೂ ಅಲ್ಲ, ವಿಲನ್ನೂ ಅಲ್ಲ : ಸೋಮಶೇಖರ್
ಎಲ್ಲದಕ್ಕೂ ಕಾದು ನೋಡೋಣ ಎಂದರು. ಹೈಕಮಾಂಡ್ ಸಹ ಪ್ರಕಾಶ್ ಹುಕ್ಕೇರಿ ಹೇಳಿಕೆಯನ್ನು ಗಮನಿಸಿದೆ. ಪ್ರಕಾಶ್ ಹುಕ್ಕೇರಿ ವಿರುದ್ಧ ಕ್ರಮ ಕೈಗೊಳ್ಳುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ನ ಮುಂದಿನ ಸಿಎಂ ಅಭ್ಯರ್ಥಿ ಚರ್ಚೆ ಬಗ್ಗೆ ಮಾತನಾಡಿ, ಎಲ್ಲ ಪಕ್ಷಗಳಲ್ಲಿ ಮುಸುಕಿನ ಗುದ್ದಾಟವಿದೆ. ಬಿಜೆಪಿಯಲ್ಲಿಯೂ ನಮಗಿಂತ ಹೆಚ್ಚು ಮುಸುಕಿನ ಗುದ್ದಾಟವಿದೆ. ಒಂದು ಸಮಸ್ಯೆ ಬಗೆಹರಿಸುವಷ್ಟರಲ್ಲಿ ಮತ್ತೊಂದು ಬರುತ್ತದೆ. ಅದಕ್ಕೆ ರಾಜಕೀಯ ಅನ್ನೋದು.
ಸಿಎಂ ಅಭ್ಯರ್ಥಿಯ ಬಗ್ಗೆ ಯಾರು ಏನೇ ಹೇಳಿದರೂ ಅದಕ್ಕೆ ಬೆಲೆಯಿಲ್ಲ. 113 ಶಾಸಕರು ಆಯ್ಕೆಯಾಗಿ ಅವರ ಅಭಿಪ್ರಾಯ ಸಂಗ್ರಹಿಸಿಯೇ ಹೈಕಮಾಂಡ್ ನಿರ್ಧರಿಸುತ್ತದೆ.
ಇದು ನಮ್ಮ ಪಕ್ಷದಲ್ಲಿರುವ ವ್ಯವಸ್ಥೆ. ಈಗ ಈ ವಿಷಯ ಅಪ್ರಸ್ತುತ. ಈ ಬಗ್ಗೆ ಹೇಳುವ ಅವಶ್ಯಕತೆ ಇಲ್ಲ. ಯಾರಿದ್ದರೂ ಪಕ್ಷ ಸಂಘಟನೆ ಮಾಡಬೇಕು.
ಕಾಂಗ್ರೆಸ್ ಅಧಿಕಾರಕ್ಕೆ ತರಲು ಪ್ರಯತ್ನ ಮಾಡಬೇಕು. ಅದೊಂದೇ ನಮ್ಮ ಹತ್ತಿರ ಇರುವ ಆಯ್ಕೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










